AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nigeria Boat Capsized: ಮದುವೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ದೋಣಿ ಮಗುಚಿ 103 ಮಂದಿ ಸಾವು

ಆಫ್ರಿಕಾದ ಉತ್ತರ ನೈಜೀರಿಯಾದಲ್ಲಿ ಭೀಕರ ದೋಣಿ ಅಪಘಾತ ಸಂಭವಿಸಿದೆ. ಮಾಹಿತಿ ಪ್ರಕಾರ, ಈ ದೋಣಿ ಅಪಘಾತದಲ್ಲಿ ಸುಮಾರು 103 ಮಂದಿ ಸಾವನ್ನಪ್ಪಿದ್ದಾರೆ.

Nigeria Boat Capsized: ಮದುವೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ದೋಣಿ ಮಗುಚಿ 103 ಮಂದಿ ಸಾವು
ದೋಣಿImage Credit source: ABP Live
ನಯನಾ ರಾಜೀವ್
|

Updated on: Jun 14, 2023 | 8:44 AM

Share

ಆಫ್ರಿಕಾದ ಉತ್ತರ ನೈಜೀರಿಯಾದಲ್ಲಿ ಭೀಕರ ದೋಣಿ ದುರಂತ ಸಂಭವಿಸಿದೆ. ಮಾಹಿತಿ ಪ್ರಕಾರ, ಈ ದೋಣಿ ಅಪಘಾತದಲ್ಲಿ ಸುಮಾರು 103 ಮಂದಿ ಸಾವನ್ನಪ್ಪಿದ್ದಾರೆ. ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ (AP) ಪ್ರಕಾರ, ಉತ್ತರ ನೈಜೀರಿಯಾದಿಂದ 103 ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಈ ವೇಳೆ ದೋಣಿ ಮಗುಚಿದ ಘಟನೆ ನಡೆದಿದೆ. ಎಪಿ ಪ್ರಕಾರ, 100 ಕ್ಕೂ ಹೆಚ್ಚು ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಇದೇ ವೇಳೆ ಹಠಾತ್ ಓವರ್ ಲೋಡ್ ನಿಂದಾಗಿ ಬೋಟ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಸುಮಾರು 103 ಮಂದಿ ಸಾವನ್ನಪ್ಪಿದ್ದಾರೆ.

ಇತರ ಜನರನ್ನು ರಕ್ಷಿಸಲು ಪೊಲೀಸರು ಮತ್ತು ಸ್ಥಳೀಯ ಜನರು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಮಾಹಿತಿಯ ಪ್ರಕಾರ, ಅಪಘಾತದ ನಂತರ ಅನೇಕ ಮೃತದೇಹಗಳು ಪತ್ತೆಯಾಗಿವೆ. ಇದೇ ವೇಳೆ ಇತರರಿಗಾಗಿ ಹುಡುಕಾಟ ನಡೆಯುತ್ತಿದೆ.

ಸಿಎನ್ಎನ್ ವರದಿಯ ಪ್ರಕಾರ, ಈ ದೋಣಿ ಅಪಘಾತ ನೈಜರ್ ನದಿಯಲ್ಲಿ ಸಂಭವಿಸಿದೆ. ದೋಣಿಯಲ್ಲಿ ಸುಮಾರು 300 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಈ ಘಟನೆ ಸೋಮವಾರ ನಡೆದಿದೆ ಎಂದು ಕಪಾಡಾದ ಸಾಂಪ್ರದಾಯಿಕ ಮುಖ್ಯಸ್ಥ ಅಬ್ದುಲ್ ಗಣ ಲುಕ್ಪಾಡಾ ಹೇಳಿದ್ದಾರೆ. ಮದುವೆಯಲ್ಲಿ ಭಾಗವಹಿಸಿದ್ದ ಅತಿಥಿಗಳು ನೈಜರ್ ನದಿಯನ್ನು ದಾಟಲು ಇಗ್ಬೋಟಿ ಗ್ರಾಮದಿಂದ ದೋಣಿ ಹತ್ತಿದ್ದಾರೆ ಎಂದು ಅಬ್ದುಲ್ ಗಣ ಲುಕ್ಪಾಡಾ ಹೇಳಿದರು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಕಪಡಾದಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಮದುವೆ ಸಮಯದಲ್ಲಿಯೇ ಮಳೆ ಸುರಿಯಲಾರಂಭಿಸಿತು ಎಂದು ತಿಳಿಸಿದರು. ಇದರಿಂದಾಗಿ ಜನರು ದೋಣಿಯಲ್ಲಿ ಹಿಂತಿರುಗಲು ನಿರ್ಧರಿಸಿದರು. ದೋಣಿಯಲ್ಲಿ ಪುರುಷರು ಮತ್ತು ಮಹಿಳೆಯರು ಸೇರಿದಂತೆ ಸುಮಾರು 300 ಜನರಿದ್ದರು ಎಂದು ಹೇಳಿದರು.

ಸೋಮವಾರ ಬೆಳಗಿನ ಜಾವ ಮೂರರಿಂದ ನಾಲ್ಕರ ನಡುವೆ ಈ ಅವಘಡ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಬೋಟ್ ನೀರಿನಲ್ಲಿದ್ದ ಮರದ ಕಾಂಡಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿಸಿದರು. ನನ್ನ ಮಾಹಿತಿಯ ಪ್ರಕಾರ ಕೇವಲ 53 ಜನರನ್ನು  ಮಾತ್ರ ಉಳಿಸಲು ಸಾಧ್ಯವಾಯಿತು ಎಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ