Nigeria Benue Massacre: ಬಂದೂಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ, 100 ಮಂದಿ ಸಾವು
ಮಧ್ಯ ನೈಜೀರಿಯಾದ ಬೆನ್ಯೂ ರಾಜ್ಯದ ಯೆಲೆವಾಟಾ ಗ್ರಾಮದಲ್ಲಿ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ ನೈಜೀರಿಯಾ ತಿಳಿಸಿದೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ ಬೆಳಗಿನ ಜಾವದವರೆಗೆ ಮಧ್ಯ ನೈಜೀರಿಯಾದ ಬೆನ್ಯೂ ರಾಜ್ಯದ ಯೆಲೆವಾಟಾ ಗ್ರಾಮದಲ್ಲಿ ದಾಳಿ ನಡೆದಿದೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್ ನಲ್ಲಿ ಹಂಚಿಕೊಂಡ ಮಾಹಿತಿ ಪ್ರಕಾರ, ಅನೇಕ ಮಂದಿ ಇನ್ನೂ ಕಾಣೆಯಾಗಿದ್ದಾರೆ.

ಮಧ್ಯ ನೈಜೀರಿಯಾದ ಬೆನ್ಯೂ ರಾಜ್ಯದ ಯೆಲೆವಾಟಾ ಗ್ರಾಮದಲ್ಲಿ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ ನೈಜೀರಿಯಾ ತಿಳಿಸಿದೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ ಬೆಳಗಿನ ಜಾವದವರೆಗೆ ಮಧ್ಯ ನೈಜೀರಿಯಾದ ಬೆನ್ಯೂ ರಾಜ್ಯದ ಯೆಲೆವಾಟಾ ಗ್ರಾಮದಲ್ಲಿ ದಾಳಿ ನಡೆದಿದೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್ ನಲ್ಲಿ ಹಂಚಿಕೊಂಡ ಮಾಹಿತಿ ಪ್ರಕಾರ, ಅನೇಕ ಮಂದಿ ಇನ್ನೂ ಕಾಣೆಯಾಗಿದ್ದಾರೆ, ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ ಮತ್ತು ಅವರಿಗೆ ಸಾಕಷ್ಟು ವೈದ್ಯಕೀಯ ಆರೈಕೆ ಕೂಡ ಸಿಕ್ಕಿಲ್ಲ ಎಂದು ಆಮ್ನೆಸ್ಟಿ ಹೇಳಿದೆ. ಹೇಳಿಕೆಯ ಪ್ರಕಾರ, ಅನೇಕ ಕುಟುಂಬಗಳನ್ನು ಕೋಣೆಗಳಲ್ಲಿ ಬಂಧಿಸಿ ಜೀವಂತವಾಗಿ ಸುಟ್ಟುಹಾಕಲಾಗಿದೆ.
ಬೆನ್ಯೂ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಬೆನ್ಯೂ ರಾಜ್ಯದಲ್ಲಿ ಹಿಂಸಾತ್ಮಕ ದಾಳಿಗಳಲ್ಲಿ ಆತಂಕಕಾರಿ ಹೆಚ್ಚಳ ಕಂಡುಬಂದಿದೆ ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ ಹೇಳಿದೆ. ಬಂದೂಕುಧಾರಿಗಳು ಯಾವುದೇ ಭಯವಿಲ್ಲದೆ ಜನರನ್ನು ಕೊಲ್ಲುತ್ತಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಂಸ್ಥೆ ಹೇಳಿದೆ. ಈ ದಾಳಿಗಳಿಂದಾಗಿ, ಜನರು ದೊಡ್ಡ ಪ್ರಮಾಣದಲ್ಲಿ ಸ್ಥಳಾಂತರಗೊಳ್ಳುತ್ತಿದ್ದಾರೆ ಮತ್ತು ಆಹಾರ ಭದ್ರತೆಯೂ ಅಪಾಯದಲ್ಲಿದೆ, ಏಕೆಂದರೆ ಸತ್ತವರಲ್ಲಿ ಹೆಚ್ಚಿನವರು ರೈತರಾಗಿದ್ದಾರೆ.
ಮತ್ತಷ್ಟು ಓದಿ: Manipur Violence: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಕರ್ಫ್ಯೂ, ಇಂಟರ್ನೆಟ್ ಬಂದ್
ನೈಜೀರಿಯಾದ ಮಧ್ಯಭಾಗದಲ್ಲಿ ಒಂದು ಮುಸ್ಲಿಂ ಹಾಗೂ ಮತ್ತೊಂದು ಕಡೆ ಕ್ರಿಶ್ಚಿಯನ್ನರ ಪ್ರಾಬಲ್ಯವಿದೆ. ಕುರಿಗಾಹಿಗಳು ತಮ್ಮ ದನಗಳಿಗೆ ಮೇವುಗಳನ್ನು ಹುಡುಕುತ್ತಿದ್ದರೆ, ಕೃಷಿ ಭೂಮಿಯ ಅವಶ್ಯಕತೆಯಿಂದಾಗಿ ರೈತರು ಅವುಗಳನ್ನು ವಿರೋಧಿಸುತ್ತಾರೆ. ಈ ಘರ್ಷಣೆಗಳು ಹೆಚ್ಚಾಗಿ ಜನಾಂಗೀಯ ಮತ್ತು ಧಾರ್ಮಿಕ ಉದ್ವಿಗ್ನತೆಗಳಾಗಿ ಬದಲಾಗುತ್ತಿದೆ.
ಕೇವಲ ಒಂದು ತಿಂಗಳ ಹಿಂದೆ, ಬೆನ್ಯೂನ ಗ್ವೆರ್ ವೆಸ್ಟ್ ಜಿಲ್ಲೆಯಲ್ಲಿ ನಡೆಸಿದ ದಾಳಿಯಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದರು. ಶೋಧನಾ ಸಂಸ್ಥೆ ಎಸ್ಬಿಎಂ ಇಂಟೆಲಿಜೆನ್ಸ್ ಪ್ರಕಾರ, 2019 ರಿಂದ, ಇಂತಹ ಹಿಂಸಾತ್ಮಕ ಘರ್ಷಣೆಗಳಲ್ಲಿ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 2.2 ಮಿಲಿಯನ್ ಜನರು ತಮ್ಮ ಮನೆಗಳನ್ನು ತೊರೆಯುವಂತೆ ಒತ್ತಾಯಿಸಲಾಗಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




