AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವೀಡನ್‌ನ ಒರೆಬ್ರೊ ಬಳಿ ವಿಮಾನ ಪತನ; 8 ಸ್ಕೈಡೈವರ್ಸ್, ಓರ್ವ ಪೈಲಟ್ ದುರ್ಮರಣ

ಡಿಎಚ್‌ಸಿ -2 ಟರ್ಬೊ ಬೀವರ್ ಎಂಬ ವಿಮಾನದಲ್ಲಿ ಎಂಟು ಸ್ಕೈಡೈವರ್‌ಗಳು ಮತ್ತು ಒಬ್ಬ ಪೈಲಟ್‌ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವೀಡನ್‌ನ ಒರೆಬ್ರೊ ಬಳಿ ವಿಮಾನ ಪತನ; 8 ಸ್ಕೈಡೈವರ್ಸ್, ಓರ್ವ ಪೈಲಟ್ ದುರ್ಮರಣ
ಸ್ವೀಡನ್‌ನ ಒರೆಬ್ರೊ ಬಳಿ ವಿಮಾನ ಪತನ
TV9 Web
| Edited By: |

Updated on:Jul 09, 2021 | 7:09 AM

Share

ಗುರುವಾರ ಸ್ವೀಡನ್‌ನ ಒರೆಬ್ರೊ ಬಳಿ ವಿಮಾನ ಪತನವಾಗಿದೆ. ವಿಮಾನದಲ್ಲಿದ್ದ 8 ಸ್ಕೈಡೈವರ್ಸ್, ಓರ್ವ ಪೈಲಟ್ ಸೇರಿ ಎಲ್ಲಾ ಒಂಬತ್ತು ಜನರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ವೀಡಿಷ್ ಪೊಲೀಸರು ತಿಳಿಸಿದ್ದಾರೆ.

“ಇದು ತುಂಬಾ ತೀವ್ರವಾದ ಅಪಘಾತ” ಎಂದು ಸ್ವೀಡಿಷ್ ಪೊಲೀಸರು ತಮ್ಮ ವೆಬ್‌ಸೈಟ್‌ನಲ್ಲಿ ತಿಳಿಸಿದ್ದಾರೆ. “ಅಪಘಾತಕ್ಕೀಡಾದ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.” ಡಿಎಚ್‌ಸಿ -2 ಟರ್ಬೊ ಬೀವರ್ ಎಂಬ ವಿಮಾನದಲ್ಲಿ ಎಂಟು ಸ್ಕೈಡೈವರ್‌ಗಳು ಮತ್ತು ಒಬ್ಬ ಪೈಲಟ್‌ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಟೇಕ್‌ಆಫ್ ಆದ ಸ್ವಲ್ಪ ಸಮಯದ ನಂತರ ಅದು ಒರೆಬ್ರೊ ವಿಮಾನ ನಿಲ್ದಾಣದ ರನ್ ವೇ ಮೇಲೆ ಚಲಿಸುವಾಗ ಅಪ್ಪಳಿಸಿದೆ. ಈ ಪರಿಣಾಮಕ್ಕೆ ಬೆಂಕಿ ಕಾಣಿಸಿಕೊಂಡಿದೆ.

ಒರೆಬ್ರೊದಲ್ಲಿ ನಡೆದ ವಿಮಾನ ಅಪಘಾತದ ಬಗ್ಗೆ ನನಗೆ ದುರಂತ ಮಾಹಿತಿ ಬಂದಿರುವುದು ಬಹಳ ದುಃಖದ ಸಂಗತಿ ಎಂದು ಪ್ರಧಾನಿ ಸ್ಟೀಫನ್ ಲೋಫ್ವೆನ್ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ. ನನ್ನ ಆಲೋಚನೆಗಳು ಈ ಕಷ್ಟದ ಸಮಯದಲ್ಲಿ ಬಲಿಯಾದವರ ಕುಟುಂಬಗಳು ಮತ್ತು ಪ್ರೀತಿಪಾತ್ರರ ಜೊತೆ ಇವೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದೇ ರೀತಿಯ ಅಪಘಾತದಲ್ಲಿ, 2019 ರಲ್ಲಿ ಉತ್ತರ ಸ್ವೀಡನ್‌ನಲ್ಲಿ ಒಂಬತ್ತು ಜನರು ಸ್ಕೈಡೈವರ್‌ಗಳನ್ನು ಹೊತ್ತ ವಿಮಾನ ಟೇಕ್‌ಆಫ್ ಆದ ಕೆಲವೇ ಸಮಯದಲ್ಲಿ ಅಪಘಾತಕ್ಕೀಡಾಗಿತು. ಇನ್ನು ಈ ಬಗ್ಗೆ ತನಿಖೆ ಕೈಗೊಂಡಾಗ ವಿಮಾನವನ್ನು ಸರಿಯಾಗಿ ಲೋಡ್ ಮಾಡದಿದ್ದ ಕಾರಣ ಈ ಅಪಘಾತ ಸಂಭವಿಸಿತ್ತು ಎಂದ ವರದಿಗಳಲ್ಲಿ ತಿಳಿದುಬಂದಿತ್ತು.

ಇದನ್ನೂ ಓದಿ: ಫಿಲಿಪೈನ್ಸ್​​ ಸೇನಾ ವಿಮಾನ ಅಪಘಾತ; 17 ಯೋಧರ ಮರಣ, 40 ಮಂದಿಯ ರಕ್ಷಣೆ-ಸಾವಿನ ಸಂಖ್ಯೆ ಏರುವ ಸಾಧ್ಯತೆ

Published On - 7:05 am, Fri, 9 July 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ