ಸ್ವೀಡನ್‌ನ ಒರೆಬ್ರೊ ಬಳಿ ವಿಮಾನ ಪತನ; 8 ಸ್ಕೈಡೈವರ್ಸ್, ಓರ್ವ ಪೈಲಟ್ ದುರ್ಮರಣ

ಡಿಎಚ್‌ಸಿ -2 ಟರ್ಬೊ ಬೀವರ್ ಎಂಬ ವಿಮಾನದಲ್ಲಿ ಎಂಟು ಸ್ಕೈಡೈವರ್‌ಗಳು ಮತ್ತು ಒಬ್ಬ ಪೈಲಟ್‌ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವೀಡನ್‌ನ ಒರೆಬ್ರೊ ಬಳಿ ವಿಮಾನ ಪತನ; 8 ಸ್ಕೈಡೈವರ್ಸ್, ಓರ್ವ ಪೈಲಟ್ ದುರ್ಮರಣ
ಸ್ವೀಡನ್‌ನ ಒರೆಬ್ರೊ ಬಳಿ ವಿಮಾನ ಪತನ
Follow us
| Updated By: ಆಯೇಷಾ ಬಾನು

Updated on:Jul 09, 2021 | 7:09 AM

ಗುರುವಾರ ಸ್ವೀಡನ್‌ನ ಒರೆಬ್ರೊ ಬಳಿ ವಿಮಾನ ಪತನವಾಗಿದೆ. ವಿಮಾನದಲ್ಲಿದ್ದ 8 ಸ್ಕೈಡೈವರ್ಸ್, ಓರ್ವ ಪೈಲಟ್ ಸೇರಿ ಎಲ್ಲಾ ಒಂಬತ್ತು ಜನರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ವೀಡಿಷ್ ಪೊಲೀಸರು ತಿಳಿಸಿದ್ದಾರೆ.

“ಇದು ತುಂಬಾ ತೀವ್ರವಾದ ಅಪಘಾತ” ಎಂದು ಸ್ವೀಡಿಷ್ ಪೊಲೀಸರು ತಮ್ಮ ವೆಬ್‌ಸೈಟ್‌ನಲ್ಲಿ ತಿಳಿಸಿದ್ದಾರೆ. “ಅಪಘಾತಕ್ಕೀಡಾದ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.” ಡಿಎಚ್‌ಸಿ -2 ಟರ್ಬೊ ಬೀವರ್ ಎಂಬ ವಿಮಾನದಲ್ಲಿ ಎಂಟು ಸ್ಕೈಡೈವರ್‌ಗಳು ಮತ್ತು ಒಬ್ಬ ಪೈಲಟ್‌ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಟೇಕ್‌ಆಫ್ ಆದ ಸ್ವಲ್ಪ ಸಮಯದ ನಂತರ ಅದು ಒರೆಬ್ರೊ ವಿಮಾನ ನಿಲ್ದಾಣದ ರನ್ ವೇ ಮೇಲೆ ಚಲಿಸುವಾಗ ಅಪ್ಪಳಿಸಿದೆ. ಈ ಪರಿಣಾಮಕ್ಕೆ ಬೆಂಕಿ ಕಾಣಿಸಿಕೊಂಡಿದೆ.

ಒರೆಬ್ರೊದಲ್ಲಿ ನಡೆದ ವಿಮಾನ ಅಪಘಾತದ ಬಗ್ಗೆ ನನಗೆ ದುರಂತ ಮಾಹಿತಿ ಬಂದಿರುವುದು ಬಹಳ ದುಃಖದ ಸಂಗತಿ ಎಂದು ಪ್ರಧಾನಿ ಸ್ಟೀಫನ್ ಲೋಫ್ವೆನ್ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ. ನನ್ನ ಆಲೋಚನೆಗಳು ಈ ಕಷ್ಟದ ಸಮಯದಲ್ಲಿ ಬಲಿಯಾದವರ ಕುಟುಂಬಗಳು ಮತ್ತು ಪ್ರೀತಿಪಾತ್ರರ ಜೊತೆ ಇವೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದೇ ರೀತಿಯ ಅಪಘಾತದಲ್ಲಿ, 2019 ರಲ್ಲಿ ಉತ್ತರ ಸ್ವೀಡನ್‌ನಲ್ಲಿ ಒಂಬತ್ತು ಜನರು ಸ್ಕೈಡೈವರ್‌ಗಳನ್ನು ಹೊತ್ತ ವಿಮಾನ ಟೇಕ್‌ಆಫ್ ಆದ ಕೆಲವೇ ಸಮಯದಲ್ಲಿ ಅಪಘಾತಕ್ಕೀಡಾಗಿತು. ಇನ್ನು ಈ ಬಗ್ಗೆ ತನಿಖೆ ಕೈಗೊಂಡಾಗ ವಿಮಾನವನ್ನು ಸರಿಯಾಗಿ ಲೋಡ್ ಮಾಡದಿದ್ದ ಕಾರಣ ಈ ಅಪಘಾತ ಸಂಭವಿಸಿತ್ತು ಎಂದ ವರದಿಗಳಲ್ಲಿ ತಿಳಿದುಬಂದಿತ್ತು.

ಇದನ್ನೂ ಓದಿ: ಫಿಲಿಪೈನ್ಸ್​​ ಸೇನಾ ವಿಮಾನ ಅಪಘಾತ; 17 ಯೋಧರ ಮರಣ, 40 ಮಂದಿಯ ರಕ್ಷಣೆ-ಸಾವಿನ ಸಂಖ್ಯೆ ಏರುವ ಸಾಧ್ಯತೆ

Published On - 7:05 am, Fri, 9 July 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್