AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್ ಉಚ್ಛ ನ್ಯಾಯಾಲಯಕ್ಕೆ ನೀರವ್ ಮೋದಿ; ಭಾರತ ಹಸ್ತಾಂತರಕ್ಕೆ ತಡೆ ಕೋರಿ ಅರ್ಜಿ

ನೀರವ್​ ಮೋದಿ ಪ್ರಕಾರ, ಭಾರತದಲ್ಲಿ ನ್ಯಾಯಯುತ ವಿಚಾರಣೆ ನಡೆಯುವುದಿಲ್ಲ ಮತ್ತು ರಾಜಕೀಯ ಪಿತೂರಿಯಿಂದ ತನ್ನನ್ನು ಗುರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಭಾರತದಲ್ಲಿನ ಜೈಲುಗಳ ಕಳಪೆ ಪರಿಸ್ಥಿತಿಗಳನ್ನೂ ಅ ವರು ಉಲ್ಲೇಖಿಸಿದ್ದಾರೆ ಮತ್ತು ಅವರ ವಿರುದ್ಧದ ಸಾಕ್ಷ್ಯಗಳು ದುರ್ಬಲವಾಗಿವೆ ಎಂದು ಹೇಳಿದ್ದಾರೆ.

ಲಂಡನ್ ಉಚ್ಛ ನ್ಯಾಯಾಲಯಕ್ಕೆ ನೀರವ್ ಮೋದಿ; ಭಾರತ ಹಸ್ತಾಂತರಕ್ಕೆ ತಡೆ ಕೋರಿ ಅರ್ಜಿ
ನೀರವ್​ ಮೋದಿ ( ಸಂಗ್ರಹ ಚಿತ್ರ)
ಡಾ. ಭಾಸ್ಕರ ಹೆಗಡೆ
| Edited By: |

Updated on: May 01, 2021 | 11:45 AM

Share

ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ ಕೋಟ್ಯಾಂತರ ರೂಪಾಯಿ ಮೋಸ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಆರೋಪ ಎದುರಿಸುತ್ತಿರುವ ಉದ್ಯಮಿ, ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕಡತಕ್ಕೆ ಬ್ರಿಟಿಶ್ ಗೃಹ ಸಚಿವೆ ಪ್ರೀತಿ ಪಟೇಲ್ ಸಹಿ ಹಾಕಿದ್ದಾರೆ. ಆದರೆ, ಕೊನೆಯ ಪ್ರಯತ್ನ ಎಂಬಂತೆ, ಮೋದಿ ಈಗ ಅಲ್ಲಿನ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ತನ್ನನ್ನು ಭಾರತಕ್ಕೆ ವರ್ಗಾಯಿಸಬಾರದು ಎಂದು ಕೋರಿಕೊಂಡಿದ್ದಾರೆ. ಮೋದಿ ಅವರು ಯುಕೆ ಹೈಕೋರ್ಟ್‌ನಲ್ಲಿ ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಮೇಲ್ಮನವಿ ಸಲ್ಲಿಸಲು ತಮ್ಮ ಆರಂಭಿಕ ಅರ್ಜಿ ಬುಧವಾರ ಸಲ್ಲಿಸಿದ್ದಾರೆ ಎಂದು ಅವರಿಗೆ ಪರಿಚಯವಿರುವ ಮೂಲಗಳು ಶನಿವಾರ ತಿಳಿಸಿವೆ.

ನೀರವ್ ಮೋದಿಯವರ ಮನವಿಯು ಫೆಬ್ರವರಿ 25 ರಂದು ವೆಸ್ಟ್ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿದೆ, ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ನಿರ್ದೇಶಿಸಿ ಮತ್ತು ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರು ಏಪ್ರಿಲ್ 15 ರಂದು ಅನುಮೋದನೆ ನೀಡಿದರು. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಪ್ರಕರಣದಲ್ಲಿ ಮೋದಿ ಅವರನ್ನು ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಹಿಡಿದ ಎರಡು ತಿಂಗಳ ನಂತರ ಪಟೇಲ್ ಮೋದಿಯನ್ನು ಹಸ್ತಾಂತರಿಸಲು ಅನುಮೋದನೆ ನೀಡಿದ್ದರು.

ನೀರವ್​ ಮೋದಿ ನೀಡುವ ಕಾರಣಗಳೇನು?

ಅವರ ಕಾನೂನು ತಂಡದ ಪ್ರಕಾರ, ಮೇಲ್ಮನವಿಗಾಗಿ ಪರಿಪೂರ್ಣ (fool proof) ಸಾಕ್ಷ್ಯಾಧಾರಗಳನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಶೀಘ್ರದಲ್ಲೇ ಅಧಿಕೃತ ಮನವಿಯನ್ನು ಸಲ್ಲಿಸಲಾಗುವುದು. ಮೇಲ್ಮನವಿಗೆ ಬೇಕಾಗುವ ಸಾಕ್ಷ್ಯಾಧಾರಗಳು ಇವೆ ಎಂದು ಅವರು ಹೇಳಿದ್ದಾರೆ. ಮೋದಿ ಅವರ ಪ್ರಕಾರ, ಭಾರತದಲ್ಲಿ ನ್ಯಾಯಯುತ ವಿಚಾರಣೆ ನಡೆಯುವುದಿಲ್ಲ ಮತ್ತು ರಾಜಕೀಯ ಪಿತೂರಿಯಿಂದ ತನ್ನನ್ನು ಗುರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಭಾರತದಲ್ಲಿನ ಜೈಲುಗಳ ಕಳಪೆ ಪರಿಸ್ಥಿತಿಗಳನ್ನೂ ಅವರು ಉಲ್ಲೇಖಿಸಿದ್ದಾರೆ ಮತ್ತು ಅವರ ವಿರುದ್ಧದ ಸಾಕ್ಷ್ಯಗಳು ದುರ್ಬಲವಾಗಿವೆ ಎಂದು ಹೇಳಿದ್ದಾರೆ.

ಅವರ ಕಾನೂನು ತಂಡದ ಪ್ರಕಾರ, ಮೇಲ್ಮನವಿಗಾಗಿ ಪರಿಪೂರ್ಣ (fool proof) ಸಾಕ್ಷ್ಯಾಧಾರಗಳನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಶೀಘ್ರದಲ್ಲೇ ಅಧಿಕೃತ ಮನವಿಯನ್ನು ಸಲ್ಲಿಸಲಾಗುವುದು. ಮೇಲ್ಮನವಿಗೆ ಬೇಕಾಗುವ ಪ್ರಾರಂಭಿಕ ಸಾಕ್ಷ್ಯಾಧಾರಗಳು ಇವೆ ಎಂದು ಅವರು ಹೇಳಿದ್ದಾರೆ.

ವೆಸ್ಟ್​ಮಿನಿಸ್ಟ್​ರ್​ ಜಿಲ್ಲಾ ನ್ಯಾಯಾಧೀಶ ಸ್ಯಾಮ್ ಗೂಸ್​ ಅವರು ತಮ್ಮ ಹಸ್ತಾಂತರದ ಆದೇಶದಲ್ಲಿಮೋದಿ ಅವರು ತಮ್ಮ ಸಹೋದರ ನೇಹಾಲ್ ಮೋದಿ ಮತ್ತು ಇತರರೊಂದಿಗೆ ಸಾರ್ವಜನಿಕ ವಲಯದ ಬ್ಯಾಂಕ್​ನ್ನು ವಂಚಿಸಿದ್ದಾರೆ ಮತ್ತು ಪಿತೂರಿ ನಡೆಸಿದ್ದಾರೆ ಮತ್ತೂ ಸಾಕ್ಷ್ಯಗಳನ್ನು ನಾಶಮಾಡಲು ಮತ್ತು ಸಾಕ್ಷಿಗಳನ್ನು ಬೆದರಿಸಲು ಅವರು ಪ್ರಯತ್ನಿಸಿದ್ದು ಮೇಲ್ನೋಟಕ್ಕೆ ಕಂಡು ಬಂದಿದೆ. ದುಬೈ ಮತ್ತು ಹಾಂಗ್ ಕಾಂಗ್ ಮೂಲದ ಡಮ್ಮಿ ಕಂಪನಿಗಳು ಮುತ್ತುಗಳು, ವಜ್ರಗಳು ಮತ್ತು ಚಿನ್ನದ ವ್ಯಾಪಾರ ಮತ್ತು ವ್ಯವಹಾರ ಮಾಡಿದ್ದು ನಿಜವಲ್ಲ ಮತ್ತು ಮಾರಾಟ-ಖರೀದಿ / ರಫ್ತು-ಆಮದು ಸೋಗಿನಲ್ಲಿ ಬಂದ ಹಣವನ್ನು ವರ್ಗಾಯಿಸಲು ಕಂಪನಿಗಳನ್ನು ಬಳಸಲಾಗುತ್ತಿತ್ತು ಗೂಸ್​ ಹೇಳಿದ್ದರು.

ಇದನ್ನೂ ಓದಿ:

ನೀರವ್​ ಮೋದಿ ಹಗರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರಿಯೇ ಪ್ರಮುಖ ಸಾಕ್ಷಿ

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

(Nirav Modi approaches UK High Court against his extradition to India in PNB fraud case)

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!