AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ರಾನ್ ಖಾನ್ ಸದ್ಯಕ್ಕೆ ಸೇಫ್; ಅವಿಶ್ವಾಸ ನಿರ್ಣಯ ವಜಾಗೊಳಿಸಿ ಏಪ್ರಿಲ್ 25ರವರೆಗೆ ಪಾಕಿಸ್ತಾನದ ಸಂಸತ್ ಕಲಾಪ ಮುಂದೂಡಿದ ಸ್ಪೀಕರ್

ವಿದೇಶಿ ಶಕ್ತಿಗಳ ಸಂಚಿನಿಂದ ನನ್ನ ವಿರುದ್ಧ ಅವಿಶ್ವಾಸ ಮಂಡನೆಯಾಗಿತ್ತು. ಕಲಾಪ ಮುಂದೂಡುವ ಮೂಲಕ ಸ್ಪೀಕರ್ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಿದ್ದಾರೆ. ಹೊಸದಾಗಿ ಚುನಾವಣೆ ಎದುರಿಸಿ ಜನಾದೇಶ ಪಡೆದುಕೊಳ್ಳುತ್ತೇವೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಇಮ್ರಾನ್ ಖಾನ್ ಸದ್ಯಕ್ಕೆ ಸೇಫ್;  ಅವಿಶ್ವಾಸ ನಿರ್ಣಯ ವಜಾಗೊಳಿಸಿ ಏಪ್ರಿಲ್ 25ರವರೆಗೆ ಪಾಕಿಸ್ತಾನದ ಸಂಸತ್ ಕಲಾಪ ಮುಂದೂಡಿದ ಸ್ಪೀಕರ್
ಇಮ್ರಾನ್ ಖಾನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Apr 03, 2022 | 1:55 PM

Share

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ (Imran Khan) ವಿರುದ್ಧ ಭಾನುವಾರ ವಿಪಕ್ಷಗಳ ಮಂಡಿಸಿದ್ದ ಅವಿಶ್ವಾಸ ನಿರ್ಣಯ ವಜಾಗೊಳಿಸಿ (No-confidence motion) , ಸ್ಪೀಕರ್ ಸಂಸತ್ ಕಲಾಪ ಏಪ್ರಿಲ್ 25ರ ವರೆಗೆ   ಮುಂದೂಡಿದ್ದಾರೆ. ಕಲಾಪ ಮುಂದೂಡಿಕೆ ಆಗಿರುವುದರಿಂದ ಇಮ್ರಾನ್  ಖಾನ್​ಗೆ ಏಪ್ರಿಲ್ 25ರವರೆಗೆ ಬಹುಮತ ಸಾಬೀತುಪಡಿಸಲು ಕಾಲಾವಕಾಶ ಸಿಕ್ಕಿದೆ. ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ‘ಅಸಂವಿಧಾನಿಕ’ ಎಂದ ಉಪಸಭಾಪತಿ ಖಾಸಿಂ ಖಾನ್ ಸೂರಿ (Qasim Khan Suri) ವಜಾಗೊಳಿಸಿದ್ದಾರೆ. ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಅಸದ್ ಕೈಸರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದ ನಂತರ ಸೂರಿ ಅಧ್ಯಕ್ಷತೆ ವಹಿಸಿದ್ದರು. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್ ಖಾನ್, ಸಂಸತ್ ವಿಸರ್ಜಿಸುವಂತೆ ರಾಷ್ಟ್ರಪತಿಗಳಿಗೆ ಕೇಳಿದ್ದೇನೆ. ಪ್ರಜಾಸತ್ತಾತ್ಮಕ ರೀತಿಯಲ್ಲಿ ಚುನಾವಣೆಗಳು ನಡೆಯಬೇಕು. ಚುನಾವಣೆಗೆ ಸಿದ್ಧರಾಗುವಂತೆ ನಾನು ಪಾಕಿಸ್ತಾನದ ಜನರಿಗೆ ಕರೆ ನೀಡುತ್ತೇನೆ ಎಂದು ಖಾನ್ ಹೇಳಿದ್ದಾರೆ.

ಸಂಸತ್ತು ವಿಸರ್ಜಿಸಲು ಅಧ್ಯಕ್ಷರಿಗೆ ಪ್ರಸ್ತಾವ ಸಲ್ಲಿಸುತ್ತೇನೆ – ಇಮ್ರಾನ್ ಖಾನ್ ವಿದೇಶಿ ಶಕ್ತಿಗಳ ಸಂಚಿನಿಂದ ನನ್ನ ವಿರುದ್ಧ ಅವಿಶ್ವಾಸ ಮಂಡನೆಯಾಗಿತ್ತು. ಕಲಾಪ ಮುಂದೂಡುವ ಮೂಲಕ ಸ್ಪೀಕರ್ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಿದ್ದಾರೆ. ಹೊಸದಾಗಿ ಚುನಾವಣೆ ಎದುರಿಸಿ ಜನಾದೇಶ ಪಡೆದುಕೊಳ್ಳುತ್ತೇವೆ. ಅವರನ್ನು ಯಾರು ಆಳಬೇಕು ಎಂಬುದನ್ನು ಪಾಕಿಸ್ತಾನವೇ ನಿರ್ಧರಿಸಬೇಕು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಸಂಸತ್ತು ವಿಸರ್ಜಿಸುವಂತೆ ಅಧ್ಯಕ್ಷರಿಗೆ  ಪತ್ರ ಬರೆದಿದ್ದೇನೆ. ಪ್ರಜಾಸತ್ತಾತ್ಮಕ ರೀತಿಯಲ್ಲಿ ಚುನಾವಣೆ ನಡೆಯಬೇಕು. ಚುನಾವಣೆಗೆ ಸಿದ್ಧರಾಗುವಂತೆ ಪಾಕಿಸ್ತಾನಕ್ಕೆ ನಾನು ಜನರಿಗೆ ಕರೆ ನೀಡುತ್ತೇನೆ  ಎಂದಿದ್ದಾರೆ ಖಾನ್.

ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ: ಬಿಲಾವಲ್ ಭುಟ್ಟೋ ಜರ್ದಾರಿ “ಸರ್ಕಾರವು ಸಂವಿಧಾನವನ್ನು ಉಲ್ಲಂಘಿಸಿದೆ” ಎಂದು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಹೇಳಿದ್ದಾರೆ. “ಅವರು ಅವಿಶ್ವಾಸ ನಿರ್ಣಯದ ಮೇಲೆ ಮತದಾನಕ್ಕೆ ಅವಕಾಶ ನೀಡಲಿಲ್ಲ. ಸಂಯುಕ್ತ ವಿಪಕ್ಷಗಳು ಸಂಸತ್ತನ್ನು ಬಿಡುತ್ತಿಲ್ಲ. ನಮ್ಮ ವಕೀಲರು ಸುಪ್ರೀಂಕೋರ್ಟ್‌ಗೆ ಹೋಗುತ್ತಿದ್ದಾರೆ. ಪಾಕಿಸ್ತಾನದ ಸಂವಿಧಾನವನ್ನು ರಕ್ಷಿಸಲು, ಎತ್ತಿಹಿಡಿಯಲು, ರಕ್ಷಿಸಲು ಮತ್ತು ಜಾರಿಗೆ ತರಲು ನಾವು ಎಲ್ಲಾ ಸಂಸ್ಥೆಗಳಿಗೆ ಕರೆ ನೀಡುತ್ತೇವೆ ಎಂದಿದ್ದಾರೆ ಜರ್ದಾರಿ.

ನ್ಯಾಷನಲ್ ಅಸೆಂಬ್ಲಿಯಲ್ಲಿ ವಿಪಕ್ಷಗಳ ಧರಣಿ ಅವಿಶ್ವಾಸ ನಿರ್ಣಯವನ್ನು ಡೆಪ್ಯುಟಿ ಸ್ಪೀಕರ್ ವಜಾಗೊಳಿಸಿದ ನಂತರ ಪ್ರತಿಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಧರಣಿ ನಡೆಸಲಿವೆ ಎಂದು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

342 ಸದಸ್ಯ ಬಲದ ಪಾಕ್ ಸಂಸತ್ತಿನಲ್ಲಿ ಕೇವಲ 164 ಸದಸ್ಯರನ್ನು ಹೊಂದಿರುವ ಇಮ್ರಾನ್ ಖಾನ್ ಅವರ ಆಡಳಿತಾರೂಢ ಪಿಟಿಐ ಮೈತ್ರಿಕೂಟವು ಅಲ್ಪಮತಕ್ಕೆ ಇಳಿದಿದೆ. ಬಹುಮತಕ್ಕೆ 172 ಸದಸ್ಯ ಬಲ ಬೇಕು. ವಿರೋಧ ಪಕ್ಷವು 177 ಸದಸ್ಯ ಬಲವನ್ನು ಹೊಂದಿದ್ದು, ಅವಿಶ್ವಾಸ ಗೊತ್ತುವಳಿಯಲ್ಲಿ ಇಮ್ರಾನ್ ಖಾನ್​ಗೆ ಹಿನ್ನಡೆಯಾಗುವುದು ಬಹುತೇಕ ನಿರೀಕ್ಷಿತ ಎನ್ನಲಾಗಿದೆ. ಆದಾಗ್ಯೂ , ಬಹುಮತ ಸಾಬೀತು ಪಡಿಸಲು ಇಮ್ರಾನ್ ಖಾನ್​​ಗೆ  ಇದೀಗ ಹೆಚ್ಚಿನ ಕಾಲಾವಕಾಶ ಲಭಿಸಿದ್ದು, ಮುಂದೇನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಪಾಕಿಸ್ತಾನ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ: ಕಲಾಪದಿಂದ ದೂರ ಉಳಿದ ಪ್ರಧಾನಿ

Published On - 1:16 pm, Sun, 3 April 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು