AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ

ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ
ಕೊವಿಡ್ ಲಸಿಕೆ
TV9 Web
| Edited By: |

Updated on: Oct 11, 2021 | 12:46 PM

Share

ಡಿಸೆಂಬರ್ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಉದ್ಯೋಗ ನಿರಾಕರಿಸುವುದಾಗಿ ಕೊವಿಡ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನ್ಯೂಜಿಲ್ಯಾಂಡ್ ಸರ್ಕಾರ ತಿಳಿಸಿದೆ. ವೈದ್ಯರು, ದಾದಿಯರು ಸೇರಿದಂತೆ ಆರೊಗ್ಯ ಕ್ಷೇತ್ರದ ಎಲ್ಲ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದೆ ಎಂದು ನ್ಯೂಜಿಲ್ಯಾಂಡ್ ತಿಳಿಸಿದೆ.

ಕೊವಿಡ್ ಸೋಂಕು ಹರಡಬಹುದಾದ ಯಾವುದೇ ಸಾಧ್ಯತೆಗಳನ್ನೂ ಬಿಡುವುದಿಲ್ಲ. ಕೊವಿಡ್ ತಡೆಯಲು ಕೈಗೊಳ್ಳಬಹುದಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುವುದಾಗಿ ಕೊವಿಡ್ 19ಕ್ಕೆ ಸಂಬಂಧಿಸಿದ ಸಚಿವ ಮತ್ತು ಶಿಕ್ಷಣ ಸಚಿವರೂ ಆಗಿರುವ ಕ್ರಿಸ್ ಹಿಪ್ಕಿನ್ಸ್ ಸೂಚಿಸಿದ್ದಾರೆ. ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ ಭಾನುವಾರದವರೆಗೆ ಭಾರತದಲ್ಲಿ 95 ಕೋಟಿಗೂ ಹೆಚ್ಚು ಕೊರೊನಾವೈರಸ್ ಲಸಿಕೆಗಳನ್ನು(coronavirus vaccines) ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya)ಟ್ವಿಟರ್​​​ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು ಭಾರತವು 100 ಕೋಟಿ ಕೊವಿಡ್ -19 ಲಸಿಕೆಗಳನ್ನು ನೀಡಲು ಹತ್ತಿರವಾಗಿದೆ ಎಂದು ಹೇಳಿದರು. “ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ. ಶೀಘ್ರವಾಗಿ ಲಸಿಕೆ ಪಡೆಯಿರಿ ಮತ್ತು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಅದೇ ರೀತಿ ಮಾಡಲು ಪ್ರೋತ್ಸಾಹಿಸಿ!”ಎಂದು ಹೇಳಿದ್ದಾರೆ.

ಇದನ್ನೂ ಓದಿ: 

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ 

Malaria vaccine ಮಕ್ಕಳಿಗಾಗಿ ಪ್ರಪಂಚದ ಮೊದಲ ಮಲೇರಿಯಾ ಲಸಿಕೆಯ ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ