AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ

ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ
ಕೊವಿಡ್ ಲಸಿಕೆ
TV9 Web
| Edited By: |

Updated on: Oct 11, 2021 | 12:46 PM

Share

ಡಿಸೆಂಬರ್ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಉದ್ಯೋಗ ನಿರಾಕರಿಸುವುದಾಗಿ ಕೊವಿಡ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನ್ಯೂಜಿಲ್ಯಾಂಡ್ ಸರ್ಕಾರ ತಿಳಿಸಿದೆ. ವೈದ್ಯರು, ದಾದಿಯರು ಸೇರಿದಂತೆ ಆರೊಗ್ಯ ಕ್ಷೇತ್ರದ ಎಲ್ಲ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದೆ ಎಂದು ನ್ಯೂಜಿಲ್ಯಾಂಡ್ ತಿಳಿಸಿದೆ.

ಕೊವಿಡ್ ಸೋಂಕು ಹರಡಬಹುದಾದ ಯಾವುದೇ ಸಾಧ್ಯತೆಗಳನ್ನೂ ಬಿಡುವುದಿಲ್ಲ. ಕೊವಿಡ್ ತಡೆಯಲು ಕೈಗೊಳ್ಳಬಹುದಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುವುದಾಗಿ ಕೊವಿಡ್ 19ಕ್ಕೆ ಸಂಬಂಧಿಸಿದ ಸಚಿವ ಮತ್ತು ಶಿಕ್ಷಣ ಸಚಿವರೂ ಆಗಿರುವ ಕ್ರಿಸ್ ಹಿಪ್ಕಿನ್ಸ್ ಸೂಚಿಸಿದ್ದಾರೆ. ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ ಭಾನುವಾರದವರೆಗೆ ಭಾರತದಲ್ಲಿ 95 ಕೋಟಿಗೂ ಹೆಚ್ಚು ಕೊರೊನಾವೈರಸ್ ಲಸಿಕೆಗಳನ್ನು(coronavirus vaccines) ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya)ಟ್ವಿಟರ್​​​ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು ಭಾರತವು 100 ಕೋಟಿ ಕೊವಿಡ್ -19 ಲಸಿಕೆಗಳನ್ನು ನೀಡಲು ಹತ್ತಿರವಾಗಿದೆ ಎಂದು ಹೇಳಿದರು. “ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ. ಶೀಘ್ರವಾಗಿ ಲಸಿಕೆ ಪಡೆಯಿರಿ ಮತ್ತು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಅದೇ ರೀತಿ ಮಾಡಲು ಪ್ರೋತ್ಸಾಹಿಸಿ!”ಎಂದು ಹೇಳಿದ್ದಾರೆ.

ಇದನ್ನೂ ಓದಿ: 

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ 

Malaria vaccine ಮಕ್ಕಳಿಗಾಗಿ ಪ್ರಪಂಚದ ಮೊದಲ ಮಲೇರಿಯಾ ಲಸಿಕೆಯ ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್