AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ

ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.

ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ
ಕೊವಿಡ್ ಲಸಿಕೆ
TV9 Web
| Edited By: |

Updated on: Oct 11, 2021 | 12:46 PM

Share

ಡಿಸೆಂಬರ್ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಉದ್ಯೋಗ ನಿರಾಕರಿಸುವುದಾಗಿ ಕೊವಿಡ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನ್ಯೂಜಿಲ್ಯಾಂಡ್ ಸರ್ಕಾರ ತಿಳಿಸಿದೆ. ವೈದ್ಯರು, ದಾದಿಯರು ಸೇರಿದಂತೆ ಆರೊಗ್ಯ ಕ್ಷೇತ್ರದ ಎಲ್ಲ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದೆ ಎಂದು ನ್ಯೂಜಿಲ್ಯಾಂಡ್ ತಿಳಿಸಿದೆ.

ಕೊವಿಡ್ ಸೋಂಕು ಹರಡಬಹುದಾದ ಯಾವುದೇ ಸಾಧ್ಯತೆಗಳನ್ನೂ ಬಿಡುವುದಿಲ್ಲ. ಕೊವಿಡ್ ತಡೆಯಲು ಕೈಗೊಳ್ಳಬಹುದಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುವುದಾಗಿ ಕೊವಿಡ್ 19ಕ್ಕೆ ಸಂಬಂಧಿಸಿದ ಸಚಿವ ಮತ್ತು ಶಿಕ್ಷಣ ಸಚಿವರೂ ಆಗಿರುವ ಕ್ರಿಸ್ ಹಿಪ್ಕಿನ್ಸ್ ಸೂಚಿಸಿದ್ದಾರೆ. ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ ಭಾನುವಾರದವರೆಗೆ ಭಾರತದಲ್ಲಿ 95 ಕೋಟಿಗೂ ಹೆಚ್ಚು ಕೊರೊನಾವೈರಸ್ ಲಸಿಕೆಗಳನ್ನು(coronavirus vaccines) ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya)ಟ್ವಿಟರ್​​​ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು ಭಾರತವು 100 ಕೋಟಿ ಕೊವಿಡ್ -19 ಲಸಿಕೆಗಳನ್ನು ನೀಡಲು ಹತ್ತಿರವಾಗಿದೆ ಎಂದು ಹೇಳಿದರು. “ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ. ಶೀಘ್ರವಾಗಿ ಲಸಿಕೆ ಪಡೆಯಿರಿ ಮತ್ತು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಅದೇ ರೀತಿ ಮಾಡಲು ಪ್ರೋತ್ಸಾಹಿಸಿ!”ಎಂದು ಹೇಳಿದ್ದಾರೆ.

ಇದನ್ನೂ ಓದಿ: 

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ 

Malaria vaccine ಮಕ್ಕಳಿಗಾಗಿ ಪ್ರಪಂಚದ ಮೊದಲ ಮಲೇರಿಯಾ ಲಸಿಕೆಯ ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?