AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೆದುರು ಬಾಗಿದ ಯುಕೆ: ಕೊವಿಶೀಲ್ಡ್​ 2 ಡೋಸ್​ ಲಸಿಕೆ ಪಡೆದು ಬರುವ ಪ್ರಯಾಣಿಕರಿಗೆ ಕ್ವಾರಂಟೈನ್​ ಇಲ್ಲವೆಂದ ಇಂಗ್ಲೆಂಡ್​ ಸರ್ಕಾರ

ಇಂಗ್ಲೆಂಡ್ ಸರ್ಕಾರದ ಮಾರ್ಗಸೂಚಿಗೆ ಸಂಬಂಧಪಟ್ಟಂತೆ ಭಾರತ ಸರ್ಕಾರ ನಿರಂತರ ಮಾತುಕತೆ ನಡೆಸಿದಾಗ್ಯೂ ಕೂಡ ಯುಕೆ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ ಇದ್ದಾಗ ಭಾರತ ಕೂಡ ಇದೇ ನಿಯಮವನ್ನು ಜಾರಿಗೊಳಿಸಿತ್ತು.

ಭಾರತದೆದುರು ಬಾಗಿದ ಯುಕೆ: ಕೊವಿಶೀಲ್ಡ್​ 2 ಡೋಸ್​ ಲಸಿಕೆ ಪಡೆದು ಬರುವ ಪ್ರಯಾಣಿಕರಿಗೆ  ಕ್ವಾರಂಟೈನ್​ ಇಲ್ಲವೆಂದ ಇಂಗ್ಲೆಂಡ್​ ಸರ್ಕಾರ
ಇಂಗ್ಲೆಂಡ್​ ಏರ್​ಪೋರ್ಟ್ ಚಿತ್ರ
TV9 Web
| Updated By: Lakshmi Hegde|

Updated on: Oct 08, 2021 | 10:33 AM

Share

ಭಾರತದ ಕೊವಿಶೀಲ್ಡ್​ ಲಸಿಕೆ (Covishield Vaccine)ಯನ್ನು ನಾವು ಅನುಮೋದಿಸುತ್ತೇವೆ. ಆದರೂ ಭಾರತದಿಂದ ನಮ್ಮ ದೇಶಕ್ಕೆ ಬರುವವರು ಕಡ್ಡಾಯವಾಗಿ 10 ದಿನಗಳ ಕಾಲ ಕ್ವಾರಂಟೈನ್​​ಗೆ ಒಳಗಾಗಬೇಕು ಎಂಬ ನೀತಿಯನ್ನು ಜಾರಿಮಾಡಿದ್ದ ಯುಕೆ (ಇಂಗ್ಲೆಂಡ್​) ಸರ್ಕಾರ ಇದೀಗ ಅದನ್ನು ಹಿಂಪಡೆದಿದೆ. ಅಕ್ಟೋಬರ್​ 11ರಿಂದ ಜಾರಿಗೆ ಬರುವಂತೆ ಹೊಸ ಮಾರ್ಗಸೂಚಿಯನ್ನು ಯುಕೆ ಬಿಡುಗಡೆ ಮಾಡಿದ್ದು, ಕೊವಿಶೀಲ್ಡ್​ ಎರಡೂ ಡೋಸ್​ ಲಸಿಕೆ ಮತ್ತು ಯುಕೆ ಸರ್ಕಾರ (UK Government) ಅನುಮೋದನೆ ನೀಡಿರುವ ಯಾವುದೇ ಲಸಿಕೆಯನ್ನು ಪಡೆದು ಭಾರತದಿಂದ ಇಂಗ್ಲೆಂಡ್​ಗೆ ಬರುವ ಪ್ರಯಾಣಿಕರು ಕ್ವಾರಂಟೈನ್​​ಗೆ ಒಳಗಾಗಬೇಕಿಲ್ಲ ಎಂದು ಸ್ಪಷ್ಟಪಡಿಸಿದೆ.  ಈ ಸಂಬಂಧ ಭಾರತದಲ್ಲಿರುವ ಬ್ರಿಟಿಷ್​ ಹೈಕಮಿಷನರ್​  ಅಲೆಕ್ಸ್​ ಎಲ್ಲಿಸ್​ ಟ್ವೀಟ್​ ಮಾಡಿದ್ದಾರೆ. 

ಈ ಬಗ್ಗೆ ವಿಡಿಯೋವೊಂದನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿರುವ ಅಲೆಕ್ಸ್​ ಎಲ್ಲಿಸ್​, ಭಾರತದ ಕೊವಿಶೀಲ್ಡ್​ ಲಸಿಕೆಯನ್ನು ಎರಡೂ ಡೋಸ್​ ಪಡೆದವರು ಹಾಗೂ ಯುಕೆ ಸರ್ಕಾರ ಅನುಮೋದನೆ ನೀಡಿರುವ ಯಾವುದೇ ಕೊವಿಡ್​ 19 ಲಸಿಕೆ ಪಡೆದವರು ಭಾರತದಿಂದ ಇಂಗ್ಲೆಂಡ್​ಗೆ ಬಂದರೆ ಕ್ವಾರಂಟೈನ್​​ಗೆ ಒಳಗಾಗುವುದು ಬೇಡ ಎಂದಿದ್ದಾರೆ.  ಇನ್ನು ಬ್ರಿಟನ್​ ಸರ್ಕಾರ ಈ ಹಿಂದೆ ಕೊವಿಶೀಲ್ಡ್​ ಲಸಿಕೆಗೆ ಮಾನ್ಯತೆ ನೀಡಲು ಹಿಂದೇಟು ಹಾಕಿತ್ತು. ಆದರೆ ಭಾರತ ತನ್ನು ನಿಲುವನ್ನು ಕಠಿಣವಾಗಿಸಿದ ಮೇಲೆ ಸೆಪ್ಟೆಂಬರ್​ 22ರಂದು ಲಸಿಕೆಗೆ ಅನುಮೋದನೆ ನೀಡಿತ್ತು. ಆದರೆ ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಭಾರತ ನೀಡುತ್ತಿರುವ ಸರ್ಟಿಫಿಕೇಟ್​ ಬಗ್ಗೆ ನಮಗೆ ಆಕ್ಷೇಪವಿದೆ ಎಂದು ಹೇಳಿತ್ತು. ಅದರಲ್ಲಿ ಜನ್ಮದಿನಾಂಕದ ಉಲ್ಲೇಖವಿಲ್ಲ ಎಂದು ಹೇಳಿತ್ತು. ನಂತರ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಆವೃತ್ತಿಯ ಕೊವಿಡ್​ 19 ಲಸಿಕೆಯನ್ನೂ ಭಾರತ ಬಿಡುಗಡೆ ಮಾಡಿತ್ತು. ಅಷ್ಟಾದರೂ ಯುಕೆ ಸರ್ಕಾರ ಭಾರತದ ಪ್ರಯಾಣಿಕರಿಗೆ 10 ದಿನಗಳ ಕಾಲ ಕ್ವಾರಂಟೈನ್​ ಕಡ್ಡಾಯಗೊಳಿಸಿತ್ತು.

ಭಾರತದಿಂದಲೂ ಇದೇ ನಿಯಮ ಜಾರಿ ಇಂಗ್ಲೆಂಡ್ ಸರ್ಕಾರದ ಮಾರ್ಗಸೂಚಿಗೆ ಸಂಬಂಧಪಟ್ಟಂತೆ ಭಾರತ ಸರ್ಕಾರ ನಿರಂತರ ಮಾತುಕತೆ ನಡೆಸಿದಾಗ್ಯೂ ಕೂಡ ಯುಕೆ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ ಇದ್ದಾಗ ಭಾರತ ಕೂಡ ಇದೇ ನಿಯಮವನ್ನು ಜಾರಿಗೊಳಿಸಿತ್ತು. ಇಂಗ್ಲೆಂಡ್​​ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೂ 10 ದಿನಗಳ ಕಾಲ ಕ್ವಾರಂಟೈನ್​ ಕಡ್ಡಾಯ. ಭಾರತ ಪ್ರಯಾಣಕ್ಕೆ 72 ಗಂಟೆ ಮುಂಚಿತವಾಗಿ RT-PCR ಪರೀಕ್ಷೆಗೆ ಒಳಗಾಗಬೇಕು. ಭಾರತಕ್ಕೆ ಬಂದ ತಕ್ಷಣವೇ ಏರ್ ಪೋರ್ಟ್ ನಲ್ಲಿ RT-PCR ಪರೀಕ್ಷೆಗೆ ಒಳಗಾಗಬೇಕು. ಲಸಿಕೆ ಪಡೆದಿರಲಿ, ಪಡೆಯದೇ ಇರಲಿ, RT-PCR ಪರೀಕ್ಷೆ, ಕ್ವಾರಂಟೈನ್ ಕಡ್ಡಾಯ ಎಂದು ಹೇಳಿತ್ತು.

ಭಾರತ ಹಾಕಿ ತಂಡಗಳಿಂದಲೂ ತಿರುಗೇಟು ಈ ಮಧ್ಯೆ ಇನ್ನೊಂದು ಮಹತ್ವದ ಬೆಳವಣಿಗೆಯಾಗಿತ್ತು. ಇಂಗ್ಲೆಂಡ್​​ನ ಬರ್ಮಿಂಗ್​ಹ್ಯಾಂನಲ್ಲಿ ಬರುವ ವರ್ಷದ ಜುಲೈ-ಆಗಸ್ಟ್​​ನಲ್ಲಿ ನಡೆಯಲಿರುವ ಕಾಮನ್​ವೆಲ್ತ್​ ಗೇಮ್ಸ್​​ಗೆ ಭಾರತದ ಹಾಕಿ ತಂಡಗಳನ್ನು (ಪುರುಷ ಮತ್ತು ಮಹಿಳೆ) ಕಳಿಸದೆ ಇರಲು ಭಾರತ ನಿರ್ಧರಿಸಿತ್ತು. ಇದಕ್ಕೆ ಕಾರಣ ಯುಕೆ ವಿಧಿಸಿರುವ ಕ್ವಾರಂಟೈನ್​ ನಿಯಮ ಎಂದೇ ಹೇಳಲಾಗಿತ್ತು. ಅದಕ್ಕೂ ಮೊದಲು ಇಂಗ್ಲೆಂಡ್​ ಭಾರತದಲ್ಲಿ ನಡೆಯಲಿರುವ ಜ್ಯೂನಿಯರ್ ಹಾಕಿ ವರ್ಲ್ಡ್​ಕಪ್​ ಟೂರ್ನಿಯಿಂದ ಹಿಂದೆ ಸರಿದಿತ್ತು. ಅದಕ್ಕೆ ತಿರುಗೇಟು ಎಂಬಂತೆ ಭಾರತ ಹಾಕಿ ತಂಡಗಳು ಕಾಮನ್​ವೆಲ್ತ್​ ಗೇಮ್ಸ್​ನಿಂದ ಹಿಂದೆ ಸರಿದಿದ್ದವು.

ಇದನ್ನೂ ಓದಿ: Coal shortage in RTPS: ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ; ಕತ್ತಲಲ್ಲಿ ಮುಳುಗಲಿದೆ ಅರ್ಧ ರಾಜ್ಯ

ಟ್ವಿಟರ್​ ಬಯೋದಿಂದ ‘ಬಿಜೆಪಿ’ ತೆಗೆದು ಹಾಕಿದ ಸುಬ್ರಹ್ಮಣಿಯನ್ ಸ್ವಾಮಿ; ಕಾರ್ಯಕಾರಿಣಿ ಸಮಿತಿಯಿಂದ ಕೈಬಿಟ್ಟ ಕೆಲವೇ ಕ್ಷಣದಲ್ಲಿ ಬದಲಾವಣೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ