AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Economics Prize 2023: ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

Nobel Economics Prize 2023: ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ
ಕ್ಲಾಡಿಯಾ ಗೋಲ್ಡಿನ್‌
ಅಕ್ಷಯ್​ ಪಲ್ಲಮಜಲು​​
|

Updated on:Oct 09, 2023 | 3:50 PM

Share

ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಆರ್ಥಿಕ ವಿಜ್ಞಾನಕ್ಕೆ 1969 ರಿಂದ 2022 ರವರೆಗೆ ಒಟ್ಟು 54 ನೊಬೆಲ್ ಪ್ರಶಸ್ತಿಗಳನ್ನು ನೀಡಲಾಗಿದೆ. 92 ಪುರಸ್ಕೃತರ ಪೈಕಿ 25 ಮಂದಿ ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. ಇನ್ನು ಮಹಿಳೆಯರ ಪೈಕಿ ಇಬ್ಬರು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. 2009ರಲ್ಲಿ ಎಲಿನಾರ್ ಓಸ್ಟ್ರೋಮ್. 2019ರಲ್ಲಿ ಎಸ್ತರ್ ಡುಫ್ಲೋ. ಇದೀಗ ಈ ಪ್ರಶಸ್ತಿಯನ್ನು ಪಡೆದ ಮೂರನೇ ಮಹಿಳೆ ಎಂಬ ಗೌರವಕ್ಕೆ ಕ್ಲಾಡಿಯಾ ಗೋಲ್ಡಿನ್‌ ಪಾತ್ರರಾಗಿದ್ದಾರೆ.

ನೊಬೆಲ್​​ ಪ್ರಶಸ್ತಿಯನ್ನು ಅಕ್ಟೋಬರ್ 2ರಿಂದ ನೀಡಲಾಗುತ್ತಿದೆ. ಇನ್ನು ಆರ್ಥಿಕ ವಿಜ್ಞಾನ ಕ್ಷೇತ್ರಕ್ಕೆ ಇದು ಈ ವರ್ಷದ ಕೊನೆಯ ಪ್ರಶಸ್ತಿಯಾಗಿದೆ. ಔಷಧ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ, ಮತ್ತು ಶಾಂತಿಗೆ ಸಂಬಂಧಿಸಿದಂತೆ ಈ ವಾರ ನೊಬೆಲ್​​ ಪ್ರಶಸ್ತಿಯನ್ನು ನೀಡಲಾಗಿತ್ತು.

ಕಳೆದ ವರ್ಷದ ಆರ್ಥಿಕ ವಿಜ್ಞಾನಗಳ ಪ್ರಶಸ್ತಿಯನ್ನು ಬೆನ್ ಬರ್ನಾಂಕೆ, ಡೌಗ್ಲಾಸ್ ಡೈಮಂಡ್ ಮತ್ತು ಫಿಲಿಪ್ ಡೈಬ್ವಿಗ್​​ಗೆ ನೀಡಲಾಗಿತ್ತು. ಬ್ಯಾಂಕ್ ವೈಫಲ್ಯಗಳು ಮತ್ತು 2007-2008 ರ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದ ಅಧ್ಯಯನಕ್ಕೆ ಈ ಪ್ರಶಸ್ತಿಯನ್ನು ನೀಡಲಾಗಿತ್ತು.

Published On - 3:36 pm, Mon, 9 October 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!