AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಲಾಲಾ ಯೂಸುಫ್​; ತಾಲಿಬಾನಿಗಳಿಗೂ ಸೆಡ್ಡು ಹೊಡೆದು ಶಿಕ್ಷಣದ ಹಕ್ಕು ಪ್ರತಿಪಾದಿಸಿದ್ದ ದಿಟ್ಟೆ

Malala Yousafzai: ಮಲಾಲಾ ಯೂಸುಫ್​ 1997ರಲ್ಲಿ ಪಾಕಿಸ್ತಾನದ ಮಿಂಗೋರಾ ಎಂಬಲ್ಲಿ ಜನಿಸಿದ್ದಾರೆ. ತಮ್ಮ ಚಿಕ್ಕವಯಸ್ಸಿನಿಂದಲೇ ಹೆಣ್ಣುಮಕ್ಕಳ ಶಿಕ್ಷಣ, ವಿದ್ಯಾಭ್ಯಾಸದ ಹಕ್ಕನ್ನು ಪ್ರತಿಪಾದಿಸುತ್ತ ಬಂದಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಲಾಲಾ ಯೂಸುಫ್​; ತಾಲಿಬಾನಿಗಳಿಗೂ ಸೆಡ್ಡು ಹೊಡೆದು ಶಿಕ್ಷಣದ ಹಕ್ಕು ಪ್ರತಿಪಾದಿಸಿದ್ದ ದಿಟ್ಟೆ
ವೈವಾಹಿಕ ಜೀವನಕ್ಕೆ ಕಾಲಿಟ್ಟ ಮಲಾಲಾ ಯೂಸುಫ್​
TV9 Web
| Updated By: Lakshmi Hegde|

Updated on:Nov 10, 2021 | 11:31 AM

Share

ದೆಹಲಿ: ನೊಬೆಲ್​ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​ ಝಾಯಿ (ಮಲಾಲಾ ಯೂಸುಫ್​-Malala Yousafzai) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮದುವೆಯ ವಿಚಾರವನ್ನು ಹಂಚಿಕೊಂಡಿದ್ದಾರೆ. ಬ್ರಿಟನ್​​ನ ಬರ್ಮಿಂಗ್​ಹ್ಯಾಮ್​​ನಲ್ಲಿ ನಾನು ಮತ್ತು ಅಸ್ಸರ್​ ಮದುವೆಯಾಗಿದ್ದೇವೆ ಎಂದು ಮಲಾಲಾ ತಮ್ಮ ಟ್ವಿಟರ್​​ ಖಾತೆಯಲ್ಲಿ ಫೋಟೋ ಕೂಡ ಶೇರ್​ ಮಾಡಿಕೊಂಡಿದ್ದಾರೆ.

ತಮ್ಮ ನಿಖಾ ಸಮಾರಂಭದ ಬಗ್ಗೆ ಟ್ವೀಟ್ ಮಾಡಿರುವ ಮಲಾಲಾ, ಇಂದು ನನ್ನ ಬದುಕಲ್ಲಿ ಅತ್ಯಮೂಲ್ಯ ದಿನವಾಗಿದೆ. ಅಸ್ಸರ್​ ಮತ್ತು ನಾನು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದೇವೆ. ಬರ್ಮಿಂಗ್​ಹ್ಯಾಂನಲ್ಲಿ ನಾವು ನಮ್ಮ ಕುಟುಂಬದವರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡಿದ್ದೇವೆ. ನಮಗೆ ನಿಮ್ಮೆಲ್ಲರ ಆಶೀರ್ವಾದ ಬೇಕು. ನಾವು ಹೊಸಜೀವನ ಪ್ರಾರಂಭ ಮಾಡಲು ಉತ್ಸುಕರಾಗಿದ್ದೇವೆ. ಇದೊಂದು ರೋಮಾಂಚನಕಾರಿ ಸಂದರ್ಭ ಎಂದು ಹೇಳಿದ್ದಾರೆ.

ಮಲಾಲಾ ಯೂಸುಫ್​ 1997ರಲ್ಲಿ ಪಾಕಿಸ್ತಾನದ ಮಿಂಗೋರಾ ಎಂಬಲ್ಲಿ ಜನಿಸಿದ್ದಾರೆ. ತಮ್ಮ ಚಿಕ್ಕವಯಸ್ಸಿನಿಂದಲೇ ಹೆಣ್ಣುಮಕ್ಕಳ ಶಿಕ್ಷಣ, ವಿದ್ಯಾಭ್ಯಾಸದ ಹಕ್ಕನ್ನು ಪ್ರತಿಪಾದಿಸುತ್ತ ಬಂದಿದ್ದಾರೆ. ಹೆಣ್ಣುಮಕ್ಕಳ ಶಿಕ್ಷಣದ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. 2012ರಲ್ಲಿ ಅಂದರೆ ಅವರಿಗೆ ಕೇವಲ 11ವರ್ಷವಾಗಿದ್ದಾಗ ಒಮ್ಮೆ ಸಾರ್ವಜನಿಕವಾಗಿ ಹೆಣ್ಣುಮಕ್ಕಳ ಶಿಕ್ಷಣ ಹಕ್ಕಿನ ಬಗ್ಗೆ ಮಾತನಾಡುತ್ತಿದ್ದರು. ಆಗ ಅವರಿಗೆ ತಾಲಿಬಾನ್​ ಉಗ್ರರು ಗುಂಡು ಹೊಡೆದಿದ್ದರು. ತಾಲಿಬಾನಿಗಳು ಮೊದಲಿನಿಂದಲೂ ಹೆಣ್ಣುಮಕ್ಕಳು ಶಿಕ್ಷಣ ಕಲಿಯುವುದನ್ನು ವಿರೋಧಿಸುತ್ತಲೇ ಇದ್ದಾರೆ. ಅಂಥ ತಾಲಿಬಾನಿಗಳ ಕ್ರೌರ್ಯಕ್ಕೂ ಹೆದರದೆ ಮಲಾಲಾ ನಿರ್ಭಿಡೆಯಿಂದ ಮಾತನಾಡಿದ್ದರು. ಅಂದು ಗುಂಡೇಟಿನಿಂದ ಗಾಯಗೊಂಡಿದ್ದ ಮಲಾಲಾರನ್ನು ಬರ್ಮಿಂಗ್​ಹ್ಯಾಂ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಗುಣಮುಖರಾದ ಬಳಿಕ ಕೂಡ ಅವರು ಹೆಣ್ಣುಮಕ್ಕಳ ಶಿಕ್ಷಣದ ಬಗೆಗಿನ ಹೋರಾಟವನ್ನೇ ಮುಂದುವರಿಸಿದ್ದಾರೆ.  ಅದಾದ ಬಳಿಕ ಯುಕೆಯಲ್ಲಿಯೇ ವಾಸಿಸುತ್ತಿದ್ದರು.

ಮಲಾಲಾ ಸುಮ್ಮನೆ ಕುಳಿತುಕೊಳ್ಳಲೇ ಇಲ್ಲ. ತಮ್ಮ ತಂದೆಯ ಸಹಾಯದಿಂದ ಮಲಾಲಾ ಫಂಡ್​ ಸ್ಥಾಪಿಸಿದರು. ಪ್ರತಿ ಹುಡುಗಿಯೂ ತಾನು ಕನಸುಕಂಡ ಗುರಿಯನ್ನು ಮುಟ್ಟಬೇಕು ಎಂದು ಹೇಳುತ್ತಿದ್ದ ಅವರು, ಅಂಥ ಹುಡುಗಿಯರಿಗೆ ಹಣದ ಅಗತ್ಯವಿದ್ದರೆ ಈ ಚಾರಿಟಿ ಮೂಲಕ ಮಾಡಲು ಶುರು ಮಾಡಿದರು. ಅವರ ಎಲ್ಲ ಕಾರ್ಯವನ್ನೂ ಗಮನಿಸಿ 2014ರ ಡಿಸೆಂಬರ್​​ನಲ್ಲಿ ನೊಬೆಲ್​ ಶಾಂತಿ ಪುರಸ್ಕಾರ ನೀಡಲಾಯಿತು. ಹೀಗೆ ನೊಬೆಲ್​ ಶಾಂತಿ ಪುರಸ್ಕಾರ ಪಡೆದ ಜಗತ್ತಿನ ಅತ್ಯಂತ ಕಿರಿಯಳು ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. 2020ರಲ್ಲಿ ಆಕ್ಸ್​ಫರ್ಡ್​ ಯೂನಿವರ್ಸಿಟಿಯಲ್ಲಿ ಪದವಿ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ! ಸಂತ್ರಸ್ತೆ ತಾಯಿಯಿಂದ ದೂರು ದಾಖಲು

Published On - 11:30 am, Wed, 10 November 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?