AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize 2025 Winners: ಸುಸುಮು ಕಿಟಗಾವಾ, ರಿಚರ್ಡ್ ರಾಬ್ಸನ್, ಒಮರ್ ಯಾಘಿಗೆ ಈ ಬಾರಿಯ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ನೀಡುವ ನೊಬೆಲ್ ಪ್ರಶಸ್ತಿಯನ್ನು ಆಯಾ ಕ್ಷೇತ್ರದಲ್ಲಿ ಅತ್ಯುನ್ನತ ಗೌರವವೆಂದು ಪರಿಗಣಿಸಲಾಗಿದೆ. ಇಂದು ರಸಾಯನಶಾಸ್ತ್ರ (ಕೆಮಿಸ್ಟ್ರಿ) ಕ್ಷೇತ್ರದ ಸಾಧನೆಗೆ ಯಾರಿಗೆ ನೊಬೆಲ್ ಪ್ರಶಸ್ತಿ ಸಿಕ್ಕಿದೆ ಎಂಬುದನ್ನು ಘೋಷಿಸಲಾಗಿದೆ. ನಾಳೆ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗುತ್ತದೆ. ಶುಕ್ರವಾರ ನೊಬೆಲ್ ಶಾಂತಿ ಪ್ರಶಸ್ತಿ ಮತ್ತು ಅಕ್ಟೋಬರ್ 13ರಂದು ಅರ್ಥಶಾಸ್ತ್ರದಲ್ಲಿ ನೊಬೆಲ್ ಸ್ಮಾರಕ ಪ್ರಶಸ್ತಿಯನ್ನು ಘೋಷಿಸಲಾಗುವುದು. ಈ ಪ್ರಶಸ್ತಿ ಪ್ರಧಾನ ಸಮಾರಂಭವು ಈ ವರ್ಷದ ಡಿಸೆಂಬರ್ 10ರಂದು ನೀಡಲಾಗುವುದು.

Nobel Prize 2025 Winners: ಸುಸುಮು ಕಿಟಗಾವಾ, ರಿಚರ್ಡ್ ರಾಬ್ಸನ್, ಒಮರ್ ಯಾಘಿಗೆ ಈ ಬಾರಿಯ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ
Nobel Prize In Chemistry
ಸುಷ್ಮಾ ಚಕ್ರೆ
|

Updated on:Oct 08, 2025 | 3:36 PM

Share

ನವದೆಹಲಿ, ಅಕ್ಟೋಬರ್ 8: ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ 2025 ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು (Nobel Prize 2025) ಸುಸುಮು ಕಿಟಗಾವಾ, ರಿಚರ್ಡ್ ರಾಬ್ಸನ್ ಮತ್ತು ಒಮರ್ ಎಂ. ಯಾಘಿ ಅವರಿಗೆ ನೀಡಲು ನಿರ್ಧರಿಸಿದೆ. ಮೆಟಲ್ ಆರ್ಗಾನಿಕ್ ಫ್ರೇಮ್​ವರ್ಕ್ ಅಭಿವೃದ್ಧಿ ಕ್ಷೇತ್ರದ ಅವರ ಸಾಧನೆಗಾಗಿ ಈ ಬಾರಿಯ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ.  ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ನೀಡುವ ಮತ್ತು ರಸಾಯನಶಾಸ್ತ್ರ ಕ್ಷೇತ್ರದಲ್ಲಿ ಅತ್ಯುನ್ನತ ಗೌರವವೆಂದು ಪರಿಗಣಿಸಲಾದ ಈ ಪ್ರಶಸ್ತಿಯನ್ನು ಈ ಬಾರಿ ಮೂವರು ವಿಜ್ಞಾನಿಗಳು ಪಡೆದುಕೊಂಡಿದ್ದಾರೆ.

ಕಳೆದ ವರ್ಷದ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿಯು ಕಂಪ್ಯೂಟೇಶನಲ್ ಪ್ರೋಟೀನ್ ವಿನ್ಯಾಸ ಮತ್ತು ಪ್ರೋಟೀನ್ ರಚನೆಯ ಮುನ್ಸೂಚನೆಯಲ್ಲಿನ ಪ್ರಗತಿಯ ಕ್ಷೇತ್ರದಲ್ಲಿನ ಸಾಧನೆಗೆ ನೀಡಲಾಗಿತ್ತು. ಇದು ಔಷಧ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ನಾವೀನ್ಯತೆಗೆ ಉತ್ತೇಜನ ನೀಡಿದ ಕ್ಷೇತ್ರಗಳಾಗಿತ್ತು.

ಇದನ್ನೂ ಓದಿ: Nobel Prize 2025: ಕ್ವಾಂಟಮ್ ಮೆಕ್ಯಾನಿಕ್ಸ್ ಕ್ಷೇತ್ರದ ಸಾಧನೆಗೆ ಅಮೆರಿಕದ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಣೆ

ಅಕ್ಟೋಬರ್ 6ರಂದು, ಶರೀರಶಾಸ್ತ್ರ ಅಥವಾ ವೈದ್ಯಕೀಯ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಮೇರಿ ಬ್ರಂಕೋವ್, ಫ್ರೆಡ್ ರಾಮ್ಸ್‌ಡೆಲ್ ಮತ್ತು ಶಿಮೊನ್ ಸಕಾಗುಚಿ ಅವರಿಗೆ ರೋಗನಿರೋಧಕ ನಿಯಂತ್ರಣದ ಕುರಿತಾದ ಸಂಶೋಧನೆಗಳಿಗಾಗಿ ಘೋಷಿಸಲಾಯಿತು. ಮಂಗಳವಾರ ಭೌತವಿಜ್ಞಾನಿಗಳಾದ ಜಾನ್ ಕ್ಲಾರ್ಕ್, ಮೈಕೆಲ್ ಡೆವೊರೆಟ್ ಮತ್ತು ಜಾನ್ ಮಾರ್ಟಿನಿಸ್ ಅವರು ಎಲೆಕ್ಟ್ರಾನಿಕ್ ಸರ್ಕ್ಯೂಟ್‌ಗಳಲ್ಲಿ ಕ್ವಾಂಟಮ್ ವಿದ್ಯಮಾನಗಳನ್ನು ಪ್ರದರ್ಶಿಸಿದ್ದಕ್ಕಾಗಿ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು.

2025ರ ನೊಬೆಲ್ ಪ್ರಶಸ್ತಿಗೆ 11 ಮಿಲಿಯನ್ ಸ್ವೀಡಿಷ್ ಕ್ರೋನರ್ (SEK) ಮೊತ್ತವನ್ನು ನಿಗದಿಪಡಿಸಲಾಗಿದೆ. ಸ್ವೀಡಿಷ್ ಕ್ರೋನರ್ (SEK) ಎಂಬುದು ನೊಬೆಲ್ ಪ್ರಶಸ್ತಿಗಳನ್ನು ನೀಡುವ ಸ್ವೀಡನ್‌ನ ಕರೆನ್ಸಿಯಾಗಿದೆ. 11 ಮಿಲಿಯನ್ ಸ್ವೀಡಿಷ್ ಕ್ರೋನರ್ ಮೊತ್ತವು ಭಾರತೀಯ ರೂಪಾಯಿಗಳಲ್ಲಿ ಸರಿಸುಮಾರು 10.38 ಕೋಟಿ ರೂ.ಗಳಷ್ಟಾಗುತ್ತದೆ.

ಇದನ್ನೂ ಓದಿ: Nobel Prize 2025: ಕ್ವಾಂಟಮ್ ಮೆಕ್ಯಾನಿಕ್ಸ್ ಕ್ಷೇತ್ರದ ಸಾಧನೆಗೆ ಅಮೆರಿಕದ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಣೆ

ಆಲ್ಫ್ರೆಡ್ ನೊಬೆಲ್ ಯಾರು?:

ಆಲ್ಫ್ರೆಡ್ ನೊಬೆಲ್ ಒಬ್ಬ ಸಂಶೋಧಕ, ಉದ್ಯಮಿ, ವಿಜ್ಞಾನಿ ಮತ್ತು ಉದ್ಯಮಿಯಾಗಿದ್ದು, ಅವರು ಕವಿತೆ ಮತ್ತು ನಾಟಕಗಳನ್ನು ಸಹ ಬರೆದಿದ್ದಾರೆ. ಅವರ ವೈವಿಧ್ಯಮಯ ಆಸಕ್ತಿಗಳು ನೊಬೆಲ್ ಪ್ರಶಸ್ತಿಗಳಲ್ಲಿ ಪ್ರತಿಫಲಿಸುತ್ತವೆ. ಆಲ್ಫ್ರೆಡ್ ನೊಬೆಲ್ ಅವರ ಮರಣದ ನಂತರ ನೊಬೆಲ್ ಪ್ರಶಸ್ತಿಗಳನ್ನು ಸ್ಥಾಪಿಸಲಾಯಿತು. ಆಲ್ಫ್ರೆಡ್ ಭೌತಶಾಸ್ತ್ರ, ರಸಾಯನಶಾಸ್ತ್ರ, ಶರೀರಶಾಸ್ತ್ರ ಅಥವಾ ಔಷಧ, ಸಾಹಿತ್ಯ ಮತ್ತು ಶಾಂತಿ ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ಸ್ಥಾಪಿಸಲು ತಮ್ಮ ಆಸ್ತಿಯ ಹೆಚ್ಚಿನ ಭಾಗವನ್ನು ವಿಲ್​ನಲ್ಲಿ ಮೀಸಲಾಗಿಟ್ಟಿದ್ದರು. ನೊಬೆಲ್ ಪ್ರಶಸ್ತಿ ವೆಬ್‌ಸೈಟ್ ಪ್ರಕಾರ, ಅವರ ಉಯಿಲು ಹಿಂದಿನ ವರ್ಷದಲ್ಲಿ ಮಾನವಕುಲಕ್ಕೆ ಹೆಚ್ಚಿನ ಒಳಿತನ್ನು ಮಾಡಿದವರಿಗೆ ಈ ಪ್ರಶಸ್ತಿಗಳನ್ನು ನೀಡಬೇಕೆಂಬುದನ್ನು ಉಲ್ಲೇಖಿಸಿತ್ತು.

ನೊಬೆಲ್ ಪ್ರಶಸ್ತಿಯ ವಿಭಾಗಗಳು ಭೌತಶಾಸ್ತ್ರ, ರಸಾಯನಶಾಸ್ತ್ರ, ಶರೀರಶಾಸ್ತ್ರ ಅಥವಾ ಔಷಧ, ಸಾಹಿತ್ಯ ಮತ್ತು ಶಾಂತಿ. ಇವುಗಳನ್ನು ಆಲ್ಫ್ರೆಡ್ ನೊಬೆಲ್ ಅವರ ಇಚ್ಛೆಯಂತೆ ನಿಗದಿಪಡಿಸಲಾಗಿದೆ. 1968ರಲ್ಲಿ ಸ್ವೀಡಿಷ್ ರಿಕ್ಸ್‌ಬ್ಯಾಂಕ್ (ಸ್ವೀಡನ್‌ನ ಕೇಂದ್ರ ಬ್ಯಾಂಕ್) ಆಲ್ಫ್ರೆಡ್ ನೊಬೆಲ್ ಅವರ ಸ್ಮರಣಾರ್ಥ ಆರ್ಥಿಕ ವಿಜ್ಞಾನದಲ್ಲಿ ಸ್ವೀಡಿಷ್ ರಿಕ್ಸ್‌ಬ್ಯಾಂಕ್ ಪ್ರಶಸ್ತಿಯನ್ನು ಸ್ಥಾಪಿಸಿತು.

ನೊಬೆಲ್ ಪ್ರಶಸ್ತಿಯನ್ನು ಒಂದು ಕ್ಷೇತ್ರದಲ್ಲಿ ಒಬ್ಬರಿಗೇ ನೀಡಬೇಕೆಂದೇನೂ ಇಲ್ಲ. ನೊಬೆಲ್ ಪ್ರಶಸ್ತಿಯನ್ನು ಮೂರು ವ್ಯಕ್ತಿಗಳು ಹಂಚಿಕೊಳ್ಳಬಹುದು. ನೊಬೆಲ್ ಶಾಂತಿ ಪ್ರಶಸ್ತಿಯ ಸಂದರ್ಭದಲ್ಲಿ, ಅದನ್ನು ಒಂದು ಸಂಸ್ಥೆಗೆ ಸಹ ನೀಡಬಹುದು. ಮೂರು ಜನರಿಗೆ ಮಾತ್ರ ಬಹುಮಾನ ನೀಡಬಹುದೆಂಬ ನಿಯಮವು ನೊಬೆಲ್ ಪ್ರತಿಷ್ಠಾನದ ಕಾನೂನುಗಳಿಂದ ಬಂದಿದೆ. ಇದು ನೊಬೆಲ್ ಅವರ ಇಚ್ಛೆಯ ಉದ್ದೇಶಗಳನ್ನು ಪೂರೈಸುವ ಜವಾಬ್ದಾರಿಯನ್ನು ಹೊಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:32 pm, Wed, 8 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ