AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize in Literature 2021: ತಾಂಜಾನಿಯಾ ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್​ಗೆ ಸಾಹಿತ್ಯ ನೊಬೆಲ್ ಘೋಷಣೆ

Tanzanian novelist Abdulrazak Gurnah: ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ ಮಹತ್ವದ ಈ ಪ್ರಶಸ್ತಿಗೆ ಅಬ್ದುಲ್​ರಜಾಕ್ ಗುರ್ನಾಹ್ ಅವರ ಹೆಸರನ್ನು ಘೋಷಿಸಿದೆ.

Nobel Prize in Literature 2021: ತಾಂಜಾನಿಯಾ ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್​ಗೆ ಸಾಹಿತ್ಯ ನೊಬೆಲ್ ಘೋಷಣೆ
ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್
TV9 Web
| Edited By: |

Updated on:Oct 07, 2021 | 5:31 PM

Share

Nobel Prize in Chemistry 2021: ತಾಂಜಾನಿಯಾ ದೇಶದ ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್ ಅವರಿಗೆ 2021ನೇ ಸಾಲಿನ ಸಾಹಿತ್ಯ ನೊಬೆಲ್ ಪ್ರಶಸ್ತಿ ದೊರೆತಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ ಮಹತ್ವದ ಈ ಪ್ರಶಸ್ತಿಗೆ ಅಬ್ದುಲ್​ರಜಾಕ್ ಗುರ್ನಾಹ್ ಅವರ ಹೆಸರನ್ನು ಘೋಷಿಸಿದೆ.ಗಲ್ಫ್ ದೇಶಗಳಲ್ಲಿನ ನಿರಾಶ್ರಿತರ ಮೇಲೆ ವಸಾಹತುಶಾಹಿಯ ಪರಿಣಾಮ ಮತ್ತು ಅವರ ಸಂಸ್ಕೃತಿಯಲ್ಲಿ ಒಳನುಸುಳುವಿಕೆಯ ಕುರಿತು ರಾಜಿಯಿಲ್ಲದ ಮತ್ತು ಉದಾತ್ತವಾದ ಸಾಹಿತ್ಯ ಸೃಷ್ಟಿಯನ್ನು ಪರಿಗಣಿಸಿ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.

ಅಬ್ದುಲ್​ರಜಾಕ್ ಗುರ್ನಾಹ್ ಅವರು 1948ರಲ್ಲಿ ಜನಿಸಿದ್ದು, ಜಾಂಜಿಬಾರ್​ನ ದ್ವೀಪವೊಂದರಲ್ಲಿ ತಮ್ಮ ಬಾಲ್ಯವನ್ನು ಕಳೆದರು. ಆದರೆ 1960ರ ದಶಕದ ಉತ್ತರಾರ್ಧದಲ್ಲಿ ನಿರಾಶ್ರಿತರಾತಿ ಇಂಗ್ಲೆಂಡ್​ಗೆ ವಲಸೆ ಬಂದರು. ಕಳೆದ ಕೆಲ ವರ್ಷಗಳವರೆಗೂ ಅವರು ಕೆಂಟ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಮತ್ತು ವಸಾಹತು ನಂತರದ ಸಾಹಿತ್ಯದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅವರ ಸಾಹಿತ್ಯದಲ್ಲಿ ನಿರಾಶ್ರಿತ ಜೀವನದ ಸಮಸ್ಯೆಗಳು ಹೇರಳವಾಗಿ ಕಂಡುಬರುತ್ತವೆ. ತಮ್ಮ 21ನೇ ವರ್ಷದಲ್ಲಿ ಇಂಗ್ಲೀಷ್ನಲ್ಲಿ ಬರವಣಿಗೆಯನ್ನು ಆರಂಭಿಸಿದ ಅಬ್ದುಲ್​ರಜಾಕ್ ಗುರ್ನಾಹ್​ ಅದಕ್ಕೂ ಮುನ್ನ ಸ್ವಾಹಿಲಿ ಎಂಬ ಭಾಷೆಯಲ್ಲಿ ಬರೆಯುತ್ತಿದ್ದರು.

ನಿನ್ನೆ ಅಕ್ಟೋಬರ್ 6ರಂದಷ್ಟೇ ರಸಾಯನ ಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, ಜರ್ಮನಿಯ ಬೆಂಜಮಿನ್ ಲಿಸ್ಟ್ ಹಾಗೂ ಇಂಗ್ಲೆಂಡ್ನ ಡೇವಿಡ್ ಡಬ್ಲುಸಿ ಮ್ಯಾಕ್ಮಿಲನ್ ಕೆಮಿಸ್ಟ್ರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಅಸಿಮ್ಮೆಟ್ರಿಕ್ ಆರ್ಗನೊಕಟಲಿಸಿಸ್ ಅಭಿವೃದ್ಧಿ ಪಡಿಸಿದ್ದಕ್ಕಾಗಿ ಈ ಇಬ್ಬರಿಗೆ ಈ ಬಾರಿಯ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.

ಇದನ್ನೂ ಓದಿ: 

Nobel Prize in Chemistry 2021: ಬೆಂಜಮಿನ್ ಲಿಸ್ಟ್, ಡೇವಿಡ್ ಮ್ಯಾಕ್​ಮಿಲನ್​ಗೆ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ

Nobel Prize 2021: ಪ್ರಸಕ್ತ ವರ್ಷದ ಭೌತಶಾಸ್ತ್ರ ಕ್ಷೇತ್ರದ ನೊಬೆಲ್​ ಪ್ರಶಸ್ತಿ ಈ ಮೂವರು ವಿಜ್ಞಾನಿಗಳಿಗೆ

Published On - 5:11 pm, Thu, 7 October 21

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ