AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Made in India syrup: 18 ಮಕ್ಕಳ ಸಾವಿಗೆ ಕಾರಣವಾದ ನೋಯ್ಡಾ ಫರ್ಮ್ ಬಿಹೈಂಡ್ ಸಿರಪ್ ಉತ್ಪಾದನೆ ಸ್ಥಗಿತ

ಭಾರತೀಯ ಔಷಧೀಯ ಕಂಪನಿಯೊಂದು ತಯಾರಿಸಿದ ಸಿರಪ್​ನ್ನು ಸೇವಿಸಿ ಉಜ್ಬೇಕಿಸ್ತಾನ್‌ದ 18 ಮಕ್ಕಳು ಪ್ರಾಣ ಕಳೆದುಕೊಂಡಿದ್ದರು. ಇದೀಗ ಉಜ್ಬೇಕಿಸ್ತಾನ್‌ನ ಭಾರತ-ನಿರ್ಮಿತ ಸಿರಪ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ.

Made in India syrup: 18 ಮಕ್ಕಳ ಸಾವಿಗೆ ಕಾರಣವಾದ ನೋಯ್ಡಾ ಫರ್ಮ್ ಬಿಹೈಂಡ್ ಸಿರಪ್ ಉತ್ಪಾದನೆ ಸ್ಥಗಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 30, 2022 | 10:33 AM

Share

ಉಜ್ಬೇಕಿಸ್ತಾನ್‌: ಭಾರತೀಯ ಔಷಧೀಯ ಕಂಪನಿಯೊಂದು ತಯಾರಿಸಿದ ಸಿರಪ್​ನ್ನು ಸೇವಿಸಿ ಉಜ್ಬೇಕಿಸ್ತಾನ್‌(Uzbekistan) 18 ಮಕ್ಕಳು ಪ್ರಾಣ ಕಳೆದುಕೊಂಡಿದ್ದರು. ಇದೀಗ ಉಜ್ಬೇಕಿಸ್ತಾನ್‌ನ ಭಾರತ-ನಿರ್ಮಿತ ಸಿರಪ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಉಜ್ಬೇಕಿಸ್ತಾನ್‌ನಲ್ಲಿ 18 ಸಾವುಗಳಿಗೆ ಕೆಮ್ಮು ಸಿರಪ್ ತಯಾರಿಸಿದ ನೋಯ್ಡಾ ಸಂಸ್ಥೆಯು ಎಲ್ಲಾ ಉತ್ಪಾದನೆಯನ್ನು ನಿಲ್ಲಿಸುವಂತೆ ಹೇಳಿದೆ.

ಉಜ್ಬೇಕಿಸ್ತಾನ್‌ನ (Uzbekistan) ಆರೋಗ್ಯ ಸಚಿವಾಲಯವು ಭಾರತೀಯ ಔಷಧೀಯ ಕಂಪನಿಯೊಂದು ತಯಾರಿಸಿದ ಔಷಧಿಗಳನ್ನು ಸೇವಿಸಿ ದೇಶದಲ್ಲಿ 18 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿತ್ತು. ತೀವ್ರ ಉಸಿರಾಟದ ಕಾಯಿಲೆ ಇರುವ 21 ಮಕ್ಕಳಲ್ಲಿ 18 ಮಕ್ಕಳು ಡಾಕ್-1 ಮ್ಯಾಕ್ಸ್ ಸಿರಪ್ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ್ ಆರೋಗ್ಯ ಸಚಿವಾಲಯ ತಿಳಿಸಿತ್ತು. ಈ ಔಷಧಿ ಕಂಪನಿಯ ಮೇರಿಯನ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್​ದಾಗಿದ್ದು, ಇದನ್ನು ಉಜ್ಬೇಕಿಸ್ತಾನ್‌ನಲ್ಲಿ 2012ರಲ್ಲಿ ನೋಂದಾಯಿಸಲಾಗಿತ್ತು.

ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಡಾಕ್-1 ಮ್ಯಾಕ್ಸ್ ಸಿರಪ್ ಸೇವಿಸಿದ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತ್ತು. ಡಾಕ್-1 ಮ್ಯಾಕ್ಸ್ ಸಿರಪ್‌ನ ಈ ಸರಣಿಯು ಎಥಿಲೀನ್ ಗ್ಲೈಕೋಲ್ ಅನ್ನು ಹೊಂದಿರುತ್ತದೆ ಎಂದು ಪ್ರಾಥಮಿಕ ಪ್ರಯೋಗಾಲಯ ಅಧ್ಯಯನಗಳು ತಿಳಿಸಿತ್ತು. ಈ ಸಿರಪ್‌ ವಿಷಕಾರಿಯಾಗಿದೆ, ಮತ್ತು ಸುಮಾರು 1-2 ಮಿಲಿ / ಕೆಜಿ 95% ಕೇಂದ್ರೀಕೃತ ದ್ರಾವಣವು ರೋಗಿಯ ಆರೋಗ್ಯದಲ್ಲಿ ಗಂಭೀರ ಬದಲಾವಣೆಗಳನ್ನು ಉಂಟುಮಾಡಬಹುದು, ಉದಾಹರಣೆಗೆ ವಾಂತಿ, ಮೂರ್ಛೆ, ಸೆಳೆತ, ಹೃದಯರಕ್ತನಾಳದ ಸಮಸ್ಯೆಗಳು ಮತ್ತು ತೀವ್ರ ಮೂತ್ರಪಿಂಡ ವೈಫಲ್ಯವಾಗಬಹುದು ಎಂದು ಸಚಿವಾಲಯ ಗಮನಸೆಳೆದಿದೆ.

ಇದನ್ನು ಓದಿ: ಭಾರತೀಯ ಔಷಧಿ ಕಂಪನಿ ತಯಾರಿಸಿದ ಸಿರಪ್ ಕುಡಿದು 18 ಮಕ್ಕಳು ಸಾವು: ಉಜ್ಬೇಕಿಸ್ತಾನ್

ಒಟ್ಟು ಏಳು ಜವಾಬ್ದಾರಿಯುತ ಉದ್ಯೋಗಿಗಳನ್ನು ಕರ್ತವ್ಯಗಳ ಬಗ್ಗೆ ನಿರ್ಲಕ್ಷ್ಯ ಮತ್ತು ಅಜಾಗರೂಕತೆಗಾಗಿ ಅವರನ್ನು ವಜಾಗೊಳಿಸಲಾಯಿದೆ ಮತ್ತು ಈ ಬಗ್ಗೆ ಹಲವಾರು ತಜ್ಞರಿಗೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ, ಡಾಕ್ -1 ಮ್ಯಾಕ್ಸ್ ಔಷಧದ ಮಾತ್ರೆಗಳು ಮತ್ತು ಸಿರಪ್​ಗಳನ್ನು ದೇಶದ ಎಲ್ಲಾ ಔಷಧಾಲಯಗಳಲ್ಲಿ ನಿಗದಿತ ರೀತಿಯಲ್ಲಿ ಮಾರಾಟ ಸ್ಥಗಿತಗೊಳಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಮತ್ತು ಔಷಧಾಲಯಗಳಲ್ಲಿ ಔಷಧಿಗಳನ್ನು ಪ್ರಿಸ್ಕ್ರಿಪ್ಷನ್ ಮೂಲಕ ಮಾತ್ರ ಖರೀದಿಸಲು ಸಚಿವಾಲಯವು ಹೇಳಿತ್ತು.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ