AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸ್ಟ್ರಾಡಾಮಸ್ 1555ರಲ್ಲೇ ಉಕ್ರೇನ್-​ ರಷ್ಯಾ ಯುದ್ಧದ ಬಗ್ಗೆ ಭವಿಷ್ಯ ನುಡಿದಿದ್ರಾ? ಇಲ್ಲಿದೆ ನೋಡಿ ಮಾಹಿತಿ

ಈ ಹಿಂದೆ ನಾಸ್ಟ್ರಾಡಾಮಸ್​ ಭವಿಷ್ಯ ವಾಣಿಯಂತೆ, ಲಂಡನ್​ನ ಮಹಾಬೆಂಕಿ ದುರಂತ, ಅಡಾಲ್ಫ್​ ಹಿಟ್ಲರ್​ ಮತ್ತು ನೆಪೋಲಿಯನ್​ನ ಜನನ, 9/11ರ ವರ್ಲ್ಡ್​ ಟ್ರೇಡ್​ ಸೆಂಟರ್​​ನ ಮೇಲಿನ ದಾಳಿ, ಜಾನ್​ ಎಫ್​ ಕೆನಡಿ ಹತ್ಯೆಯ ಬಗ್ಗೆ ಹೇಳಿದ್ದ ಭವಿಷ್ಯ ನಿಜವಾಗಿದೆ.

ನಾಸ್ಟ್ರಾಡಾಮಸ್ 1555ರಲ್ಲೇ ಉಕ್ರೇನ್-​ ರಷ್ಯಾ ಯುದ್ಧದ ಬಗ್ಗೆ ಭವಿಷ್ಯ ನುಡಿದಿದ್ರಾ? ಇಲ್ಲಿದೆ ನೋಡಿ ಮಾಹಿತಿ
ನಾಸ್ಟ್ರಾಡಾಮಸ್
TV9 Web
| Edited By: |

Updated on:Feb 25, 2022 | 12:48 PM

Share

ರಷ್ಯಾ- ಉಕ್ರೇನ್​ ನಡುವಿನ ಯುದ್ಧ(Russia-Ukraine War) ಆರಂಭವಾಗಿದೆ. ಬಲಿಷ್ಠ ರಾಷ್ಟ್ರ ರಷ್ಯಾ ದಾಳಿಗೆ ಉಕ್ರೇನ್​ ಅಕ್ಷರಶಃ ನಲುಗಿ ಹೋಗುತ್ತಿದೆ. ಬಾಂಬ್​, ಕ್ಷಿಪಣಿಗಳ ದಾಳಿಗೆ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ನಡುವೆ ಯುರೋಪ್​ (Europe)​ ರಾಷ್ಟ್ರಗಳಿಗೆ ಇಂತಹದ್ದೊಂದು ಯುದ್ಧದ ಪರಿಸ್ಥಿತಿ ಎದುರಾಗಲಿದೆ ಎಂದು ಪ್ರೆಂಚ್​ನ ನಾಸ್ಟ್ರಾಡಾಮಸ್(Nostradamus) ಈ ಹಿಂದೆಯೇ ತಮ್ಮ ಭವಿಷ್ಯ ವಾಣಿಯಲ್ಲಿ ಹೇಳಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ​ ನಾಸ್ಟ್ರಾಡಾಮಸ್  1555ರಲ್ಲಿಯೇ 942 ಮುನ್ಸೂಚನೆಗಳನ್ನು ಒಳಗೊಂಡ ಲೆಸ್ ಪ್ರೊಫೆಟೀಸ್‌ (Les Propheties) ಎನ್ನುವ ಪುಸ್ತಕ ಬರೆದಿದ್ದಾನೆ. ಅದರಲ್ಲಿ 2022 ರಲ್ಲಿ ಯುರೋಪಿನಲ್ಲಿ ಯುದ್ಧ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದರು ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ.

ಈ ಹಿಂದೆ  ನಾಸ್ಟ್ರಾಡಾಮಸ್​ ಭವಿಷ್ಯ ವಾಣಿಯಲ್ಲಿ ಲಂಡನ್​ನ ಮಹಾಬೆಂಕಿ ದುರಂತ, ಅಡಾಲ್ಫ್​ ಹಿಟ್ಲರ್​ ಮತ್ತು ನೆಪೋಲಿಯನ್​ನ ಜನನ, 9/11ರ ವರ್ಲಡ್​ ಟ್ರೇಡ್​ ಸೆಂಟರ್​​ನ ಮೇಲಾದ ದಾಳಿ, ಜಾನ್​ ಎಫ್​ ಕೆನಡಿ ಹತ್ಯೆಯ ಬಗ್ಗೆ ಭವಿಷ್ಯ ನುಡಿದಿದ್ದರು. ಅವೆಲ್ಲವೂ ಸತ್ಯವಾಗಿತ್ತು. ಅದೇ ರೀತಿ ಈ ವರ್ಷವೂ ಯುದ್ಧ ನಡೆಯುವ ಬಗ್ಗೆ ಭವಿಷ್ಯದಲ್ಲಿ ಹೇಳಿದ್ದರು ಎಂದು ಹೇಳಲಾಗಿದೆ.

ಮೂರನೇ ಮಹಾಯುದ್ಧ, ಭೂಕಂಪ, ಮೂರನೇ ಆಂಟಿಕ್ರೈಸ್ಟ್ ಮುಂದಿನ ದಿನಗಳಲ್ಲಿ ಸಂಭವಿಸಬಹುದು ಎಂದು ಭವಿಷ್ಯದಲ್ಲಿ ಹೇಳಲಾಗಿದೆ.  ಇದರ ಜತೆಗೆ ಬ್ರಿಟಿಷ್​ ನಾಸ್ಟ್ರಾಡಾಮಸ್ ಬೋಬು ಶೈಲರ್​ ನುಡಿದ ಭವಿಷ್ಯದಲ್ಲಿ ಎಂಡ್​ ಆಫ್​ ಡೇಸ್​ ಸರಣಿಯಲ್ಲಿ ಭವಿಷ್ಯದಲ್ಲಿ ಭೂಮಿಯು ನಾಶವಾಗಲಿದೆ. ಆದರೆ ಇದು ಇನ್ನೂ 1,772 ವರ್ಷಗಳವರೆಗೆ ಆಗುವುದಿಲ್ಲ ಎಂದಿದ್ದಾರೆ.ಇದರೊಂದಿಗೆ ಯೆಲ್ಲೊಸ್ಟೋನ್ ರಾಷ್ಟ್ರೀಯ ಉದ್ಯಾನವನದಲ್ಲಿ ಜ್ವಾಲಾಮುಖಿ ಸ್ಫೋಟ ಮತ್ತು ಮುಂಬರುವ ವರ್ಷಗಳಲ್ಲಿ ಸಂಭವಿಸಬಹುದಾದ ಬೃಹತ್ ಸೌರ ಜ್ವಾಲೆ ಬಗ್ಗೆ ಎಚ್ಚರಿಸಿದ್ದಾರೆ.

ನಾಸ್ಟ್ರಾಡಾಮಸ್​ ಪ್ರಕಾರ ಭೂಮಿಯ ನಾಶ 3797ರ ಹೊತ್ತಿಗೆ ಸಂಭವಿಸಬಹುದು. ಅದನ್ನು ಹೊರತುಪಡಿಸಿ ಜಗತ್ತಿಗೆ ಒಂದಷ್ಟು ಸಂಕಷ್ಟಗಳು ಎದುರಾಗಲಿದೆ ಎಂದು ದಿ ಸನ್​ ವರದಿ ಮಾಡಿದೆ. ಇನ್ನು ಬ್ರಿಟಿಷ್​ ನಾಸ್ಟ್ರಾಡಾಮಸ್​ 100 ವರ್ಷಗಳವರೆಗೆ ಭೂಮಿಯ ನಾಶವಾಗುವುದಿಲ್ಲ. ಅದರ ನಂತರ ಆಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:

ರಷ್ಯಾ ದಾಳಿಗೆ ತತ್ತರಿಸಿದ ಉಕ್ರೇನ್​: ಯುದ್ಧದ ನಾಡಿನ ಮನಕಲಕುವ ಫೋಟೋಗಳು ಇಲ್ಲಿವೆ

Published On - 12:44 pm, Fri, 25 February 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?