AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಗೊತ್ತೇ ಇಲ್ಲ; ಭಾರತದ ವಿರುದ್ಧ ಚೀನಾ ಯುದ್ಧ ವಿಮಾನ ಬಳಸಿದ್ದೇವೆಂಬ ಪಾಕ್ ಹೇಳಿಕೆಗೆ ಬೀಜಿಂಗ್ ಪ್ರತಿಕ್ರಿಯೆ

ಭಾರತದ ವಿರುದ್ಧ ಚೀನಾದ ಜೆಟ್‌ಗಳನ್ನು ಬಳಸಲಾಗುತ್ತಿದೆ ಎಂಬ ಪಾಕಿಸ್ತಾನದ ಹೇಳಿಕೆಗೆ ಚೀನಾ ಪ್ರತಿಕ್ರಿಯಿಸಿದೆ. 'ಈ ವಿಷಯದ ಬಗ್ಗೆ ತಿಳಿದಿಲ್ಲ' ಎಂದು ಚೀನಾ ಹೇಳಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತಿಯಾಗಿ ಚೀನಾದ ಜೆಟ್‌ಗಳನ್ನು ಬಳಸಲಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿತ್ತು. ಈ ವಿಷಯದ ಬಗ್ಗೆ ಚೀನಾ ವಿದೇಶಾಂಗ ಕಾರ್ಯದರ್ಶಿ ಈ ವಿಷಯದ ಬಗ್ಗೆ ಮಾತನಾಡುತ್ತಾ, ಈ ವಿಷಯದ ಬಗ್ಗೆ ತಮಗೇನೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ನಮಗೆ ಗೊತ್ತೇ ಇಲ್ಲ; ಭಾರತದ ವಿರುದ್ಧ ಚೀನಾ ಯುದ್ಧ ವಿಮಾನ ಬಳಸಿದ್ದೇವೆಂಬ ಪಾಕ್ ಹೇಳಿಕೆಗೆ ಬೀಜಿಂಗ್ ಪ್ರತಿಕ್ರಿಯೆ
Lin Jian
ಸುಷ್ಮಾ ಚಕ್ರೆ
|

Updated on: May 08, 2025 | 10:16 PM

Share

ಬೀಜಿಂಗ್, ಮೇ 8: ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನವು ಚೀನಾ ನಿರ್ಮಿತ ಜೆ-10ಸಿ ಫೈಟರ್ ಜೆಟ್‌ಗಳನ್ನು ಬಳಸಿದೆ ಎಂಬ ಪಾಕಿಸ್ತಾನದ (Pakistan) ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೀನಾದ ವಿದೇಶಾಂಗ ಸಚಿವಾಲಯ ಈ ಬಗ್ಗೆ ನಮಗೇನೂ ಗೊತ್ತೇ ಇಲ್ಲ ಎಂದು ಹೇಳಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾರತೀಯ ಯುದ್ಧವಿಮಾನಗಳನ್ನು ಹೊಡೆದುರುಳಿಸಲು ಜೆ-10ಸಿ ಜೆಟ್‌ಗಳನ್ನು ಬಳಸಿದ್ದೇವೆ ಎಂದು ಹೇಳಿಕೊಂಡ ನಂತರ ಚೀನಾ ಈ ಪ್ರತಿಕ್ರಿಯೆ ನೀಡಿದೆ. ಈ ಮೂಲಕ ಪಾಕಿಸ್ತಾನದ ಹೇಳಿಕೆಯಿಂದ ಚೀನಾ ಅಂತರ ಕಾಯ್ದುಕೊಂಡಿದೆ.

ಈ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಬೀಜಿಂಗ್‌ನಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ್ದು, “ಈ ವಿಷಯದ ಬಗ್ಗೆ ತಮಗೆ ಏನೂ ತಿಳಿದಿಲ್ಲ” ಎಂದು ಹೇಳಿದರು.

ಭಾರತದ ಮಿಲಿಟರಿ ದಾಳಿಗೆ ಪ್ರತೀಕಾರವಾಗಿ ಭಾರತದ ವಿರುದ್ಧ ಚೀನಾದ ಜೆಟ್‌ಗಳನ್ನು ಬಳಸಲಾಗುತ್ತಿದೆ ಎಂಬ ಪಾಕಿಸ್ತಾನದ ಹೇಳಿಕೆಗೆ ಚೀನಾ ಇಂದು ಪ್ರತಿಕ್ರಿಯಿಸಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಎಂದು ಹೆಸರಿಸಲಾದ ಈ ದಾಳಿಯು ಹಲವಾರು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದೆ. ಭಾರತದ ವಿರುದ್ಧದ ದಾಳಿಗಳಿಗೆ ಪ್ರತಿಕ್ರಿಯಿಸಲು ಚೀನಾದ ಜೆಟ್‌ಗಳನ್ನು ಬಳಸಲಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಇದನ್ನೂ ಓದಿ: ಪಾಕಿಸ್ತಾನ ದಾಳಿಯನ್ನು ನಿಲ್ಲಿಸದಿದ್ದರೆ ಭಾರತ ಉತ್ತರ ಕೊಡುತ್ತಲೇ ಇರುತ್ತದೆ; ವಿದೇಶಾಂಗ ಸಚಿವಾಲಯ

ಶಾಂತಿಗಾಗಿ ಚೀನಾ ಮನವಿ:

ಪಹಲ್ಗಾಮ್ ದಾಳಿಯ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಚೀನಾ ಭಾರತ ಮತ್ತು ಪಾಕಿಸ್ತಾನ ಎರಡೂ ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಒತ್ತಾಯಿಸಿತು. “ಶಾಂತಿ ಮತ್ತು ಸ್ಥಿರತೆಯ ವಿಶಾಲ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸಲು, ವಿಶ್ವಸಂಸ್ಥೆಯ ಚಾರ್ಟರ್ ಸೇರಿದಂತೆ ಅಂತರರಾಷ್ಟ್ರೀಯ ಕಾನೂನನ್ನು ಪಾಲಿಸಲು, ಶಾಂತವಾಗಿರಲು, ಸಂಯಮವನ್ನು ಕಾಪಾಡಿಕೊಳ್ಳಲು ಮತ್ತು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸುವ ಕ್ರಮಗಳನ್ನು ತೆಗೆದುಕೊಳ್ಳದಂತೆ ನಾವು ಎರಡೂ ದೇಶದವರನ್ನು ಒತ್ತಾಯಿಸುತ್ತೇವೆ” ಎಂದು ಲಿನ್ ಜಿಯಾನ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು