AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಇರಾನಿನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರು ಅಮೆರಿಕದೊಂದಿಗಿನ ಶಾಂತಿ ಮಾತುಕತೆಯನ್ನು ಕಡಿಮೆ ಮಾಡುವ ಪ್ರಸ್ತಾಪಗಳನ್ನು ತಿರಸ್ಕರಿಸಿದ್ದಾರೆ. ಇದೀಗ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕ ಮತ್ತು ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು ಎಂದು ಪ್ರತಿಪಾದಿಸಿದ್ದಾರೆ. ತಮ್ಮ ಮೊದಲ ವಿದೇಶಾಂಗ ನೀತಿ ಅಧಿವೇಶನದಲ್ಲಿ ಹೊಸ ಸುಪ್ರೀಂ ನಾಯಕ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಸೇಡು ತೀರಿಸಿಕೊಳ್ಳುವ ಬಗ್ಗೆ ಶಪಥ ಮಾಡಿದ್ದರು.

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು
Mojtaba Khamenei
ಸುಷ್ಮಾ ಚಕ್ರೆ
|

Updated on: Mar 17, 2026 | 9:56 PM

Share

ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ರಾಯಿಟರ್ಸ್ ಉಲ್ಲೇಖಿಸಿದ ಇರಾನಿನ ಅಧಿಕಾರಿಯೊಬ್ಬರ ಪ್ರಕಾರ, ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಯುಎಸ್ ಮತ್ತು ಇಸ್ರೇಲ್ ವಿರುದ್ಧ ಟೆಹ್ರಾನ್‌ನ ಸೇಡು ಬಹಳ ಗಂಭೀರವಾದುದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾಗೇ, ಮೊಜ್ತಬಾ ಅವರು “ಶಾಂತಿಗೆ ಇದು ಸರಿಯಾದ ಸಮಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

ಇದಕ್ಕೂ ಮೊದಲು, ಅವರ ತಂದೆಯಾದ ಅಯತೊಲ್ಲಾ ಖಮೇನಿಯ ಮರಣದ ನಂತರ ಇರಾನ್‌ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ಖಮೇನಿ ಅವರ ಮರಣದ ನಂತರ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಬಲವಾದ ಸಂದೇಶವನ್ನು ನೀಡಿದ್ದರು. ಈ ಭಾಷಣವು ಅಮೆರಿಕ ಮತ್ತು ಇಸ್ರೇಲ್ ಕಡೆಗೆ ಇರಾನ್​ನ ಕಠಿಣ ನಿಲುವನ್ನು ಒತ್ತಿಹೇಳಿತ್ತು. ಇರಾನ್ ಅನುಭವಿಸಿದ ಹಾನಿಗಳಿಗೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕ ಬೆಲೆ ತೆರಬೇಕಾಗುತ್ತದೆ ಎಂದು ಮೊಜ್ತಬಾ ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ