AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಇರಾನಿನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರು ಅಮೆರಿಕದೊಂದಿಗಿನ ಶಾಂತಿ ಮಾತುಕತೆಯನ್ನು ಕಡಿಮೆ ಮಾಡುವ ಪ್ರಸ್ತಾಪಗಳನ್ನು ತಿರಸ್ಕರಿಸಿದ್ದಾರೆ. ಇದೀಗ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕ ಮತ್ತು ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು ಎಂದು ಪ್ರತಿಪಾದಿಸಿದ್ದಾರೆ. ತಮ್ಮ ಮೊದಲ ವಿದೇಶಾಂಗ ನೀತಿ ಅಧಿವೇಶನದಲ್ಲಿ ಹೊಸ ಸುಪ್ರೀಂ ನಾಯಕ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಸೇಡು ತೀರಿಸಿಕೊಳ್ಳುವ ಬಗ್ಗೆ ಶಪಥ ಮಾಡಿದ್ದರು.

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು
Mojtaba Khamenei
ಸುಷ್ಮಾ ಚಕ್ರೆ
|

Updated on: Mar 17, 2026 | 9:56 PM

Share

ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ರಾಯಿಟರ್ಸ್ ಉಲ್ಲೇಖಿಸಿದ ಇರಾನಿನ ಅಧಿಕಾರಿಯೊಬ್ಬರ ಪ್ರಕಾರ, ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಯುಎಸ್ ಮತ್ತು ಇಸ್ರೇಲ್ ವಿರುದ್ಧ ಟೆಹ್ರಾನ್‌ನ ಸೇಡು ಬಹಳ ಗಂಭೀರವಾದುದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾಗೇ, ಮೊಜ್ತಬಾ ಅವರು “ಶಾಂತಿಗೆ ಇದು ಸರಿಯಾದ ಸಮಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

ಇದಕ್ಕೂ ಮೊದಲು, ಅವರ ತಂದೆಯಾದ ಅಯತೊಲ್ಲಾ ಖಮೇನಿಯ ಮರಣದ ನಂತರ ಇರಾನ್‌ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ಖಮೇನಿ ಅವರ ಮರಣದ ನಂತರ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಬಲವಾದ ಸಂದೇಶವನ್ನು ನೀಡಿದ್ದರು. ಈ ಭಾಷಣವು ಅಮೆರಿಕ ಮತ್ತು ಇಸ್ರೇಲ್ ಕಡೆಗೆ ಇರಾನ್​ನ ಕಠಿಣ ನಿಲುವನ್ನು ಒತ್ತಿಹೇಳಿತ್ತು. ಇರಾನ್ ಅನುಭವಿಸಿದ ಹಾನಿಗಳಿಗೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕ ಬೆಲೆ ತೆರಬೇಕಾಗುತ್ತದೆ ಎಂದು ಮೊಜ್ತಬಾ ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು