AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗವದ್ಗೀತಾ ಪಾರ್ಕ್ ಧ್ವಂಸವಾಗಿಲ್ಲ; ಭಾರತದ ಆಕ್ರೋಶದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕೆನಡಾ ಮೇಯರ್

ಕೆನಡಾದಲ್ಲಿ ಭಗವದ್ಗೀತೆ ಉದ್ಯಾನವನದ ಫಲಕವನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿತ್ತು. ಆದರೆ, ಈ ಸುದ್ದಿಯನ್ನು ಬ್ರಾಂಪ್ಟನ್ ನಗರದ ಮೇಯರ್ ಪ್ಯಾಟ್ರಿಕ್ ಬ್ರೌನ್ ತಳ್ಳಿ ಹಾಕಿದ್ದಾರೆ.

ಭಗವದ್ಗೀತಾ ಪಾರ್ಕ್ ಧ್ವಂಸವಾಗಿಲ್ಲ; ಭಾರತದ ಆಕ್ರೋಶದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕೆನಡಾ ಮೇಯರ್
ಭಗವದ್ಗೀತೆ ಪಾರ್ಕ್
TV9 Web
| Edited By: |

Updated on: Oct 03, 2022 | 2:06 PM

Share

ಕೆನಡಾ: ಕೆನಡಾದಲ್ಲಿ (Canada) ಇತ್ತೀಚೆಗೆ ಉದ್ಯಾನವನವೊಂದಕ್ಕೆ ‘ಶ್ರೀ ಭಗವದ್ಗೀತೆ’ (Bhagavad Gita Park) ಎಂದು ನಾಮಕರಣ ಮಾಡಲಾಗಿತ್ತು. ಹಿಂದಿನ ಹೆಸರನ್ನು ಅಳಿಸಿ ಈ ಹೆಸರನ್ನು ನೀಡಲಾಗಿತ್ತು. ಅಲ್ಲಿನ ಸಮುದಾಯದ ಏಳಿಗೆಗಾಗಿ ಸ್ಥಳೀಯ ಹಿಂದೂಗಳು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಒಂಟಾರಿಯೊ ಪ್ರಾಂತ್ಯದ ಬ್ರಾಂಪ್ಟನ್ ನಗರದಲ್ಲಿರುವ ಈ ಪಾರ್ಕ್​ಗೆ ‘ಶ್ರೀ ಭಗವದ್ಗೀತೆ’ ಎಂದು ಹೆಸರಿಡಲಾಗಿತ್ತು. ಆದರೆ, ಆ ಪಾರ್ಕ್ ಅನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಇದಕ್ಕೆ ಭಾರತ ಖಂಡನೆ ವ್ಯಕ್ತಪಡಿಸಿತ್ತು.

ಕೆನಡಾದಲ್ಲಿ ಭಗವದ್ಗೀತೆ ಉದ್ಯಾನವನದ ಫಲಕವನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿತ್ತು. ಆದರೆ, ಈ ಸುದ್ದಿಯನ್ನು ತಳ್ಳಿ ಹಾಕಿರುವ ಬ್ರಾಂಪ್ಟನ್ ನಗರದ ಮೇಯರ್ ಪ್ಯಾಟ್ರಿಕ್ ಬ್ರೌನ್, ಇದು ಸುಳ್ಳು ಸುದ್ದಿ. ಭಗವದ್ಗೀತೆ ಉದ್ಯಾನದಲ್ಲಿ ಸ್ಥಾಪಿಸಲಾದ ಖಾಲಿ ಫಲಕವನ್ನು ಬಿಲ್ಡರ್ ರೆಡಿ ಮಾಡಿದ್ದಾರೆ. ಅದರಲ್ಲಿ ಇನ್ನೂ ಏನನ್ನೂ ಬರೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕೆನಡಾದಲ್ಲಿ 10 ಜನರನ್ನು ಇರಿದು ಕೊಂದ ಇಬ್ಬರು ಸಹೋದರರಲ್ಲಿ ಒಬ್ಬ ಶವವಾಗಿ ಪತ್ತೆಯಾದರೆ ಮತ್ತೊಬ್ಬ ಪೊಲೀಸರ ಕೈಗೆ ಸಿಗುತ್ತಿಲ್ಲ

3.75 ಎಕರೆಗಳಷ್ಟು ವಿಸ್ತಾರವಾಗಿರುವ ಈ ಉದ್ಯಾನವನದಲ್ಲಿ ಕೆಲವು ಹಿಂದೂ ದೇವತೆಗಳ ಪ್ರತಿಮೆಗಳು ಮತ್ತು ಸಾರಥಿಗಳಾದ ಕೃಷ್ಣಾರ್ಜುನರ ಪ್ರತಿಮೆಗಳನ್ನು ಇರಿಸಲಾಗಿತ್ತು. ಈ ಭಗವದ್ಗೀತೆ ಪಾರ್ಕ್ ಫಲಕವನ್ನು ಧ್ವಂಸಗೊಳಿಸಲಾಗಿದೆ ಎಂಬ ಗೊಂದಲದ ಸುದ್ದಿಯನ್ನು ಹರಡಲಾಗಿದೆ. ಆದರೆ, ಇದು ಸತ್ಯಕ್ಕೆ ದೂರವಾದುದು ಎಂದು ಮೇಯರ್ ಪ್ಯಾಟ್ರಿಕ್ ಬ್ರೌನ್ ಟ್ವೀಟ್ ಮಾಡಿದ್ದಾರೆ. ಭಗವದ್ಗೀತೆ ಪಾರ್ಕ್ ಸ್ಥಾಪನೆಯ ಸಮಯದಲ್ಲಿ ಫಲಕವು ಹಾನಿಗೊಳಗಾಗಿದೆ. ನಿನ್ನೆಯಷ್ಟೇ ಹೊಸ ಬೋರ್ಡ್​ ಹಾಕಲಾಗಿದೆ. ಅದನ್ನು ತಾತ್ಕಾಲಿಕವಾಗಿ ಪಾರ್ಕ್​ನಲ್ಲಿ ಹಾಕಲಾಗಿದೆ ಎಂದಿದ್ದಾರೆ.

ಭಾನುವಾರ ತಡರಾತ್ರಿ ಈ ವಿಧ್ವಂಸಕ ಕೃತ್ಯದ ವರದಿಗಳನ್ನು ಖಂಡಿಸಿದ ಭಾರತೀಯ ಹೈಕಮಿಷನ್ ಅಪರಾಧಿಗಳ ವಿರುದ್ಧ ತ್ವರಿತ ಕ್ರಮಕ್ಕೆ ಕರೆ ನೀಡಿದ ಬೆನ್ನಲ್ಲೇ ಬ್ರಾಂಪ್ಟನ್ ನಗರದ ಅಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಭಾರತದ ಹೈಕಮಿಷನ್, ಶ್ರೀ ಭಗವದ್ಗೀತೆ ಪಾರ್ಕ್​ನಲ್ಲಿ ನಡೆದ ಕೃತ್ಯವನ್ನು ನಾವು ಖಂಡಿಸುತ್ತೇವೆ. ಇದು ಜನಾಂಗೀಯ ದ್ವೇಷದ ವಿಚಾರವಾಗಿದೆ. ಈ ಬಗ್ಗೆ ಕೆನಡಾ ಅಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿತ್ತು.

ಇದನ್ನೂ ಓದಿ: ಕೆನಡಾದಲ್ಲಿ ದ್ವೇಷ ಅಪರಾಧಗಳು ಹೆಚ್ಚುತ್ತಿವೆ, ಅಲ್ಲಿರುವ ಭಾರತೀಯರು ಜಾಗರೂಕರಾಗಿರಿ ಎಂದ ಭಾರತ ಸರ್ಕಾರ

ಈ ಪಾರ್ಕ್​ಗೆ ಈ ಹಿಂದೆ ಟ್ರಾಯರ್ಸ್ ಪಾರ್ಕ್ ಎಂದು ಕರೆಯಲಾಗುತ್ತಿತ್ತು. ಸ್ಥಳೀಯ ಹಿಂದೂ ಸಮುದಾಯ ಮತ್ತು ಅವರ ಕೊಡುಗೆಗಳನ್ನು ಗೌರವಿಸಲು ಇದಕ್ಕೆ ಶ್ರೀ ಭಗವದ್ಗೀತಾ ಪಾರ್ಕ್ ಎಂದು ಮರುನಾಮಕರಣ ಮಾಡಲಾಗಿತ್ತು. ಭಾರತೀಯ ಮೂಲದ 1.6 ಮಿಲಿಯನ್ ಜನರು ಮತ್ತು ಅನಿವಾಸಿ ಭಾರತೀಯರು ನೆಲೆಸಿರುವ ಕೆನಡಾದಲ್ಲಿ ಈ ವರ್ಷ ಹಿಂದೂ ಪೂಜಾ ಸ್ಥಳಗಳ ಮೇಲೆ ಹಲವಾರು ದಾಳಿಗಳು ನಡೆದಿದ್ದವು. ಅದರ ಬೆನ್ನಲ್ಲೇ ಈ ಕೃತ್ಯ ಬೆಳಕಿಗೆ ಬಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್