AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!

ನನ್ನ ಗೆಳೆಯನೋರ್ವನಿಗೆ ಕೊರೊನಾ ಟೆಸ್ಟ್​​ ಮಾಡಲಾಗಿತ್ತು. ಈ ಪರೀಕ್ಷೆ ನಡೆದ 8 ದಿನಗಳ ನಂತರ ವರದಿ ನೀಡಲಾಗಿತ್ತು. ಹೀಗಾಗಿ, ನಾವು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ ಎಂದು ತಜ್ಞ ತಿಳಿಸಿದ್ದಾರೆ.

ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Jan 30, 2021 | 5:05 PM

Share

ಕೊರೊನಾ ವೈರಸ್​ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರೆ ಹತ್ತಿರದ ಆಸ್ಪತ್ರೆಗೆ ತೆರಳಬೇಕು. ಅಲ್ಲಿ ಗಂಟೆಗಟ್ಟಲೆ ಕಾಯಬೇಕು. ಇಷ್ಟಕ್ಕೇ ನಿಂತಿಲ್ಲ. ವೈದ್ಯರು ನಿಮ್ಮ ಗಂಟಲು ದ್ರವ ತೆಗೆದುಕೊಂಡು ಪರಿಕ್ಷೆಯನ್ನೇನೋ ಮಾಡುತ್ತಾರೆ. ಆದರೆ, ಇದರ ವರದಿ ನೀಡೋಕೆ ಹಲವು ದಿನಗಳನ್ನೇ ತೆಗೆದುಕೊಳ್ಳುತ್ತಾರೆ. ಈ ತಲೆನೋವನ್ನು ಕಡಿಮೆ ಮಾಡಲು ಅರಿಜೋನಾ ವಿಶ್ವವಿದ್ಯಾಲಯದ ಸಂಶೋಧಕರು ಮೊಬೈಲ್​ ಮೂಲಕವೇ ಕೊರೊನಾ ಪರೀಕ್ಷೆ ನಡೆಸಲು ಹೊಸ ತಂತ್ರಜ್ಞಾನ ಅಭಿವೃದ್ಧಿ ಮಾಡಿದ್ದಾರೆ.

ಅರಿಜೋನಾ ವಿಶ್ವವಿದ್ಯಾಲಯದ ಜಿಯಾಂಗ್-ಯಿಯೋಲ್ ಯೂನ್ ಈ ಸಂಶೋಧನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡುವ ಅವರು, ಕೊರೊನಾ ವೈರಸ್​ ಪತ್ತೆ ಹಚ್ಚಲು ನಾವು ನಮ್ಮದೇ ಹೊಸ ಅನ್ವೇಷಣೆ ಮಾಡಿದ್ದೇವೆ. ನಿಮ್ಮ ಸ್ಮಾರ್ಟ್​ಫೋನ್​ ಬಳಕೆ ಮಾಡಿಕೊಂಡೇ ನೀವು ಕೊರೊನಾ ವೈರಸ್​ ಪತ್ತೆ ಹಚ್ಚಬಹುದು ಎಂದಿದ್ದಾರೆ ತಜ್ಞರು.

ತಜ್ಞರು ಅಭಿವೃದ್ಧಿ ಮಾಡಿರುವ ಸಂಶೋಧನೆ ಪ್ರಕಾರ ಸ್ಮಾರ್ಟ್​ಫೋನ್​ಗೆ ಒಂದು ಮೈಕ್ರೋಸ್ಕೋಪ್​ ಅವಶ್ಯಕತೆ ಇದೆ. ಇದರ ಜೊತೆಗೆ ನಿಮಗೆ ಮೈಕ್ರೋಫ್ಲೂಯಿಡ್ ಪೇಪರ್ ಕೂಡ ಬೇಕು. ನಂತರ ಗಂಟಲು ದ್ರವವನ್ನು ಮೈಕ್ರೋಫ್ಲೂಯಿಡ್ ಪೇಪರ್ ಮೇಲೆ ಹಾಕಿದಾಗ ಅಲ್ಲಿ ಆಗುವ ರಿಯಾಕ್ಷನ್​ ಆಧರಿಸಿ ನಿಮಗೆ ಕೊರೊನಾ ಇದೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಂಡು ಹಿಡಿಯಬಹುದಾಗಿದೆ. ಅಲ್ಲಿ ಆಗುವ ರಿಯಾಕ್ಷನ್ನು ಮೊಬೈಲ್​ನಲ್ಲಿರುವ ಮೈಕ್ರೋಸ್ಕೋಪ್ ಬಳಸಿಕೊಂಡು ನೋಡಬಹುದು. ಈ ಪರೀಕ್ಷೆಯನ್ನು ಕೇವಲ 45 ರೂಪಾಯಿಯಲ್ಲಿ ಮಾಡಬಹುದು.

ನನ್ನ ಗೆಳೆಯನೋರ್ವನಿಗೆ ಕೊರೊನಾ ಟೆಸ್ಟ್​​ ಮಾಡಲಾಗಿತ್ತು. ಈ ಪರೀಕ್ಷೆ ನಡೆದ 8 ದಿನಗಳ ನಂತರ ವರದಿ ನೀಡಲಾಗಿತ್ತು. ಹೀಗಾಗಿ, ನಾವು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ್ದೇವೆ ಎಂದು ಯಿಯೋಲ್ ಯೂನ್ ತಿಳಿಸಿದ್ದಾರೆ.

ಕೊರೊನಾ ನಂತರದ ಮೊದಲ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಬೆಂಗಳೂರು ವಿವಿ! ಇಸ್ರೋ ಮುಖ್ಯಸ್ಥ ಶಿವನ್ ಮುಖ್ಯ ಅತಿಥಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ