AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

#NRIappealDay: ನಮ್ಮ ಬೇಡಿಕೆಯನ್ನು ಈಡೇರಿಸಿ; ರಾಜ್ಯ ಸರ್ಕಾರಕ್ಕೆ ಅನಿವಾಸಿ ಕನ್ನಡಿಗರ ಒಕ್ಕೊರಲಿನ ಕೂಗು

ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ 30ಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇ-ಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ತಮ್ಮ ಬೇಡಿಕೆಯನ್ನು ಈಡೇರಿಸಲು ಅಭಿಯಾನ ಆರಂಭಿಸಿದ್ದಾರೆ.

#NRIappealDay: ನಮ್ಮ ಬೇಡಿಕೆಯನ್ನು ಈಡೇರಿಸಿ; ರಾಜ್ಯ ಸರ್ಕಾರಕ್ಕೆ ಅನಿವಾಸಿ ಕನ್ನಡಿಗರ ಒಕ್ಕೊರಲಿನ ಕೂಗು
‘ಸರ್ಕಾರ ಅನಿವಾಸಿ ಕನ್ನಡಿಗರ ಈ ಕೂಗನ್ನು ಆಲಿಸಬೇಕು’
KUSHAL V
|

Updated on: Jan 02, 2021 | 7:31 PM

Share

ಬೆಂಗಳೂರು: 30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ ಕನ್ನಡಿಗರಿಂದ ಜನವರಿ 2ರಂದು NRI ಅಪೀಲ್ ಡೇ ಅಭಿಯಾನ ದಿನ ಎಂದು ಆಚರಿಸಲಾಯಿತು. ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ 30ಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇ-ಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ತಮ್ಮ ಬೇಡಿಕೆಯನ್ನು ಈಡೇರಿಸಲು ಅಭಿಯಾನ ಆರಂಭಿಸಿದ್ದಾರೆ.

NRIಅಪೀಲ್ ಡೇ (#NRIappealDay) ಎಂಬ ಹ್ಯಾಷ್​ಟ್ಯಾಗ್​ನೊಂದಿಗೆ ಅಂತಾರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲು ಮುಂದಾಗಿದ್ದಾರೆ. ಅನಿವಾಸಿ ಕನ್ನಡಿಗರಿಗಾಗಿಯೇ ಕರ್ನಾಟಕ ಸರ್ಕಾರ ಅನಿವಾಸಿ ಭಾರತೀಯ ಸಮಿತಿ ಸ್ಥಾಪಿಸಿದೆ (KNRI ಫೋರಂ). ಇದಕ್ಕೆ ಅಧ್ಯಕ್ಷರಾಗಿರುವ ಮುಖ್ಯಮಂತ್ರಿಗಳಿಗೆ ಅಭಿಯಾನದ ಮೂಲಕ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಅನಿವಾಸಿ ಕನ್ನಡಿಗರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಇತರ ಮಹತ್ತರ ಜವಾಬ್ದಾರಿಗಳಿರುವ ಕಾರಣ KNRI ಸಮಿತಿಯಲ್ಲಿ ಉಪಾಧ್ಯಕ್ಷರಿಗೇ ಹೆಚ್ಚಿನ ಜವಾಬ್ದಾರಿ ನೀಡಬೇಕಿದೆ. ಆದರೆ, ಕಳೆದ 3ವರ್ಷಗಳ ಹಿಂದೆ ತೆರವುಗೊಂಡ ಉಪಾಧ್ಯಕ್ಷ ಸ್ಥಾನಕ್ಕೆ ಹೊಸದಾಗಿ ಯಾರನ್ನೂ ನೇಮಕ ಮಾಡಿಲ್ಲ. ಹಲವಾರು ಕನ್ನಡ ಪರ ಸಂಘಟನೆಗಳು ಈ ಕುರಿತು ಸರ್ಕಾರದ ಗಮನ ಸೆಳೆದಿದ್ದರೂ ಯಾರೂ ಸ್ಪಂದಿಸುವ ಗೋಜಿಗೆ ಹೋಗಿರಲಿಲ್ಲ. ಇದೀಗ, ತಮ್ಮ ಬೇಡಿಕೆಯನ್ನು ಈಡೇರಿಸಲು ಅಭಿಯಾನದ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

‘ಸರ್ಕಾರ ಅನಿವಾಸಿ ಕನ್ನಡಿಗರ ಈ ಕೂಗನ್ನು ಆಲಿಸಬೇಕು’ ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಕರೆಕೊಟ್ಟಿರುವ ಈ ಅಭಿಯಾನಕ್ಕೆ ಈಗಾಗಲೇ ಅಮೆರಿಕ, UAE, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜರ್ಲ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದರ್ಲ್ಯಾಂಡ್, ಸೌತ್ ಕೊರಿಯಾ ಸೇರಿದಂತೆ ಇನ್ನಿತರ ದೇಶಗಳ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ತಮ್ಮ ಬೆಂಬಲ ಘೋಷಿಸಿದೆ.

ಸರ್ಕಾರ ಅನಿವಾಸಿ ಕನ್ನಡಿಗರ ಈ ಕೂಗನ್ನು ಆಲಿಸಬೇಕು. ರಾಜ್ಯ ಸರ್ಕಾರ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ತಕ್ಷಣವೇ ನೇಮಿಸಿ, ಸರ್ಕಾರ ಮತ್ತು ಅನಿವಾಸಿ ಕನ್ನಡಿಗರ ನಡುವಿನ ಸಂಬಂಧ, ಸಂವಹನವನ್ನು ಹೆಚ್ಚು ಮಾಡಬೇಕು ಎಂದು ವಿನಂತಿಸಿದ್ದಾರೆ. ಸದ್ಯ, ಅಭಿಯಾನದಲ್ಲಿ ಸಾಗರೋತ್ತರ ಕನ್ನಡಿಗರ ವೇದಿಕೆ ಅಧ್ಯಕ್ಷ ಚಂದ್ರಶೇಖರ್‌ ಲಿಂಗದಳ್ಳಿ, ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್, ಇಟಲಿ ಕನ್ನಡ ಸಂಘ ಅಧ್ಯಕ್ಷ ಹೇಮೇಗೌಡ ಮಧು, ಕತಾರ್​ನ ತುಳು ಕೂಟದ ಪೋಷಕರು ಮತ್ತು ಮಾಜಿ ಅಧ್ಯಕ್ಷರು ರವಿ ಶೆಟ್ಟಿ ಸೇರಿದಂತೆ ಮತ್ತಿತ್ತರರು ಪಾಲ್ಗೊಂಡಿದ್ದರು.

Photo Gallery | ಬದುಕಿನ ಬಣ್ಣವೇ ’ಬಾದಲ್‘​ ಆದರೆ..

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ