AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

#NRIappealDay: ನಮ್ಮ ಬೇಡಿಕೆಯನ್ನು ಈಡೇರಿಸಿ; ರಾಜ್ಯ ಸರ್ಕಾರಕ್ಕೆ ಅನಿವಾಸಿ ಕನ್ನಡಿಗರ ಒಕ್ಕೊರಲಿನ ಕೂಗು

ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ 30ಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇ-ಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ತಮ್ಮ ಬೇಡಿಕೆಯನ್ನು ಈಡೇರಿಸಲು ಅಭಿಯಾನ ಆರಂಭಿಸಿದ್ದಾರೆ.

#NRIappealDay: ನಮ್ಮ ಬೇಡಿಕೆಯನ್ನು ಈಡೇರಿಸಿ; ರಾಜ್ಯ ಸರ್ಕಾರಕ್ಕೆ ಅನಿವಾಸಿ ಕನ್ನಡಿಗರ ಒಕ್ಕೊರಲಿನ ಕೂಗು
‘ಸರ್ಕಾರ ಅನಿವಾಸಿ ಕನ್ನಡಿಗರ ಈ ಕೂಗನ್ನು ಆಲಿಸಬೇಕು’
KUSHAL V
|

Updated on: Jan 02, 2021 | 7:31 PM

Share

ಬೆಂಗಳೂರು: 30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ ಕನ್ನಡಿಗರಿಂದ ಜನವರಿ 2ರಂದು NRI ಅಪೀಲ್ ಡೇ ಅಭಿಯಾನ ದಿನ ಎಂದು ಆಚರಿಸಲಾಯಿತು. ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ 30ಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇ-ಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ತಮ್ಮ ಬೇಡಿಕೆಯನ್ನು ಈಡೇರಿಸಲು ಅಭಿಯಾನ ಆರಂಭಿಸಿದ್ದಾರೆ.

NRIಅಪೀಲ್ ಡೇ (#NRIappealDay) ಎಂಬ ಹ್ಯಾಷ್​ಟ್ಯಾಗ್​ನೊಂದಿಗೆ ಅಂತಾರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲು ಮುಂದಾಗಿದ್ದಾರೆ. ಅನಿವಾಸಿ ಕನ್ನಡಿಗರಿಗಾಗಿಯೇ ಕರ್ನಾಟಕ ಸರ್ಕಾರ ಅನಿವಾಸಿ ಭಾರತೀಯ ಸಮಿತಿ ಸ್ಥಾಪಿಸಿದೆ (KNRI ಫೋರಂ). ಇದಕ್ಕೆ ಅಧ್ಯಕ್ಷರಾಗಿರುವ ಮುಖ್ಯಮಂತ್ರಿಗಳಿಗೆ ಅಭಿಯಾನದ ಮೂಲಕ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಅನಿವಾಸಿ ಕನ್ನಡಿಗರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಇತರ ಮಹತ್ತರ ಜವಾಬ್ದಾರಿಗಳಿರುವ ಕಾರಣ KNRI ಸಮಿತಿಯಲ್ಲಿ ಉಪಾಧ್ಯಕ್ಷರಿಗೇ ಹೆಚ್ಚಿನ ಜವಾಬ್ದಾರಿ ನೀಡಬೇಕಿದೆ. ಆದರೆ, ಕಳೆದ 3ವರ್ಷಗಳ ಹಿಂದೆ ತೆರವುಗೊಂಡ ಉಪಾಧ್ಯಕ್ಷ ಸ್ಥಾನಕ್ಕೆ ಹೊಸದಾಗಿ ಯಾರನ್ನೂ ನೇಮಕ ಮಾಡಿಲ್ಲ. ಹಲವಾರು ಕನ್ನಡ ಪರ ಸಂಘಟನೆಗಳು ಈ ಕುರಿತು ಸರ್ಕಾರದ ಗಮನ ಸೆಳೆದಿದ್ದರೂ ಯಾರೂ ಸ್ಪಂದಿಸುವ ಗೋಜಿಗೆ ಹೋಗಿರಲಿಲ್ಲ. ಇದೀಗ, ತಮ್ಮ ಬೇಡಿಕೆಯನ್ನು ಈಡೇರಿಸಲು ಅಭಿಯಾನದ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

‘ಸರ್ಕಾರ ಅನಿವಾಸಿ ಕನ್ನಡಿಗರ ಈ ಕೂಗನ್ನು ಆಲಿಸಬೇಕು’ ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಕರೆಕೊಟ್ಟಿರುವ ಈ ಅಭಿಯಾನಕ್ಕೆ ಈಗಾಗಲೇ ಅಮೆರಿಕ, UAE, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜರ್ಲ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದರ್ಲ್ಯಾಂಡ್, ಸೌತ್ ಕೊರಿಯಾ ಸೇರಿದಂತೆ ಇನ್ನಿತರ ದೇಶಗಳ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ತಮ್ಮ ಬೆಂಬಲ ಘೋಷಿಸಿದೆ.

ಸರ್ಕಾರ ಅನಿವಾಸಿ ಕನ್ನಡಿಗರ ಈ ಕೂಗನ್ನು ಆಲಿಸಬೇಕು. ರಾಜ್ಯ ಸರ್ಕಾರ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ತಕ್ಷಣವೇ ನೇಮಿಸಿ, ಸರ್ಕಾರ ಮತ್ತು ಅನಿವಾಸಿ ಕನ್ನಡಿಗರ ನಡುವಿನ ಸಂಬಂಧ, ಸಂವಹನವನ್ನು ಹೆಚ್ಚು ಮಾಡಬೇಕು ಎಂದು ವಿನಂತಿಸಿದ್ದಾರೆ. ಸದ್ಯ, ಅಭಿಯಾನದಲ್ಲಿ ಸಾಗರೋತ್ತರ ಕನ್ನಡಿಗರ ವೇದಿಕೆ ಅಧ್ಯಕ್ಷ ಚಂದ್ರಶೇಖರ್‌ ಲಿಂಗದಳ್ಳಿ, ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್, ಇಟಲಿ ಕನ್ನಡ ಸಂಘ ಅಧ್ಯಕ್ಷ ಹೇಮೇಗೌಡ ಮಧು, ಕತಾರ್​ನ ತುಳು ಕೂಟದ ಪೋಷಕರು ಮತ್ತು ಮಾಜಿ ಅಧ್ಯಕ್ಷರು ರವಿ ಶೆಟ್ಟಿ ಸೇರಿದಂತೆ ಮತ್ತಿತ್ತರರು ಪಾಲ್ಗೊಂಡಿದ್ದರು.

Photo Gallery | ಬದುಕಿನ ಬಣ್ಣವೇ ’ಬಾದಲ್‘​ ಆದರೆ..

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’