AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ

ಯುಎಸ್​​ನಲ್ಲಿ ಮಕ್ಕಳ ಮೇಲೆ ಕೊವ್ಯಾಕ್ಸಿನ್​ ಲಸಿಕೆಯ ತುರ್ತು ಬಳಕೆಗೆ ಅವಕಾಶ ಕೋರಿ ಮನವಿ ಮಾಡಿರುವುದು ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಇಟ್ಟ ಮತ್ತೊಂದು ಮಹತ್ವದ ಶಂಕರ್​ ಮುಸುನುರಿ ತಿಳಿಸಿದ್ದಾರೆ.

ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ  ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ
ಕೊವ್ಯಾಕ್ಸಿನ್​
Follow us
TV9 Web
| Updated By: Lakshmi Hegde

Updated on:Nov 06, 2021 | 12:15 PM

ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ತುರ್ತು ಬಳಕೆಗೆ ಅನುಮೋದನೆ ನೀಡಬೇಕು ಎಂದು ಯುಎಸ್​ ಆಹಾರ ಮತ್ತು ಔಷಧ ಆಡಳಿತ (US Food And Drug Administration)ಕ್ಕೆ ಭಾರತ್​​ ಬಯೋಟೆಕ್​ ಕಂಪನಿಯ ಅಮೆರಿಕ ಪಾಲುದಾರ ಕಂಪನಿ Ocugen Inc ಮನವಿ ಸಲ್ಲಿಸಿದೆ. ಭಾರತದಲ್ಲಿ ಭಾರತ್​ ಬಯೋಟೆಕ್​ ಕಂಪನಿಯು 2-18ವರ್ಷದ ಸುಮಾರು 526 ಜನರ ಮೇಲೆ ಕೊವ್ಯಾಕ್ಸಿನ್​ 2/3ನೇ ಹಂತದ ಪ್ರಯೋಗ ನಡೆಸಿದ ವರದಿಯನ್ನು ಆಧರಿಸಿ ಈ Ocugen Inc (ಒಕುಜೆನ್​) ಕಂಪನಿ ಅಮೆರಿಕದಲ್ಲೂ ಮಕ್ಕಳ ಮೇಲೆ ಕೊವ್ಯಾಕ್ಸಿನ್​ ಲಸಿಕೆ ಬಳಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದೆ.  

ಯುಎಸ್​​ನಲ್ಲಿ ಮಕ್ಕಳ ಮೇಲೆ ಕೊವ್ಯಾಕ್ಸಿನ್​ ಲಸಿಕೆಯ ತುರ್ತು ಬಳಕೆಗೆ ಅವಕಾಶ ಕೋರಿ ಮನವಿ ಮಾಡಿರುವುದು ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಇಟ್ಟ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಒಕುಜೆನ್​ ಕಂಪನಿಯ ಸಹ-ಸಂಸ್ಥಾಪಕ, ಸಿಇಒ ಶಂಕರ್​ ಮುಸುನುರಿ ತಿಳಿಸಿದ್ದಾರೆ. ಹಾಗೇ, ಕೊವಿಡ್ 19 ಸಾಂಕ್ರಾಮಿಕ ಜಗತ್ತಿನಾದ್ಯಂತ 5 ಮಿಲಿಯನ್​ ಗೂ ಅಧಿಕ ಜನರನ್ನು ಬಲಿಪಡೆದಿದೆ. ಈ ರೋಗದ ವಿರುದ್ಧ ಮಕ್ಕಳಿಗೆ ಲಸಿಕೆ ನೀಡುವುದು ಅತ್ಯಗತ್ಯ. ಇದೀಗ ಕೊವ್ಯಾಕ್ಸಿನ್​ ಲಸಿಕೆಯನ್ನು 2-18ವರ್ಷದವರೆಗಿನವರಿಗೆ ನೀಡಲು ಯುಎಸ್​ ಆಹಾರ ಮತ್ತು ಔಷಧ ಆಡಳಿತ ಅನುಮತಿ ನೀಡಿದರೆ, ಪಾಲಕರಿಗೆ ತಮ್ಮ ಮಕ್ಕಳನ್ನು ಕೊವಿಡ್​ 19 ನಿಂದ ಸುರಕ್ಷಿತ ಮಾಡಲು ದಾರಿ ಸಿಕ್ಕಂತಾಗುತ್ತದೆ ಎಂದೂ ಶಂಕರ್​ ಅಭಿಪ್ರಾಯಪಟ್ಟಿದ್ದಾರೆ.

ಕೊವ್ಯಾಕ್ಸಿನ್​ ಲಸಿಕೆ 2-18ವರ್ಷದವರ ಮೇಲೆ ಉಂಟು ಮಾಡುವ ರಿಯಾಕ್ಟೋಜೆನಿಸಿಟಿ ಮತ್ತು ಇಮ್ಯುನೊಜೆನಿಸಿಟಿಗೆ ಸಂಬಂಧಪಟ್ಟಂತೆ ಈ ವರ್ಷ ಮೇ ತಿಂಗಳಿನಿಂದ ಜುಲೈವರೆಗೆ ಅಧ್ಯಯನ ನಡೆದಿತ್ತು. 2-6, 6-12 ಮತ್ತು 12-18 ಹೀಗೆ ಮೂರು ಹಂತದಲ್ಲಿ ಕ್ಲಿನಿಕಲ್​ ಟ್ರಯಲ್​ ನಡೆದಿದೆ. ಒಟ್ಟು 526 ಮಕ್ಕಳ ಮೇಲೆ ಪ್ರಯೋಗ ನಡೆದಿತ್ತು..ಯಾರಿಗೂ ಯಾವುದೇ ದೊಡ್ಡ ಮಟ್ಟದ ಪ್ರತಿಕೂಲ ಆಗಿಲ್ಲ. ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ವರದಿಯಾಗಿದೆ. ಅಂದಹಾಗೆ ಸದ್ಯ ಯುಎಸ್​​ನ ಫೈಜರ್​ ಕೊರೊನಾ ಲಸಿಕೆಯೊಂದನ್ನು ಮಕ್ಕಳ ಮೇಲೆ ತುರ್ತು ಬಳಕೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 10,929 ಹೊಸ ಕೊವಿಡ್ ಪ್ರಕರಣ, 392 ಮಂದಿ ಸಾವು

Published On - 12:04 pm, Sat, 6 November 21

ಕುಡಿದ ಮತ್ತಿನಲ್ಲಿ ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ
ಕುಡಿದ ಮತ್ತಿನಲ್ಲಿ ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ