AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ

ಯುಎಸ್​​ನಲ್ಲಿ ಮಕ್ಕಳ ಮೇಲೆ ಕೊವ್ಯಾಕ್ಸಿನ್​ ಲಸಿಕೆಯ ತುರ್ತು ಬಳಕೆಗೆ ಅವಕಾಶ ಕೋರಿ ಮನವಿ ಮಾಡಿರುವುದು ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಇಟ್ಟ ಮತ್ತೊಂದು ಮಹತ್ವದ ಶಂಕರ್​ ಮುಸುನುರಿ ತಿಳಿಸಿದ್ದಾರೆ.

ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ  ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ
ಕೊವ್ಯಾಕ್ಸಿನ್​
TV9 Web
| Edited By: |

Updated on:Nov 06, 2021 | 12:15 PM

Share

ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ತುರ್ತು ಬಳಕೆಗೆ ಅನುಮೋದನೆ ನೀಡಬೇಕು ಎಂದು ಯುಎಸ್​ ಆಹಾರ ಮತ್ತು ಔಷಧ ಆಡಳಿತ (US Food And Drug Administration)ಕ್ಕೆ ಭಾರತ್​​ ಬಯೋಟೆಕ್​ ಕಂಪನಿಯ ಅಮೆರಿಕ ಪಾಲುದಾರ ಕಂಪನಿ Ocugen Inc ಮನವಿ ಸಲ್ಲಿಸಿದೆ. ಭಾರತದಲ್ಲಿ ಭಾರತ್​ ಬಯೋಟೆಕ್​ ಕಂಪನಿಯು 2-18ವರ್ಷದ ಸುಮಾರು 526 ಜನರ ಮೇಲೆ ಕೊವ್ಯಾಕ್ಸಿನ್​ 2/3ನೇ ಹಂತದ ಪ್ರಯೋಗ ನಡೆಸಿದ ವರದಿಯನ್ನು ಆಧರಿಸಿ ಈ Ocugen Inc (ಒಕುಜೆನ್​) ಕಂಪನಿ ಅಮೆರಿಕದಲ್ಲೂ ಮಕ್ಕಳ ಮೇಲೆ ಕೊವ್ಯಾಕ್ಸಿನ್​ ಲಸಿಕೆ ಬಳಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದೆ.  

ಯುಎಸ್​​ನಲ್ಲಿ ಮಕ್ಕಳ ಮೇಲೆ ಕೊವ್ಯಾಕ್ಸಿನ್​ ಲಸಿಕೆಯ ತುರ್ತು ಬಳಕೆಗೆ ಅವಕಾಶ ಕೋರಿ ಮನವಿ ಮಾಡಿರುವುದು ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಇಟ್ಟ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಒಕುಜೆನ್​ ಕಂಪನಿಯ ಸಹ-ಸಂಸ್ಥಾಪಕ, ಸಿಇಒ ಶಂಕರ್​ ಮುಸುನುರಿ ತಿಳಿಸಿದ್ದಾರೆ. ಹಾಗೇ, ಕೊವಿಡ್ 19 ಸಾಂಕ್ರಾಮಿಕ ಜಗತ್ತಿನಾದ್ಯಂತ 5 ಮಿಲಿಯನ್​ ಗೂ ಅಧಿಕ ಜನರನ್ನು ಬಲಿಪಡೆದಿದೆ. ಈ ರೋಗದ ವಿರುದ್ಧ ಮಕ್ಕಳಿಗೆ ಲಸಿಕೆ ನೀಡುವುದು ಅತ್ಯಗತ್ಯ. ಇದೀಗ ಕೊವ್ಯಾಕ್ಸಿನ್​ ಲಸಿಕೆಯನ್ನು 2-18ವರ್ಷದವರೆಗಿನವರಿಗೆ ನೀಡಲು ಯುಎಸ್​ ಆಹಾರ ಮತ್ತು ಔಷಧ ಆಡಳಿತ ಅನುಮತಿ ನೀಡಿದರೆ, ಪಾಲಕರಿಗೆ ತಮ್ಮ ಮಕ್ಕಳನ್ನು ಕೊವಿಡ್​ 19 ನಿಂದ ಸುರಕ್ಷಿತ ಮಾಡಲು ದಾರಿ ಸಿಕ್ಕಂತಾಗುತ್ತದೆ ಎಂದೂ ಶಂಕರ್​ ಅಭಿಪ್ರಾಯಪಟ್ಟಿದ್ದಾರೆ.

ಕೊವ್ಯಾಕ್ಸಿನ್​ ಲಸಿಕೆ 2-18ವರ್ಷದವರ ಮೇಲೆ ಉಂಟು ಮಾಡುವ ರಿಯಾಕ್ಟೋಜೆನಿಸಿಟಿ ಮತ್ತು ಇಮ್ಯುನೊಜೆನಿಸಿಟಿಗೆ ಸಂಬಂಧಪಟ್ಟಂತೆ ಈ ವರ್ಷ ಮೇ ತಿಂಗಳಿನಿಂದ ಜುಲೈವರೆಗೆ ಅಧ್ಯಯನ ನಡೆದಿತ್ತು. 2-6, 6-12 ಮತ್ತು 12-18 ಹೀಗೆ ಮೂರು ಹಂತದಲ್ಲಿ ಕ್ಲಿನಿಕಲ್​ ಟ್ರಯಲ್​ ನಡೆದಿದೆ. ಒಟ್ಟು 526 ಮಕ್ಕಳ ಮೇಲೆ ಪ್ರಯೋಗ ನಡೆದಿತ್ತು..ಯಾರಿಗೂ ಯಾವುದೇ ದೊಡ್ಡ ಮಟ್ಟದ ಪ್ರತಿಕೂಲ ಆಗಿಲ್ಲ. ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ವರದಿಯಾಗಿದೆ. ಅಂದಹಾಗೆ ಸದ್ಯ ಯುಎಸ್​​ನ ಫೈಜರ್​ ಕೊರೊನಾ ಲಸಿಕೆಯೊಂದನ್ನು ಮಕ್ಕಳ ಮೇಲೆ ತುರ್ತು ಬಳಕೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 10,929 ಹೊಸ ಕೊವಿಡ್ ಪ್ರಕರಣ, 392 ಮಂದಿ ಸಾವು

Published On - 12:04 pm, Sat, 6 November 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ