AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ವಿರುದ್ಧ ಒಂದಾದ ಇಸ್ಲಾಂ ರಾಷ್ಟ್ರಗಳು, ಸೌದಿಯಲ್ಲಿ 57 ದೇಶಗಳ ತುರ್ತು ಸಭೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ. ಗಾಜಾದ ಮೇಲೆ ಇಸ್ರೇಲ್ ತನ್ನ ದಾಳಿಯನ್ನು ಹೀಗೆ ಮುಂದುವರೆಸಿದರೆ, ಪ್ರಪಂಚದ ಮುಸ್ಲಿಮರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಗಾಜಾದ ಮೇಲೆ ಬಾಂಬ್ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು.

ಇಸ್ರೇಲ್ ವಿರುದ್ಧ ಒಂದಾದ ಇಸ್ಲಾಂ ರಾಷ್ಟ್ರಗಳು, ಸೌದಿಯಲ್ಲಿ 57 ದೇಶಗಳ ತುರ್ತು ಸಭೆ
ಒಐಸಿ
ರಶ್ಮಿ ಕಲ್ಲಕಟ್ಟ
|

Updated on: Oct 18, 2023 | 4:32 PM

Share

ಜೆಡ್ಡಾ ಅಕ್ಟೋಬರ್ 18: ಕಳೆದ 11 ದಿನಗಳಿಂದ ಇಸ್ರೇಲ್ (Israel) ಮತ್ತು ಹಮಾಸ್ (Hamas) ನಡುವೆ ಯುದ್ಧ ನಡೆಯುತ್ತಿದೆ. ಈ ಯುದ್ಧದ ನಂತರ, ಪ್ರಪಂಚದಾದ್ಯಂತ ಮುಸ್ಲಿಮರು ಇಸ್ರೇಲ್ ವಿರುದ್ಧ ಒಂದಾಗುತ್ತಿದ್ದಾರೆ. ಗಾಜಾ (Gaza) ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ, ಒಐಸಿಯ (OIC) ತುರ್ತು ಸಭೆಯನ್ನು ಕರೆದಿದೆ. ಸೌದಿ ಅರೇಬಿಯಾದ ಕೋರಿಕೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ ಎಂದು 57 ಇಸ್ಲಾಮಿಕ್ ರಾಷ್ಟ್ರಗಳ ಸಂಘಟನೆಯಾದ ಒಐಸಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಜೆಡ್ಡಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಗಾಜಾದಲ್ಲಿ ಇಸ್ರೇಲ್ ನ ಸೇನಾ ದಾಳಿ ಕುರಿತು ಚರ್ಚೆ ನಡೆಯಲಿದೆ. ಮಧ್ಯಪ್ರಾಚ್ಯದ ಸ್ಥಿರತೆ ಮತ್ತು ಭದ್ರತೆಯ ಬಗ್ಗೆಯೂ ಚರ್ಚೆ ನಡೆಯಲಿದೆ. ವಾಸ್ತವವಾಗಿ, ಹಮಾಸ್ ದಾಳಿಯ ನಂತರ, ಇಸ್ರೇಲ್ ಇಡೀ ಗಾಜಾವನ್ನು ನಾಶಪಡಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಗಾಜಾದ ಜನರು 24 ಗಂಟೆಗಳಲ್ಲಿ ಈ ಪ್ರದೇಶವನ್ನು ಬಿಟ್ಟು ಬೇರೆಡೆಗೆ ಹೋಗುತ್ತಾರೆ ಎಂದು ಇಸ್ರೇಲ್ ಕಳೆದ ಶನಿವಾರ ಎಚ್ಚರಿಸಿದೆ.

ಇಸ್ರೇಲ್‌ ಹೊಣೆ ಎಂದ ಒಐಸಿ

ಒಐಸಿ ಈ ಯುದ್ಧಕ್ಕೆ ಇಸ್ರೇಲ್‌ ಹೊಣೆ ಎಂದು ಹೇಳಿದೆ. 57 ಇಸ್ಲಾಮಿಕ್ ರಾಷ್ಟ್ರಗಳ ಈ ಸಂಘಟನೆ ಇಸ್ರೇಲ್ ಪ್ಯಾಲೆಸ್ತೀನ್ ಜನರ ಮೇಲಿನ ದಾಳಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಹೇಳಿತ್ತು. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸಬೇಕು. ಹಮಾಸ್ ದಾಳಿಯ ನಂತರ ಇಸ್ರೇಲ್ ಸಂಪೂರ್ಣವಾಗಿ ತಲ್ಲಣಗೊಂಡಿದೆ. ಇಸ್ರೇಲ್ ಸೇನೆ ಗಾಜಾದಲ್ಲಿ ಬೀಡುಬಿಟ್ಟಿದೆ. ಹಮಾಸ್ ಯುದ್ಧವನ್ನು ಪ್ರಾರಂಭಿಸಿದೆ ಆದರೆ ನಾವು ಅದನ್ನು ಕೊನೆಗೊಳಿಸುತ್ತೇವೆ ಎಂದು ಪಿಎಂ ನೆತನ್ಯಾಹು ಗುಡುಗಿದ್ದಾರೆ.

ಮುಸ್ಲಿಮರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ. ಗಾಜಾದ ಮೇಲೆ ಇಸ್ರೇಲ್ ತನ್ನ ದಾಳಿಯನ್ನು ಹೀಗೆ ಮುಂದುವರೆಸಿದರೆ, ಪ್ರಪಂಚದ ಮುಸ್ಲಿಮರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಗಾಜಾದ ಮೇಲೆ ಬಾಂಬ್ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು. ಗಾಜಾದಲ್ಲಿರುವ ಪ್ಯಾಲೆಸ್ತೀನಿಯರು ಅವರ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಒಐಸಿ ಟೀಕೆ ಅನಗತ್ಯ ಮತ್ತು ಸಂಕುಚಿತ ಮನಸ್ಸಿನದ್ದು ಎಂದ ಭಾರತ

ಯುದ್ಧಕ್ಕೆ 11 ದಿನ

ಕಳೆದ 11 ದಿನಗಳಿಂದ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ನಡೆಯುತ್ತಿದೆ. ಅಕ್ಟೋಬರ್ 7 ರಂದು ಯುದ್ಧ ಪ್ರಾರಂಭವಾಯಿತು. ಅಂದು ಬೆಳಗ್ಗೆ ಹಮಾಸ್ ಅನೇಕ ಇಸ್ರೇಲಿ ಗುರಿಗಳ ಮೇಲೆ ಕ್ಷಿಪ್ರ ದಾಳಿಯನ್ನು ಪ್ರಾರಂಭಿಸಿತು. ಹಮಾಸ್ ಇಸ್ರೇಲ್ ಮೇಲೆ 5000 ಕ್ಕೂ ಹೆಚ್ಚು ರಾಕೆಟ್‌ಗಳನ್ನು ಹಾರಿಸಿತು. ಇದಾದ ಬಳಿಕ ಇಸ್ರೇಲ್‌ನಲ್ಲೂ ಪ್ರತೀಕಾರದ ಕ್ರಮ ಕೈಗೊಳ್ಳಲಾಗಿದೆ. ಗಾಜಾದಲ್ಲಿ ಹಮಾಸ್ ಸ್ಥಾನಗಳ ಮೇಲೆ ಭಾರೀ ಬಾಂಬ್‌ಗಳನ್ನು ಹಾರಿಸಲಾಯಿತು. ಹಮಾಸ್ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಇಲ್ಲಿಯವರೆಗೆ 1400 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, ಗಾಜಾದಲ್ಲಿ 3000 ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!