AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ ಸೋಂಕಿಗೆ ಮಾರ್ಚ್​​ನಲ್ಲಿ ಸಿದ್ಧವಾಗಲಿದೆ ಲಸಿಕೆ; ಫೈಜರ್​ ಕಂಪನಿ ಸಿಇಒ ಭರವಸೆ, ಮಾಡೆರ್ನಾದಿಂದಲೂ ನಡೆಯುತ್ತಿದೆ ಪ್ರಯತ್ನ

ಇನ್ನೊಂದೆಡೆ ಮತ್ತೊಂದು ಔಷಧಿ ಕಂಪನಿ ಮಾಡೆರ್ನಾ ಕೂಡ ಒಮಿಕ್ರಾನ್​ ಸೋಂಕನ್ನು ಕೇಂದ್ರೀಕರಿಸಿ ಬೂಸ್ಟರ್ ಡೋಸ್​ ಕೊಡಬಹುದಾದ ಲಸಿಕೆ ಉತ್ಪಾದನೆಯ ಮೇಲೆ ಕೇಂದ್ರೀಕರಿಸಿದೆ ಎಂದು ಮಾಡೆರ್ನಾ ಸಿಇಒ ಸ್ಟೀಫನ್ ಬ್ಯಾನ್ಸೆಲ್ ತಿಳಿಸಿದ್ದಾರೆ. 

ಒಮಿಕ್ರಾನ್​ ಸೋಂಕಿಗೆ ಮಾರ್ಚ್​​ನಲ್ಲಿ ಸಿದ್ಧವಾಗಲಿದೆ ಲಸಿಕೆ; ಫೈಜರ್​ ಕಂಪನಿ ಸಿಇಒ ಭರವಸೆ, ಮಾಡೆರ್ನಾದಿಂದಲೂ ನಡೆಯುತ್ತಿದೆ ಪ್ರಯತ್ನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 11, 2022 | 12:40 PM

Share

ದೆಹಲಿ: ಜಗತ್ತಿನಲ್ಲಿ ಒಮಿಕ್ರಾನ್​ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಈಗಿರುವ ಕೊವಿಡ್​ 19 ಲಸಿಕೆಗಳು ಒಮಿಕ್ರಾನ್​ ವಿರುದ್ಧ ಹೋರಾಡಲಾರವು ಎಂದು ಈಗಾಗಲೇ ತಜ್ಞರು ಹೇಳಿದ್ದಾರೆ. ಈ ಮಧ್ಯೆ ಅಮೆರಿಕದ ಫಾರ್ಮಾ ಕಂಪನಿ ಫೈಜರ್(Pfizer)​, ಮಾರ್ಚ್​ ತಿಂಗಳಷ್ಟೊತ್ತಿಗೆ ಒಮಿಕ್ರಾನ್​ ಲಸಿಕೆ (Omicron Vaccine)ಸಿದ್ಧವಾಗಲಿದೆ ಎಂದು ಹೇಳಿದೆ.  ಪ್ರಸ್ತುತ ಅಸ್ತಿತ್ವದಲ್ಲಿರುವ ಕೊವಿಡ್​ 19 ಲಸಿಕೆಗಳು ಒಮಿಕ್ರಾನ್​ ಸೋಂಕಿನ ವಿರುದ್ಧವೂ ಸಮಂಜಸವಾದ ರಕ್ಷಣೆ ನೀಡುತ್ತಿದೆ. ಆದರೆ ಒಮಿಕ್ರಾನ್​ಗೇ ನಿರ್ಧಿಷ್ಟವಾದ ಲಸಿಕೆ ಮಾರ್ಚ್​ ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಫೈಜರ್​ ಕಂಪನಿ ಸಿಇಒ ಅಲ್ಬರ್ಟ್​ ಬೌರ್ಲಾ ತಿಳಿಸಿದ್ದಾರೆ.  

ಬೌರ್ಲಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿ, ಒಮಿಕ್ರಾನ್ ಸೋಂಕಿನ ವಿರುದ್ಧ ಹೋರಾಟಕ್ಕೆ ಮಾರ್ಚ್​ನಲ್ಲಿ ಲಸಿಕೆ ಸಿದ್ಧವಾಗುತ್ತದೆ. ಈ ಲಸಿಕೆಯ ಅಗತ್ಯ ನಮಗೆ ಇದೆಯೇ? ಇಲ್ಲವೇ? ಎಂಬುದು ಗೊತ್ತಿಲ್ಲ. ಅದನ್ನು ಹೇಗೆ ಬಳಸಬಹುದು ಎಂಬುದು ಸದ್ಯಕ್ಕಂತೂ ನನಗೆ ಗೊತ್ತಿಲ್ಲ. ಆದರೆ ಒಮಿಕ್ರಾನ್ ಸೋಂಕಿನ ಮೇಲೆ ಕೇಂದ್ರೀಕರಿಸಿ ಲಸಿಕೆ ತಯಾರಿಸಲಾಗುತ್ತದೆ. ಇದು ಕೇವಲ ಒಮಿಕ್ರಾನ್​ ಅಷ್ಟೇ ಅಲ್ಲ, ಇನ್ನಿತರ ಕೊವಿಡ್​ 19 ತಳಿಗಳ ಮೇಲೆ ಕೂಡ ಪ್ರಭಾವ ಬೀರಬಹುದು ಎಂದು ಹೇಳಲಾಗಿದೆ  ಎಂದು ತಿಳಿಸಿದ್ದಾರೆ.

ಒಮಿಕ್ರಾನ್ ಲಸಿಕೆ ತಯಾರಿಕೆಗೆ ಮಾಡೆರ್ನಾ ಪ್ರಯತ್ನ ಇನ್ನೊಂದೆಡೆ ಮತ್ತೊಂದು ಔಷಧಿ ಕಂಪನಿ ಮಾಡೆರ್ನಾ ಕೂಡ ಒಮಿಕ್ರಾನ್​ ಸೋಂಕನ್ನು ಕೇಂದ್ರೀಕರಿಸಿ ಬೂಸ್ಟರ್ ಡೋಸ್​ ಕೊಡಬಹುದಾದ ಲಸಿಕೆ ಉತ್ಪಾದನೆಯ ಮೇಲೆ ಕೇಂದ್ರೀಕರಿಸಿದೆ ಎಂದು ಮಾಡೆರ್ನಾ ಸಿಇಒ ಸ್ಟೀಫನ್ ಬ್ಯಾನ್ಸೆಲ್ ತಿಳಿಸಿದ್ದಾರೆ.  ವೈರಸ್​ ವಿರುದ್ಧ ಹೋರಾಟ ಮಾಡಲು ನಾವು ಅದಕ್ಕಿಂತಲೂ ಮುಂದೇ ಇರಬೇಕು. ವೈರಸ್​ ಹಿಂದಿದ್ದು, ಅದನ್ನು ಮಣಿಸಲು ಸಾಧ್ಯವಿಲ್ಲ. ಹೀಗಾಗಿ ಒಮಿಕ್ರಾನ್​ ಮತ್ತು ಇತರ ತಳಿಗಳ ವಿರುದ್ಧ ರೋಗನಿರೋಧಕ ಶಕ್ತಿ ಉತ್ತೇಜಿಸುವ ಸಲುವಾಗಿ ಬೂಸ್ಟರ್ ಡೋಸ್​ ಉತ್ಪಾದನೆ ಬಗ್ಗೆ ನಾವು ಯೋಚಿಸುತ್ತಿದ್ದೇವೆ. ಈ ಸಂಬಂಧ ಪ್ರಪಂಚಾದ್ಯಂತ ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ನಾಯಕರೊಂದಿಗೆ ಚರ್ಚಿಸುತ್ತಿದ್ದೇವೆ ಎಂದು ಇತ್ತೀಚೆಗೆ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.  ಕೊವಿಡ್​ 19ನ ರೂಪಾಂತರಿ ಒಮಿಕ್ರಾನ್​ ಇದೀಗ ಭರ್ಜರಿ ಪ್ರಸರಣಗೊಳ್ಳುತ್ತಿದೆ. ಇದರ ಲಕ್ಷಣಗಳು ಸೌಮ್ಯವಾಗಿದ್ದರೂ ಕೂಡ ಹರಡುವಿಕೆ ವೇಗ ಅಧಿಕವಾಗಿದೆ. ಭಾರತದಲ್ಲಿ ನಾಲ್ಕು ಸಾವಿರದ ಗಡಿ ದಾಟಿದೆ.

ಇದನ್ನೂ ಓದಿ: ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ

Follow Us
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ