AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ ಸೋಂಕಿಗೆ ಮಾರ್ಚ್​​ನಲ್ಲಿ ಸಿದ್ಧವಾಗಲಿದೆ ಲಸಿಕೆ; ಫೈಜರ್​ ಕಂಪನಿ ಸಿಇಒ ಭರವಸೆ, ಮಾಡೆರ್ನಾದಿಂದಲೂ ನಡೆಯುತ್ತಿದೆ ಪ್ರಯತ್ನ

ಇನ್ನೊಂದೆಡೆ ಮತ್ತೊಂದು ಔಷಧಿ ಕಂಪನಿ ಮಾಡೆರ್ನಾ ಕೂಡ ಒಮಿಕ್ರಾನ್​ ಸೋಂಕನ್ನು ಕೇಂದ್ರೀಕರಿಸಿ ಬೂಸ್ಟರ್ ಡೋಸ್​ ಕೊಡಬಹುದಾದ ಲಸಿಕೆ ಉತ್ಪಾದನೆಯ ಮೇಲೆ ಕೇಂದ್ರೀಕರಿಸಿದೆ ಎಂದು ಮಾಡೆರ್ನಾ ಸಿಇಒ ಸ್ಟೀಫನ್ ಬ್ಯಾನ್ಸೆಲ್ ತಿಳಿಸಿದ್ದಾರೆ. 

ಒಮಿಕ್ರಾನ್​ ಸೋಂಕಿಗೆ ಮಾರ್ಚ್​​ನಲ್ಲಿ ಸಿದ್ಧವಾಗಲಿದೆ ಲಸಿಕೆ; ಫೈಜರ್​ ಕಂಪನಿ ಸಿಇಒ ಭರವಸೆ, ಮಾಡೆರ್ನಾದಿಂದಲೂ ನಡೆಯುತ್ತಿದೆ ಪ್ರಯತ್ನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 11, 2022 | 12:40 PM

Share

ದೆಹಲಿ: ಜಗತ್ತಿನಲ್ಲಿ ಒಮಿಕ್ರಾನ್​ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಈಗಿರುವ ಕೊವಿಡ್​ 19 ಲಸಿಕೆಗಳು ಒಮಿಕ್ರಾನ್​ ವಿರುದ್ಧ ಹೋರಾಡಲಾರವು ಎಂದು ಈಗಾಗಲೇ ತಜ್ಞರು ಹೇಳಿದ್ದಾರೆ. ಈ ಮಧ್ಯೆ ಅಮೆರಿಕದ ಫಾರ್ಮಾ ಕಂಪನಿ ಫೈಜರ್(Pfizer)​, ಮಾರ್ಚ್​ ತಿಂಗಳಷ್ಟೊತ್ತಿಗೆ ಒಮಿಕ್ರಾನ್​ ಲಸಿಕೆ (Omicron Vaccine)ಸಿದ್ಧವಾಗಲಿದೆ ಎಂದು ಹೇಳಿದೆ.  ಪ್ರಸ್ತುತ ಅಸ್ತಿತ್ವದಲ್ಲಿರುವ ಕೊವಿಡ್​ 19 ಲಸಿಕೆಗಳು ಒಮಿಕ್ರಾನ್​ ಸೋಂಕಿನ ವಿರುದ್ಧವೂ ಸಮಂಜಸವಾದ ರಕ್ಷಣೆ ನೀಡುತ್ತಿದೆ. ಆದರೆ ಒಮಿಕ್ರಾನ್​ಗೇ ನಿರ್ಧಿಷ್ಟವಾದ ಲಸಿಕೆ ಮಾರ್ಚ್​ ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಫೈಜರ್​ ಕಂಪನಿ ಸಿಇಒ ಅಲ್ಬರ್ಟ್​ ಬೌರ್ಲಾ ತಿಳಿಸಿದ್ದಾರೆ.  

ಬೌರ್ಲಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿ, ಒಮಿಕ್ರಾನ್ ಸೋಂಕಿನ ವಿರುದ್ಧ ಹೋರಾಟಕ್ಕೆ ಮಾರ್ಚ್​ನಲ್ಲಿ ಲಸಿಕೆ ಸಿದ್ಧವಾಗುತ್ತದೆ. ಈ ಲಸಿಕೆಯ ಅಗತ್ಯ ನಮಗೆ ಇದೆಯೇ? ಇಲ್ಲವೇ? ಎಂಬುದು ಗೊತ್ತಿಲ್ಲ. ಅದನ್ನು ಹೇಗೆ ಬಳಸಬಹುದು ಎಂಬುದು ಸದ್ಯಕ್ಕಂತೂ ನನಗೆ ಗೊತ್ತಿಲ್ಲ. ಆದರೆ ಒಮಿಕ್ರಾನ್ ಸೋಂಕಿನ ಮೇಲೆ ಕೇಂದ್ರೀಕರಿಸಿ ಲಸಿಕೆ ತಯಾರಿಸಲಾಗುತ್ತದೆ. ಇದು ಕೇವಲ ಒಮಿಕ್ರಾನ್​ ಅಷ್ಟೇ ಅಲ್ಲ, ಇನ್ನಿತರ ಕೊವಿಡ್​ 19 ತಳಿಗಳ ಮೇಲೆ ಕೂಡ ಪ್ರಭಾವ ಬೀರಬಹುದು ಎಂದು ಹೇಳಲಾಗಿದೆ  ಎಂದು ತಿಳಿಸಿದ್ದಾರೆ.

ಒಮಿಕ್ರಾನ್ ಲಸಿಕೆ ತಯಾರಿಕೆಗೆ ಮಾಡೆರ್ನಾ ಪ್ರಯತ್ನ ಇನ್ನೊಂದೆಡೆ ಮತ್ತೊಂದು ಔಷಧಿ ಕಂಪನಿ ಮಾಡೆರ್ನಾ ಕೂಡ ಒಮಿಕ್ರಾನ್​ ಸೋಂಕನ್ನು ಕೇಂದ್ರೀಕರಿಸಿ ಬೂಸ್ಟರ್ ಡೋಸ್​ ಕೊಡಬಹುದಾದ ಲಸಿಕೆ ಉತ್ಪಾದನೆಯ ಮೇಲೆ ಕೇಂದ್ರೀಕರಿಸಿದೆ ಎಂದು ಮಾಡೆರ್ನಾ ಸಿಇಒ ಸ್ಟೀಫನ್ ಬ್ಯಾನ್ಸೆಲ್ ತಿಳಿಸಿದ್ದಾರೆ.  ವೈರಸ್​ ವಿರುದ್ಧ ಹೋರಾಟ ಮಾಡಲು ನಾವು ಅದಕ್ಕಿಂತಲೂ ಮುಂದೇ ಇರಬೇಕು. ವೈರಸ್​ ಹಿಂದಿದ್ದು, ಅದನ್ನು ಮಣಿಸಲು ಸಾಧ್ಯವಿಲ್ಲ. ಹೀಗಾಗಿ ಒಮಿಕ್ರಾನ್​ ಮತ್ತು ಇತರ ತಳಿಗಳ ವಿರುದ್ಧ ರೋಗನಿರೋಧಕ ಶಕ್ತಿ ಉತ್ತೇಜಿಸುವ ಸಲುವಾಗಿ ಬೂಸ್ಟರ್ ಡೋಸ್​ ಉತ್ಪಾದನೆ ಬಗ್ಗೆ ನಾವು ಯೋಚಿಸುತ್ತಿದ್ದೇವೆ. ಈ ಸಂಬಂಧ ಪ್ರಪಂಚಾದ್ಯಂತ ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ನಾಯಕರೊಂದಿಗೆ ಚರ್ಚಿಸುತ್ತಿದ್ದೇವೆ ಎಂದು ಇತ್ತೀಚೆಗೆ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.  ಕೊವಿಡ್​ 19ನ ರೂಪಾಂತರಿ ಒಮಿಕ್ರಾನ್​ ಇದೀಗ ಭರ್ಜರಿ ಪ್ರಸರಣಗೊಳ್ಳುತ್ತಿದೆ. ಇದರ ಲಕ್ಷಣಗಳು ಸೌಮ್ಯವಾಗಿದ್ದರೂ ಕೂಡ ಹರಡುವಿಕೆ ವೇಗ ಅಧಿಕವಾಗಿದೆ. ಭಾರತದಲ್ಲಿ ನಾಲ್ಕು ಸಾವಿರದ ಗಡಿ ದಾಟಿದೆ.

ಇದನ್ನೂ ಓದಿ: ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?