AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತವಿಲ್ಲದೆ ನಮ್ಮ ಆರ್ಥಿಕತೆ ನಡೆಯಲು ಸಾಧ್ಯವಿಲ್ಲ, ತಪ್ಪಿನ ಅರಿವಾಗಿದೆ, ಭಾರತಕ್ಕೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಭೇಟಿ

ಮಾಲ್ಡೀವ್ಸ್​​​​​ಗೆ ತನ್ನ ತಪ್ಪಿನ ಅರಿವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂದಿದೆ ಮಾಲ್ಡೀವ್ಸ್​​ಗೆ. ಭಾರತ ವಿರುದ್ಧ ವಿಷಕಾರುತ್ತಿದ್ದ ಈ ದೇಶಕ್ಕೆ ಈಗ ಬುದ್ಧಿ ಬಂದಿದೆ. ಭಾರತದ ಜತೆಗಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು, ತನ್ನ ಆರ್ಥಿಕತೆಗೆ ಉಂಟಾಗಿರುವ ನಷ್ಟವನ್ನು ತುಂಬಲು ಭಾರತದಿಂದ ಮಾತ್ರ ಸಾಧ್ಯ ಎಂದು ಹೇಳಿದೆ. ಇದೀಗ ಮಾಲ್ಡೀವ್ಸ್​​ನ ವಿದೇಶಾಂಗ ಸಚಿವ ಭಾರತಕ್ಕೆ ಬರುತ್ತಿದ್ದಾರೆ.

ಭಾರತವಿಲ್ಲದೆ ನಮ್ಮ ಆರ್ಥಿಕತೆ ನಡೆಯಲು ಸಾಧ್ಯವಿಲ್ಲ, ತಪ್ಪಿನ ಅರಿವಾಗಿದೆ, ಭಾರತಕ್ಕೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಭೇಟಿ
ಅಕ್ಷಯ್​ ಪಲ್ಲಮಜಲು​​
|

Updated on:May 08, 2024 | 12:25 PM

Share

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ಮಾಲ್ಡೀವ್ಸ್‌ ಸ್ಥಿತಿ ಕೂಡ ಈಗ ಅದೇ ರೀತಿಯಾಗಿದೆ. ಚೀನಾದ ಕೈಯಲ್ಲಿ ಗೊಂಬೆಯಂತೆ ಕುಣಿದ ಮಾಲ್ಡೀವ್ಸ್‌ ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಭಾರತ ವಿರುದ್ಧ ಹೇಳಿಕೆಯನ್ನು ನೀಡಿ ಮಾಲ್ಡೀವ್ಸ್‌ ಕೈ ಸುಟ್ಟುಕೊಂಡಿದೆ. ಇದೀಗ ತನ್ನ ತಪ್ಪಿನ ಅರಿವು ಮಾಲ್ಡೀವ್ಸ್‌ ಗೊತ್ತಾಗಿದೆ. ಭಾರತವಿಲ್ಲದೆ ತನ್ನ ಆರ್ಥಿಕತೆ ನಡೆಯಲು ಸಾಧ್ಯವಿಲ್ಲ ಎಂದು ಮಾಲ್ಡೀವ್ಸ್‌ ತಿಳಿದಿದೆ. ಭಾರತೀಯರ ಹೆಚ್ಚಾಗಿ ಪ್ರವಾಸ ಮಾಡುತ್ತಿದ್ದ ಮಾಲ್ಡೀವ್ಸ್​​​​ಗೆ ಈಗ​​​​ ಪ್ರವಾಸಿಗರೇ ಇಲ್ಲದಂತಾಗಿದೆ. ಪ್ರಧಾನಿ ಮೋದಿ ಹಾಗೂ ಭಾರತ ವಿರುದ್ಧ ನೀಡಿದ ಒಂದು ಹೇಳಿಕೆ, ಮಾಲ್ಡೀವ್ಸ್​​ನ ಆರ್ಥಿಕತೆಯನ್ನೇ ತಲೆಕೆಳಗೆ ಮಾಡಿದೆ. ಇದೀಗ ಈ ನಷ್ಟವನ್ನು ತುಂಬಲು ಹಾಗೂ ತನ್ನ ಆರ್ಥಿಕತೆಯನ್ನು ಬಳಸಪಡಿಸಲು ಭಾರತದ ಅಗತ್ಯವಿದೆ ಎಂದು ಭಾರತದ ಜತೆಗೆ ಮಾತುಕತೆ ನಡೆಸಲು ಮಾಲ್ಡೀವ್ಸ್‌ ಮುಂದಾಗಿದೆ.

ಮಾಲ್ಡೀವ್ಸ್​​​ನಲ್ಲಿರುವ ಭಾರತ ಸೇನೆಯನ್ನು ವಾಪಸ್ಸು ಕರೆಸಿಕೊಳ್ಳವಂತೆ ಹೇಳಿತ್ತು. ಇದಕ್ಕಾಗಿ ಮೇ 10ವರೆಗೆ ಗಡುವು ನೀಡಿತ್ತು. ಆದರೆ ಇದೀಗ ಈ ಗಡುವು ಮುಗಿಯುವ ಮುನ್ನ ಅಂದರೆ ಮೇ 9ಕ್ಕೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಗುರುವಾರ ಭಾರತಕ್ಕೆ ಬರುತ್ತಿದ್ದಾರೆ. ಈ ಬಗ್ಗೆ ಮಾಲ್ಡೀವ್ಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ. ಈ ವೇಳೆ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಈ ಹಿಂದೆ ಚೀನಾದ ಪರವಾಗಿದ್ದು, ಈ ಕಾರಣಕ್ಕೆ ಭಾರತದ 88 ಸೇನಾ ಸಿಬ್ಬಂದಿಗಳನ್ನು ವಾಪಸ್ಸು ಕರೆಸಿಕೊಳ್ಳುವಂತೆ ಹೇಳಿತ್ತು. ಮಾರ್ಚ್ 10 ಮತ್ತು ಮೇ 10ರ ಒಳಗಾಗಿ ತನ್ನ ಸೇನೆಯನ್ನು ಭಾರತಕ್ಕೆ ವಾಪಸ್ಸು ಕರೆಸಿಕೊಳ್ಳಬೇಕು ಎಂದು ಮಾಲ್ಡೀವ್ಸ್ ಫೆಬ್ರವರಿಯಲ್ಲಿ ಹೇಳಿತ್ತು. ಮಾಲ್ಡೀವ್ಸ್‌ನಲ್ಲಿ ನಿಯೋಜಿಸಲಾದ ಎಲ್ಲಾ 80 ಸೇನಾ ಸಿಬ್ಬಂದಿಯನ್ನು ಭಾರತ ಹಿಂತೆಗೆದುಕೊಳ್ಳುವುದಾಗಿ ಹೇಳಿತ್ತು, ಇದಕ್ಕೆ ಎರಡು ರಾಷ್ಟ್ರಗಳು ಒಪ್ಪಿಕೊಂಡಿತ್ತು.

ಕಳೆದ ಮೂರು ತಿಂಗಳಲ್ಲಿ ಭಾರತ ತನ್ನ ಸೇನೆಯನ್ನು ಎರಡು ತಂಡಗಳಾಗಿ ವಾಪಸ್ಸು ಕರೆಸಿಕೊಂಡಿದೆ. 88 ಭಾರತೀಯ ಸೈನಿಕರು, ಎರಡು ಹೆಲಿಕಾಪ್ಟರ್‌ಗಳು ಮತ್ತು ಒಂದು ಡಾರ್ನಿಯರ್ ವಿಮಾನವನ್ನು ಭಾರತ ಮಾಲ್ಡೀವ್ಸ್‌ನಲ್ಲಿ ನಿಯೋಜಿಸಿತ್ತು. ಎರಡು ಹೆಲಿಕಾಪ್ಟರ್‌ಗಳು ಮತ್ತು ಡ್ರೋನರ್ ವಿಮಾನಗಳನ್ನು ಭಾರತವು ಮಾಲ್ಡೀವ್ಸ್‌ಗೆ ನೀಡಿದೆ. ಇದೀಗ ಈ ಗೊಂದಲವನ್ನು ನಿವಾರಿಸಲು ಮಾಲ್ಡೀವ್ಸ್ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಇನ್ನು ಭಾರತದಲ್ಲಿ ಚುನಾವಣೆ ನಡೆಯುತ್ತಿದ್ದು, ಈ ವೇಳೆಯೇ ಮಾಲ್ಡೀವ್ಸ್ ವಿದೇಶಾಂಗ ವ್ಯವಹಾರ ಸಚಿವರು ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಪಾಠ ಕಲಿಯದ ನೇಪಾಳ; ಭಾರತದ ಪ್ರದೇಶಗಳನ್ನು ತನ್ನ ನೋಟಿನಲ್ಲಿ ಮುದ್ರಿಸಲು ನಿರ್ಧಾರ

ಭಾರತಕ್ಕೆ ಮನವಿ ಮಾಡಿದ ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರು

ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿರುವ ಮಧ್ಯೆ, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಸೋಮವಾರ ತಮ್ಮ ದೇಶದ ಪ್ರವಾಸೋದ್ಯಮಕ್ಕೆ ಆರ್ಥಿಕ ಬಲ ನೀಡುವಂತೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ. ನಮಗೊಂದು ಇತಿಹಾಸವಿದೆ. ಭಾರತದ ಜತೆಗೆ ನಮ್ಮ ಸರ್ಕಾರ ಕೂಡ ಒಟ್ಟಾಗಿ ಕೆಲಸ ಮಾಡಲಿದೆ ಎಂದು ಹೇಳಿದರು. ನಾವು ಯಾವಾಗಲೂ ಶಾಂತಿ ಮತ್ತು ಸೌಹಾರ್ದ ಪರಿಸರಕ್ಕೆ ಬೆಂಬಲ ನೀಡುತ್ತೇವೆ. ನಮ್ಮ ಜನರು ಮತ್ತು ಸರ್ಕಾರವು ಭೇಟಿ ನೀಡುವ ಭಾರತೀಯರನ್ನು ಆತ್ಮೀಯವಾಗಿ ಸ್ವಾಗತಿಸುತ್ತದೆ. ಪ್ರವಾಸೋದ್ಯಮ ಸಚಿವನಾಗಿ, ದಯವಿಟ್ಟು ಮಾಲ್ಡೀವ್ಸ್ ಪ್ರವಾಸೋದ್ಯಮದ ಭಾಗವಾಗಲು ನಾನು ಭಾರತೀಯರಿಗೆ ಹೇಳಲು ಬಯಸುತ್ತೇನೆ. ನಮ್ಮ ಆರ್ಥಿಕತೆಯು ಪ್ರವಾಸೋದ್ಯಮವನ್ನು ಅವಲಂಬಿಸಿದೆ ಎಂದು ಹೇಳಿದ್ದಾರೆ.

ಮೋದಿ ಮತ್ತು ಭಾರತವನ್ನು ಟೀಕಿಸಿದ್ದ ಮಾಲ್ಡೀವ್ಸ್

ಜನವರಿ 6 ರಂದು, ಪ್ರಧಾನಿ ಮೋದಿ ಅವರು ಲಕ್ಷದ್ವೀಪದ ಕೆಲವು ಚಿತ್ರಗಳು ಮತ್ತು ವೀಡಿಯೊಗಳನ್ನು ಎಕ್ಸ್​​​ನಲ್ಲಿ ಹಂಚಿಕೊಂಡಿದ್ದರು, ಈ ಬಗ್ಗೆ ಮಾಲ್ಡೀವ್ಸ್‌ನ ಮೂವರು ಸಚಿವರು ಸಾಮಾಜಿಕ ಭಾರತ ಮತ್ತು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿ ತೀವ್ರ ವಿರುದ್ಧ ವ್ಯಕ್ತವಾಗಿದ್ದು, ಜನರು ಸಾಮಾಜಿಕ ಜಾಲತಾಣಗಳಲ್ಲಿ ಮಾಲ್ಡೀವ್ಸ್ ಅನ್ನು ಬಹಿಷ್ಕರಿಸಿ ಪ್ರವಾಸೋದ್ಯಮಕ್ಕೆ ಹೋಗುವುದಿಲ್ಲ ಎಂದು ಅಭಿಯಾನ ನಡೆಸಿದರು. ಇದರ ನಂತರ ಕಳೆದ ವರ್ಷದ ಮೊದಲ ನಾಲ್ಕು ತಿಂಗಳಿಗೆ ಹೋಲಿಸಿದರೆ ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಭಾರತದಿಂದ ಮಾಲ್ಡೀವ್ಸ್​​​ಗೆ ಹೋಗುವ ಪ್ರವಾಸಿಗರ ಸಂಖ್ಯೆ 42 ಪ್ರತಿಶತದಷ್ಟು ಕಡಿಮೆಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 am, Wed, 8 May 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್