AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಟೆಕ್ಸಾಸ್ ಶಾಲೆಯಲ್ಲಿ ಭಾರತೀಯ ಬಾಲಕನಿಗೆ ಸಹಪಾಠಿಯೊಬ್ಬ ನಿಂದಿಸಿ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್, ವ್ಯಾಪಕ ಆಕ್ರೋಶ

ಮೇ 11 ರಂದು ಟೆಕ್ಸಾಸ್‌ನಲ್ಲಿ ಚಿತ್ರೀಕರಿಸಲಾದ ವಿಡಿಯೊದಲ್ಲಿ ಶಾನ್ ಪ್ರೀತ್ಮಣಿ ಕ್ಯಾಮೆರಾದ ಕಡೆಗೆ ಮುಖ ಮಾಡಿ ಕುಳಿತಿರುವುದನ್ನು ತೋರಿಸುತ್ತದೆ. ಬಿಳಿಯ ವಿದ್ಯಾರ್ಥಿಯು ಹಿಂದಿನಿಂದ ಬಂದು...

Watch ಟೆಕ್ಸಾಸ್ ಶಾಲೆಯಲ್ಲಿ ಭಾರತೀಯ ಬಾಲಕನಿಗೆ ಸಹಪಾಠಿಯೊಬ್ಬ ನಿಂದಿಸಿ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್, ವ್ಯಾಪಕ ಆಕ್ರೋಶ
ವೈರಲ್ ವಿಡಿಯೊದ ಚಿತ್ರಗಳು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: May 18, 2022 | 2:42 PM

Share

ದೆಹಲಿ: ಸುಮಾರು 14-15ರ ಹರೆಯದ ಭಾರತೀಯ ಅಮೆರಿಕನ್ ವಿದ್ಯಾರ್ಥಿಯನ್ನು ಅಮೆರಿಕದ ವಿದ್ಯಾರ್ಥಿಯೊಬ್ಬ ನಿಂದಿಸುತ್ತಿರುವ ವಿಡಿಯೊ ವೈರಲ್ (Viral Video) ಆಗಿದ್ದು , ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಮತ್ತು ಖಂಡನೆ ವ್ಯಕ್ತವಾಗುತ್ತಿದೆ. ವಿಡಿಯೊವನ್ನು ಕೊಪ್ಪೆಲ್ ಇಂಡಿಪೆಂಡೆಂಟ್ ಸ್ಕೂಲ್ ಡಿಸ್ಟ್ರಿಕ್ಟ್​​​ನ (Coppell ISD ) ಸಹಪಾಠಿಗಳು ಚಿತ್ರೀಕರಿಸಿ ಶೇರ್ ಮಾಡಿದ್ದಾರೆ. ಶಾನ್ ಪ್ರೀತ್ಮಣಿ ಎಂದು ಗುರುತಿಸಲಾದ ಭಾರತೀಯ ಹುಡುಗನಿಗೆ “ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ್ದಕ್ಕಾಗಿ” 3-ದಿನ ಶಾಲೆಯಲ್ಲಿಯೇ ಅಮಾನತು “ಶಿಕ್ಷೆ” ನೀಡಲಾಗಿದೆ ಎಂದು ತಿಳಿದುಬಂದಿದೆ.  ಮೇ 11 ರಂದು ಟೆಕ್ಸಾಸ್‌ನಲ್ಲಿ ಚಿತ್ರೀಕರಿಸಲಾದ ವಿಡಿಯೊದಲ್ಲಿ ಶಾನ್ ಪ್ರೀತ್ಮಣಿ ಕ್ಯಾಮೆರಾದ ಕಡೆಗೆ ಮುಖ ಮಾಡಿ ಕುಳಿತಿರುವುದನ್ನು ತೋರಿಸುತ್ತದೆ. ಬಿಳಿಯ ವಿದ್ಯಾರ್ಥಿಯು ಹಿಂದಿನಿಂದ ಬಂದು ಶಾನ್​​ನಲ್ಲಿ ಎದ್ದೇಳಲು ಹೇಳುತ್ತಾನೆ. ಶಾನ್ ನಿರಾಕರಿಸಿದಾಗ ಆತನಿಗೆ ಕಿರುಕುಳ ನೀಡುವುದನ್ನು ಮುಂದುವರೆಸುತ್ತಾನೆ ಮತ್ತು ಅವನ ಕುತ್ತಿಗೆಯ ಸುತ್ತ ಕೈಹಾಕಿ ಆತನನ್ನು ಅಲ್ಲಿಂದ ಕೆಳಗೆ ಬೀಳಿಸುತ್ತಾನೆ. ಬಿದ್ದ ಶಾನ್ ಭುಜದ ಮೇಲೆ ಆತ ಮತ್ತಷ್ಟು ಒತ್ತಡ ಹಾಕುತ್ತಿದ್ದರೆ,ಇತರ ವಿದ್ಯಾರ್ಥಿಗಳು ಪ್ರೋತ್ಸಾಹಿಸುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಶಾಲೆಯಿಂದ ಕ್ರಮ ಕೈಗೊಳ್ಳುವಂತೆ ಮತ್ತು ದೌರ್ಜನ್ಯದ ಬಗ್ಗೆ ಜಾಗೃತಿ ಮೂಡಿಸಲು change.org ಮೂಲಕ ಮನವಿ ಮಾಡಲಾಗುತ್ತದೆ.

ವೈರಲ್ ಕ್ಲಿಪ್ ಬೆನ್ಲಲ್ಲೇ , ಡಿಸ್ಟ್ರಿಕ್ಟ್ 14ನಿಂದ  TX SBOE ಅಭ್ಯರ್ಥಿ ಟ್ರೇಸಿ ಫಿಶರ್ ಅವರು ಕೊಪ್ಪೆಲ್ ಐಎಸ್​​ಡಿಯ ಯ ಅಧಿಕೃತ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. “ಬೆದರಿಸುವ, ಮೌಖಿಕ ಮತ್ತು ದೈಹಿಕ ಮತ್ತು ದೈಹಿಕ ಆಕ್ರಮಣಕಾರಿ ಕ್ರಿಯೆಗಳು ಎಂದಿಗೂ ಸ್ವೀಕಾರಾರ್ಹವಲ್ಲ. ನಾವು ಯಾರೊಂದಿಗೂ ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಮತ್ತೊಂದು ಟ್ವೀಟ್‌ನಲ್ಲಿ ಅವರು ಈ ಘಟನೆಯನ್ನು ಸಿಐಎಸ್‌ಡಿ ವಿದ್ಯಾರ್ಥಿ ನೀತಿ ಸಂಹಿತೆಯ ಪ್ರಕಾರ ಶಾಲೆ ಮತ್ತು ಜಿಲ್ಲೆಯಿಂದ ತನಿಖೆ ನಡೆಸಲಾಗುತ್ತಿದೆ, ನಾವು ನೀತಿಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್