AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಟೆಕ್ಸಾಸ್ ಶಾಲೆಯಲ್ಲಿ ಭಾರತೀಯ ಬಾಲಕನಿಗೆ ಸಹಪಾಠಿಯೊಬ್ಬ ನಿಂದಿಸಿ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್, ವ್ಯಾಪಕ ಆಕ್ರೋಶ

ಮೇ 11 ರಂದು ಟೆಕ್ಸಾಸ್‌ನಲ್ಲಿ ಚಿತ್ರೀಕರಿಸಲಾದ ವಿಡಿಯೊದಲ್ಲಿ ಶಾನ್ ಪ್ರೀತ್ಮಣಿ ಕ್ಯಾಮೆರಾದ ಕಡೆಗೆ ಮುಖ ಮಾಡಿ ಕುಳಿತಿರುವುದನ್ನು ತೋರಿಸುತ್ತದೆ. ಬಿಳಿಯ ವಿದ್ಯಾರ್ಥಿಯು ಹಿಂದಿನಿಂದ ಬಂದು...

Watch ಟೆಕ್ಸಾಸ್ ಶಾಲೆಯಲ್ಲಿ ಭಾರತೀಯ ಬಾಲಕನಿಗೆ ಸಹಪಾಠಿಯೊಬ್ಬ ನಿಂದಿಸಿ ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್, ವ್ಯಾಪಕ ಆಕ್ರೋಶ
ವೈರಲ್ ವಿಡಿಯೊದ ಚಿತ್ರಗಳು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: May 18, 2022 | 2:42 PM

Share

ದೆಹಲಿ: ಸುಮಾರು 14-15ರ ಹರೆಯದ ಭಾರತೀಯ ಅಮೆರಿಕನ್ ವಿದ್ಯಾರ್ಥಿಯನ್ನು ಅಮೆರಿಕದ ವಿದ್ಯಾರ್ಥಿಯೊಬ್ಬ ನಿಂದಿಸುತ್ತಿರುವ ವಿಡಿಯೊ ವೈರಲ್ (Viral Video) ಆಗಿದ್ದು , ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಮತ್ತು ಖಂಡನೆ ವ್ಯಕ್ತವಾಗುತ್ತಿದೆ. ವಿಡಿಯೊವನ್ನು ಕೊಪ್ಪೆಲ್ ಇಂಡಿಪೆಂಡೆಂಟ್ ಸ್ಕೂಲ್ ಡಿಸ್ಟ್ರಿಕ್ಟ್​​​ನ (Coppell ISD ) ಸಹಪಾಠಿಗಳು ಚಿತ್ರೀಕರಿಸಿ ಶೇರ್ ಮಾಡಿದ್ದಾರೆ. ಶಾನ್ ಪ್ರೀತ್ಮಣಿ ಎಂದು ಗುರುತಿಸಲಾದ ಭಾರತೀಯ ಹುಡುಗನಿಗೆ “ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ್ದಕ್ಕಾಗಿ” 3-ದಿನ ಶಾಲೆಯಲ್ಲಿಯೇ ಅಮಾನತು “ಶಿಕ್ಷೆ” ನೀಡಲಾಗಿದೆ ಎಂದು ತಿಳಿದುಬಂದಿದೆ.  ಮೇ 11 ರಂದು ಟೆಕ್ಸಾಸ್‌ನಲ್ಲಿ ಚಿತ್ರೀಕರಿಸಲಾದ ವಿಡಿಯೊದಲ್ಲಿ ಶಾನ್ ಪ್ರೀತ್ಮಣಿ ಕ್ಯಾಮೆರಾದ ಕಡೆಗೆ ಮುಖ ಮಾಡಿ ಕುಳಿತಿರುವುದನ್ನು ತೋರಿಸುತ್ತದೆ. ಬಿಳಿಯ ವಿದ್ಯಾರ್ಥಿಯು ಹಿಂದಿನಿಂದ ಬಂದು ಶಾನ್​​ನಲ್ಲಿ ಎದ್ದೇಳಲು ಹೇಳುತ್ತಾನೆ. ಶಾನ್ ನಿರಾಕರಿಸಿದಾಗ ಆತನಿಗೆ ಕಿರುಕುಳ ನೀಡುವುದನ್ನು ಮುಂದುವರೆಸುತ್ತಾನೆ ಮತ್ತು ಅವನ ಕುತ್ತಿಗೆಯ ಸುತ್ತ ಕೈಹಾಕಿ ಆತನನ್ನು ಅಲ್ಲಿಂದ ಕೆಳಗೆ ಬೀಳಿಸುತ್ತಾನೆ. ಬಿದ್ದ ಶಾನ್ ಭುಜದ ಮೇಲೆ ಆತ ಮತ್ತಷ್ಟು ಒತ್ತಡ ಹಾಕುತ್ತಿದ್ದರೆ,ಇತರ ವಿದ್ಯಾರ್ಥಿಗಳು ಪ್ರೋತ್ಸಾಹಿಸುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಶಾಲೆಯಿಂದ ಕ್ರಮ ಕೈಗೊಳ್ಳುವಂತೆ ಮತ್ತು ದೌರ್ಜನ್ಯದ ಬಗ್ಗೆ ಜಾಗೃತಿ ಮೂಡಿಸಲು change.org ಮೂಲಕ ಮನವಿ ಮಾಡಲಾಗುತ್ತದೆ.

ವೈರಲ್ ಕ್ಲಿಪ್ ಬೆನ್ಲಲ್ಲೇ , ಡಿಸ್ಟ್ರಿಕ್ಟ್ 14ನಿಂದ  TX SBOE ಅಭ್ಯರ್ಥಿ ಟ್ರೇಸಿ ಫಿಶರ್ ಅವರು ಕೊಪ್ಪೆಲ್ ಐಎಸ್​​ಡಿಯ ಯ ಅಧಿಕೃತ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. “ಬೆದರಿಸುವ, ಮೌಖಿಕ ಮತ್ತು ದೈಹಿಕ ಮತ್ತು ದೈಹಿಕ ಆಕ್ರಮಣಕಾರಿ ಕ್ರಿಯೆಗಳು ಎಂದಿಗೂ ಸ್ವೀಕಾರಾರ್ಹವಲ್ಲ. ನಾವು ಯಾರೊಂದಿಗೂ ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಮತ್ತೊಂದು ಟ್ವೀಟ್‌ನಲ್ಲಿ ಅವರು ಈ ಘಟನೆಯನ್ನು ಸಿಐಎಸ್‌ಡಿ ವಿದ್ಯಾರ್ಥಿ ನೀತಿ ಸಂಹಿತೆಯ ಪ್ರಕಾರ ಶಾಲೆ ಮತ್ತು ಜಿಲ್ಲೆಯಿಂದ ತನಿಖೆ ನಡೆಸಲಾಗುತ್ತಿದೆ, ನಾವು ನೀತಿಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!