Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ವಿಪರೀತ ಚಳಿಗೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳ ಸಾವು

2.6 Lakh livestock die due to cold wave in Afghanistan: ಅಫ್ಘಾನಿಸ್ತಾನದ ಉತ್ತರ ಭಾಗದ ಬಾಲ್ಕ್, ಜವಝಾನ್ ಮತ್ತು ಪಂಜಶೀರ್ ಪ್ರಾಂತ್ಯಗಳಲ್ಲಿ ಕೋಲ್ಡ್ ವೇವ್​ನಿಂದ ಅತಿ ಹೆಚ್ಚು ಸಾವು ನೋವುಗಳಾಗಿರುವುದು ತಿಳಿದುಬಂದಿದೆ. ಒಟ್ಟಾರೆ 20 ಪ್ರಾಂತ್ಯಗಳಿಂದ 2.6 ಲಕ್ಷ ಜಾನುವಾರುಗಳು ಸಾವನ್ನಪ್ಪಿವೆ. ಇವುಗಳ ಪೈಕಿ 1.29 ಲಕ್ಷದಷ್ಟು ಜಾನುವಾರುಗಳು ಮೇಕೆ ಮತ್ತು ಕುರಿಗಳೇ ಆಗಿವೆ.

Afghanistan: ಅಫ್ಘಾನಿಸ್ತಾನದಲ್ಲಿ ವಿಪರೀತ ಚಳಿಗೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳ ಸಾವು
ಅಫ್ಘಾನಿಸ್ತಾನದಲ್ಲಿ ಚಳಿImage Credit source: ANI
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 28, 2023 | 3:41 PM

ಕಾಬೂಲ್: ಅಫ್ಘಾನಿಸ್ತಾನ ದೇಶದಲ್ಲಿ ಶೀತ ಗಾಳಿಯ ಕಾಟ (Cold Wave) ಮುಂದುವರಿದಿದ್ದು ಕಳೆದೆರಡು ವಾರಗಳಿಂದ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳು (Livestock death) ಶೀತದ ಕಾರಣದಿಂದ ಮೃತಪಟ್ಟಿವೆ ಎಂದು ಆ ದೇಶದ ಸುದ್ದಿ ಸಂಸ್ಥೆ ಟೋಲೋ ನ್ಯೂಸ್ ವರದಿ ಮಾಡಿದೆ.

ದೇಶದ ಉತ್ತರ ಭಾಗದ ಬಾಲ್ಕ್, ಜವಝಾನ್ ಮತ್ತು ಪಂಜಶೀರ್ ಪ್ರಾಂತ್ಯಗಳಲ್ಲಿ ಕೋಲ್ಡ್ ವೇವ್​ನಿಂದ ಅತಿ ಹೆಚ್ಚು ಸಾವು ನೋವುಗಳಾಗಿರುವುದು ತಿಳಿದುಬಂದಿದೆ. ಒಟ್ಟಾರೆ ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 20 ಪ್ರಾಂತ್ಯಗಳಿಂದ 2.6 ಲಕ್ಷ ಜಾನುವಾರುಗಳು ಸಾವನ್ನಪ್ಪಿವೆ. ಇವುಗಳ ಪೈಕಿ 1.29 ಲಕ್ಷದಷ್ಟು ಜಾನುವಾರುಗಳು ಮೇಕೆ ಮತ್ತು ಕುರಿಗಳೇ ಆಗಿವೆ.

ಶೀತದ ಅಲೆಯ ಜೊತೆಗೆ ಮೇವಿನ ಕೊರತೆಯಿಂದಲೂ ಜಾನುವಾರುಗಳು ಸಾವನ್ನಪ್ಪುತ್ತಿವೆ ಎಂದು ಇಲ್ಲಿನ ಕೆಲ ರೈತರು ಅಳಲು ವ್ಯಕ್ತಪಡಿಸುತ್ತಿದ್ದು, ತಾಲಿಬಾನ್ ಸರ್ಕಾರದಿಂದ ಅಗತ್ಯ ನೆರವಿಗಾಗಿ ಯಾಚಿಸುತ್ತಿದ್ದಾರೆ.

ಅಫ್ಘಾನಿಸ್ತಾನದಲ್ಲಿ 2021ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಬಹಳ ಸಂಕಷ್ಟದ ಪರಿಸ್ಥಿತಿ ಏರ್ಪಟ್ಟಿದೆ. ಅಂತಾರಾಷ್ಟ್ರೀಯ ನೆರವು ಕಡಿಮೆಯಾಗಿ ಆ ದೇಶದ ಆರ್ಥಿಕ ವ್ಯವಸ್ಥೆ ಶೋಚನೀಯ ಸ್ಥಿತಿ ತಲುಪಿದೆ. ಅನ್ನಾಹಾರ ಇತ್ಯಾದಿ ಅಗತ್ಯ ವಸ್ತುಗಳ ಕೊರತೆ ಕಾಡುತ್ತಿದೆ. ವಿದ್ಯುತ್ ಅಭಾವ ಇತ್ಯಾದಿ ಮೂಲ ಸೌಕರ್ಯಗಳ ಕೊರತೆಯೂ ಇದೆ.

ಇದರ ಜೊತೆಗೆ ಅಫ್ಘಾನಿಸ್ತಾನದಲ್ಲಿ ಈಗ ಮಹಿಳೆಯರು ಶಾಲೆ ಹೋಗುವುದನ್ನು ನಿರ್ಬಂಧಿಸಲಾಗಿದೆ. ತಾಲಿಬಾನ್ ಆಡಳಿತದ ಇಂಥ ಹಲವು ಕ್ರಮಗಳಿಂದಾಗಿ ಅಫ್ಘಾನಿಸ್ತಾನಕ್ಕೆ ಅಂತಾರಾಷ್ಟ್ರೀಯ ನೆರವು ಸಿಗುವುದು ಇನ್ನೂ ದುಸ್ತರವಾಗಿದೆ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್