AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ವಿಪರೀತ ಚಳಿಗೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳ ಸಾವು

2.6 Lakh livestock die due to cold wave in Afghanistan: ಅಫ್ಘಾನಿಸ್ತಾನದ ಉತ್ತರ ಭಾಗದ ಬಾಲ್ಕ್, ಜವಝಾನ್ ಮತ್ತು ಪಂಜಶೀರ್ ಪ್ರಾಂತ್ಯಗಳಲ್ಲಿ ಕೋಲ್ಡ್ ವೇವ್​ನಿಂದ ಅತಿ ಹೆಚ್ಚು ಸಾವು ನೋವುಗಳಾಗಿರುವುದು ತಿಳಿದುಬಂದಿದೆ. ಒಟ್ಟಾರೆ 20 ಪ್ರಾಂತ್ಯಗಳಿಂದ 2.6 ಲಕ್ಷ ಜಾನುವಾರುಗಳು ಸಾವನ್ನಪ್ಪಿವೆ. ಇವುಗಳ ಪೈಕಿ 1.29 ಲಕ್ಷದಷ್ಟು ಜಾನುವಾರುಗಳು ಮೇಕೆ ಮತ್ತು ಕುರಿಗಳೇ ಆಗಿವೆ.

Afghanistan: ಅಫ್ಘಾನಿಸ್ತಾನದಲ್ಲಿ ವಿಪರೀತ ಚಳಿಗೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳ ಸಾವು
ಅಫ್ಘಾನಿಸ್ತಾನದಲ್ಲಿ ಚಳಿImage Credit source: ANI
TV9 Web
| Edited By: |

Updated on: Jan 28, 2023 | 3:41 PM

Share

ಕಾಬೂಲ್: ಅಫ್ಘಾನಿಸ್ತಾನ ದೇಶದಲ್ಲಿ ಶೀತ ಗಾಳಿಯ ಕಾಟ (Cold Wave) ಮುಂದುವರಿದಿದ್ದು ಕಳೆದೆರಡು ವಾರಗಳಿಂದ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳು (Livestock death) ಶೀತದ ಕಾರಣದಿಂದ ಮೃತಪಟ್ಟಿವೆ ಎಂದು ಆ ದೇಶದ ಸುದ್ದಿ ಸಂಸ್ಥೆ ಟೋಲೋ ನ್ಯೂಸ್ ವರದಿ ಮಾಡಿದೆ.

ದೇಶದ ಉತ್ತರ ಭಾಗದ ಬಾಲ್ಕ್, ಜವಝಾನ್ ಮತ್ತು ಪಂಜಶೀರ್ ಪ್ರಾಂತ್ಯಗಳಲ್ಲಿ ಕೋಲ್ಡ್ ವೇವ್​ನಿಂದ ಅತಿ ಹೆಚ್ಚು ಸಾವು ನೋವುಗಳಾಗಿರುವುದು ತಿಳಿದುಬಂದಿದೆ. ಒಟ್ಟಾರೆ ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 20 ಪ್ರಾಂತ್ಯಗಳಿಂದ 2.6 ಲಕ್ಷ ಜಾನುವಾರುಗಳು ಸಾವನ್ನಪ್ಪಿವೆ. ಇವುಗಳ ಪೈಕಿ 1.29 ಲಕ್ಷದಷ್ಟು ಜಾನುವಾರುಗಳು ಮೇಕೆ ಮತ್ತು ಕುರಿಗಳೇ ಆಗಿವೆ.

ಶೀತದ ಅಲೆಯ ಜೊತೆಗೆ ಮೇವಿನ ಕೊರತೆಯಿಂದಲೂ ಜಾನುವಾರುಗಳು ಸಾವನ್ನಪ್ಪುತ್ತಿವೆ ಎಂದು ಇಲ್ಲಿನ ಕೆಲ ರೈತರು ಅಳಲು ವ್ಯಕ್ತಪಡಿಸುತ್ತಿದ್ದು, ತಾಲಿಬಾನ್ ಸರ್ಕಾರದಿಂದ ಅಗತ್ಯ ನೆರವಿಗಾಗಿ ಯಾಚಿಸುತ್ತಿದ್ದಾರೆ.

ಅಫ್ಘಾನಿಸ್ತಾನದಲ್ಲಿ 2021ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಬಹಳ ಸಂಕಷ್ಟದ ಪರಿಸ್ಥಿತಿ ಏರ್ಪಟ್ಟಿದೆ. ಅಂತಾರಾಷ್ಟ್ರೀಯ ನೆರವು ಕಡಿಮೆಯಾಗಿ ಆ ದೇಶದ ಆರ್ಥಿಕ ವ್ಯವಸ್ಥೆ ಶೋಚನೀಯ ಸ್ಥಿತಿ ತಲುಪಿದೆ. ಅನ್ನಾಹಾರ ಇತ್ಯಾದಿ ಅಗತ್ಯ ವಸ್ತುಗಳ ಕೊರತೆ ಕಾಡುತ್ತಿದೆ. ವಿದ್ಯುತ್ ಅಭಾವ ಇತ್ಯಾದಿ ಮೂಲ ಸೌಕರ್ಯಗಳ ಕೊರತೆಯೂ ಇದೆ.

ಇದರ ಜೊತೆಗೆ ಅಫ್ಘಾನಿಸ್ತಾನದಲ್ಲಿ ಈಗ ಮಹಿಳೆಯರು ಶಾಲೆ ಹೋಗುವುದನ್ನು ನಿರ್ಬಂಧಿಸಲಾಗಿದೆ. ತಾಲಿಬಾನ್ ಆಡಳಿತದ ಇಂಥ ಹಲವು ಕ್ರಮಗಳಿಂದಾಗಿ ಅಫ್ಘಾನಿಸ್ತಾನಕ್ಕೆ ಅಂತಾರಾಷ್ಟ್ರೀಯ ನೆರವು ಸಿಗುವುದು ಇನ್ನೂ ದುಸ್ತರವಾಗಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ