AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccine ಆಕ್ಸ್‌ಫರ್ಡ್ ವಿವಿ ಪ್ರಯೋಗದ ಮೊದಲ ಹಂತದ ವರದಿ ಬಿಡುಗಡೆ!

[lazy-load-videos-and-sticky-control id=”rK3ShpMzpMY”] ದೆಹಲಿ: ಇಂದು ಆಕ್ಸ್‌ಫರ್ಡ್ ವಿವಿಯಿಂದ ಕೊರೊನಾ ಔಷಧಿ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ. ಮೊದಲ ಹಂತದ ಪ್ರಯೋಗದ ವರದಿ ಇಂದು ಬಿಡುಗಡೆಯಾಗಲಿದ್ದು, ಲ್ಯಾನ್ಸೆಟ್ ಮೆಡಿಕಲ್ ಜರ್ನಲ್ ವಕ್ತಾರರಿಂದ ಈ ಬಗ್ಗೆ ಮಾಹಿತಿ ಸಿಗಲಿದೆ. ಅಸ್ಟ್ರಾಜೆನೆಕ್ ಫಾರ್ಮಾಸೂಟಿಕಲ್ಸ್ ಜತೆಗೂಡಿ ಕೊರೊನಾಗೆ ಔಷಧ ಅಭಿವೃದ್ಧಿಪಡಿಸುತ್ತಿರುವ ಆಕ್ಸ್‌ಫರ್ಡ್ 1, 2ನೇ ಹಂತದಲ್ಲಿ ಮಾನವನ ಮೇಲಿನ ಪ್ರಯೋಗ ಪೂರ್ಣಗೊಳಿಸಿದೆ. ಮೂರನೇ ಹಂತದಲ್ಲಿ ಸಾವಿರಾರು ಜನರ ಮೇಲೆ ಔಷಧಿ ಪ್ರಯೋಗ ಮಾಡಬೇಕಿದೆ. ಈವರೆಗಿನ ಪ್ರಯೋಗದಲ್ಲಿ ಶೇ.80ರಷ್ಟು ಪರಿಣಾಮಕಾರಿಯಾಗಿದೆ. ಔಷಧ ಪ್ರಯೋಗ ಯಶಸ್ವಿಯಾದರೆ […]

Covid Vaccine ಆಕ್ಸ್‌ಫರ್ಡ್ ವಿವಿ  ಪ್ರಯೋಗದ ಮೊದಲ ಹಂತದ ವರದಿ ಬಿಡುಗಡೆ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 20, 2020 | 1:22 PM

Share

[lazy-load-videos-and-sticky-control id=”rK3ShpMzpMY”]

ದೆಹಲಿ: ಇಂದು ಆಕ್ಸ್‌ಫರ್ಡ್ ವಿವಿಯಿಂದ ಕೊರೊನಾ ಔಷಧಿ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ. ಮೊದಲ ಹಂತದ ಪ್ರಯೋಗದ ವರದಿ ಇಂದು ಬಿಡುಗಡೆಯಾಗಲಿದ್ದು, ಲ್ಯಾನ್ಸೆಟ್ ಮೆಡಿಕಲ್ ಜರ್ನಲ್ ವಕ್ತಾರರಿಂದ ಈ ಬಗ್ಗೆ ಮಾಹಿತಿ ಸಿಗಲಿದೆ.

ಅಸ್ಟ್ರಾಜೆನೆಕ್ ಫಾರ್ಮಾಸೂಟಿಕಲ್ಸ್ ಜತೆಗೂಡಿ ಕೊರೊನಾಗೆ ಔಷಧ ಅಭಿವೃದ್ಧಿಪಡಿಸುತ್ತಿರುವ ಆಕ್ಸ್‌ಫರ್ಡ್ 1, 2ನೇ ಹಂತದಲ್ಲಿ ಮಾನವನ ಮೇಲಿನ ಪ್ರಯೋಗ ಪೂರ್ಣಗೊಳಿಸಿದೆ. ಮೂರನೇ ಹಂತದಲ್ಲಿ ಸಾವಿರಾರು ಜನರ ಮೇಲೆ ಔಷಧಿ ಪ್ರಯೋಗ ಮಾಡಬೇಕಿದೆ. ಈವರೆಗಿನ ಪ್ರಯೋಗದಲ್ಲಿ ಶೇ.80ರಷ್ಟು ಪರಿಣಾಮಕಾರಿಯಾಗಿದೆ. ಔಷಧ ಪ್ರಯೋಗ ಯಶಸ್ವಿಯಾದರೆ ಈ ವರ್ಷವೇ 200 ಕೋಟಿ ಔಷಧ ಉತ್ಪಾದನೆಯ ಗುರಿ ಹಾಕಿಕೊಂಡಿದೆ.

ಸದ್ಯ ಆಕ್ಸ್‌ಫರ್ಡ್ ವಿವಿ ಔಷಧಿಯು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿ ಯಶಸ್ವಿಯಾಗಿದೆ. ಪ್ರಾಣಿಗಳ ಮೇಲಿನ ಪ್ರಯೋಗದಲ್ಲಿ ನ್ಯೂಮೋನಿಯಾ ಕಂಡು ಬಂದಿಲ್ಲ. ಔಷಧಿಯಿಂದ ವೈರಸ್ ಸಾವನ್ನಪ್ಪಿವೆ‌. ಈಗ ಬ್ರೆಜಿಲ್‌ನ ಕೊರೊನಾ ರೋಗಿಗಳ ಮೇಲೆ ಆಕ್ಸ್‌ಫರ್ಡ್ ವಿವಿಯ ಔಷಧ ಪ್ರಯೋಗ ಮಾಡಲಾಗಿದೆ. ಮೊದಲ ಹಂತದ ಪ್ರಯೋಗದ ವರದಿ ಜುಲೈ 20ರ ಸೋಮವಾರ ಅಂದ್ರೆ ಇಂದು ಬಿಡುಗಡೆಯಾಗಲಿದೆ.

ಮನುಷ್ಯರ ಮೇಲೆ ಮೂರನೇ ಹಂತದ ಪ್ರಯೋಗ ಮಾತ್ರ ಬಾಕಿ ಇದೆ. 3ನೇ ಹಂತದಲ್ಲಿ ಸಾವಿರಾರು ಜನರ ಮೇಲೆ ಪ್ರಯೋಗ ಮಾಡಲಾಗುತ್ತೆ. ಆಕ್ಸ್‌ಫರ್ಡ್ ವಿವಿ ಔಷಧಿಗೆ ‘AZD 1222’ ಎಂದು ಹೆಸರಿಡಲಾಗಿದೆ. ಮತ್ತೊಂದೆಡೆ ಆಮೆರಿಕಾದ ಮೋಡರ್ನಾ ಕಂಪನಿಯು ಜುಲೈ 27 ರಿಂದ ಮೂರನೇ ಹಂತದ ಪ್ರಯೋಗ ಆರಂಭಿಸಲಿದೆ.

Published On - 10:12 am, Mon, 20 July 20

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ