ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೂ ಹಾತೊರೆಯಲಿದೆ ಪಾಕಿಸ್ತಾನ
ಭಾರತವು ಸಿಂಧೂ ನದಿ ನೀರು ಒಪ್ಪಂದ ಸ್ಥಗಿತಗೊಳಿಸಿದ್ದಕ್ಕೆ ಕೋಪದಲ್ಲಿ ನವದೆಹಲಿಯೊಂದಿಗಿನ ಎಲ್ಲಾ ವ್ಯಾಪಾರ ಸಂಬಂಧವನ್ನೂ ಇಸ್ಲಾಮಾಬಾದ್ ಕಡಿತಗೊಳಿಸಿದ್ದು, ತಮ್ಮ ತಲೆಯ ಮೇಲೆ ತಾವೇ ಚಪ್ಪಡಿ ಎಳೆದುಕೊಡಿದೆ. ಪಾಕಿಸ್ತಾನ ತಾವಾಗಿಯೇ ತೆಗೆದುಕೊಂಡ ನಿರ್ಧಾರ ತಮಗೇ ಉಲ್ಟಾ ಹೊಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಕೋಪದಲ್ಲಿ ಕೊಯ್ದುಕೊಂಡ ಮೂಗು ಮತ್ತೆ ಬಾರದು ಎನ್ನುವ ಗಾದೆ ಇವರಿಗೆ ಹೇಳಿ ಮಾಡಿಸಿದಂತಿದೆ. ಪಾಕಿಸ್ತಾನ ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೈ ಹಾತೊರೆಯುವ ಸಾಧ್ಯತೆ ಹೆಚ್ಚಿದೆ.

ಇಸ್ಲಾಮಾಬಾದ್, ಏಪ್ರಿಲ್ 27: ಪಾಕಿಸ್ತಾನ(Pakistan) ತಾವಾಗಿಯೇ ತೆಗೆದುಕೊಂಡ ನಿರ್ಧಾರ ತಮಗೇ ಉಲ್ಟಾ ಹೊಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಕೋಪದಲ್ಲಿ ಕೊಯ್ದುಕೊಂಡ ಮೂಗು ಮತ್ತೆ ಬಾರದು ಎನ್ನುವ ಗಾದೆ ಇವರಿಗೆ ಹೇಳಿ ಮಾಡಿಸಿದಂತಿದೆ. ಪಾಕಿಸ್ತಾನ ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೂ ಹಾತೊರೆಯುವ ಸಾಧ್ಯತೆ ಹೆಚ್ಚಿದೆ.
ಒಂದೆಡೆ ಪಹಲ್ಗಾಮ್ ಭಯೋತ್ಪಾದನಾ ದಾಳಿ ಬಳಿಕ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರ, ಭಾರತದಿಂದ ನೆರೆಯ ರಾಷ್ಟ್ರಕ್ಕೆ ಒಂದು ಹನಿ ನೀರನ್ನೂ ಹರಿಸದಿರಲು ಪ್ರತಿಜ್ಞೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನವೂ ಭಾರತೊಂದಿಗಿನ ಎಲ್ಲಾ ವ್ಯಾಪಾರ ಸಂಬಂಧವನ್ನು ಕಡಿತಗೊಳಿಸಿದೆ.
ಆದರೆ ಅವರ ನಿರ್ಧಾರ ಅವರಿಗೇ ಮುಳುವಾಗುವಂತಾ ಲಕ್ಷಣಗಳು ಗೋಚರಿಸುತ್ತಿವೆ. ಪಾಕಿಸ್ತಾನದ ಔಷಧ ನಿಯಂತ್ರಣ ಪ್ರಾಧಿಕಾರ (DRAP) ಔಷಧ ಕ್ಷೇತ್ರದ ಮೇಲಿನ ನಿರ್ಬಂಧಗಳ ಪರಿಣಾಮದ ಕುರಿತು ಯಾವುದೇ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಿಲ್ಲ. ಆದರೆ ಔಷಧಿಗಳ ಕೊರತೆ ಉಂಟಾಗದಂತೆ ತುರ್ತು ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ನಮ್ಮ ಔಷಧ ಅಗತ್ಯಗಳನ್ನು ಪೂರೈಸಲು ನಾವು ಪರ್ಯಾಯ ಮಾರ್ಗಗಳನ್ನು ನೋಡುತ್ತಿದ್ದೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಓದಿ: Indus Waters Treaty: ಭಾರತದಿಂದ ಸಿಂಧೂ ನದಿ ನೀರು ಒಪ್ಪಂದ ಸ್ಥಗಿತ, ಪಾಕಿಸ್ತಾನಕ್ಕಾಗುವ ನಷ್ಟವೇನು?
ಪಾಕಿಸ್ತಾನ DRAP ಚೀನಾ, ರಷ್ಯಾ ಮತ್ತು ಹಲವಾರು ಯುರೋಪಿಯನ್ ದೇಶಗಳಿಂದ ಪರ್ಯಾಯ ಮೂಲಗಳನ್ನು ಹುಡುಕುತ್ತಿದೆ. ರೇಬೀಸ್ ವಿರೋಧಿ ಲಸಿಕೆ, ಹಾವಿನ ವಿಷ ವಿರೋಧಿ, ಕ್ಯಾನ್ಸರ್ ಔಷಧಿಗಳು ಇತ್ಯಾದಿಗಳ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ.
ವ್ಯವಹಾರ ಸ್ಥಗಿತಗೊಳಿಸುವಿಕೆಯ ಪರಿಣಾಮಗಳನ್ನು ಎದುರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ದೊಡ್ಡ ಸಮಸ್ಯೆ ಉದ್ಭವಿಸಬಹುದು ಎಂದು ಉದ್ಯಮ ಮೂಲಗಳು ಮತ್ತು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಔಷಧಿಗಳ ಕಾಳಸಂತೆ ಹೆಚ್ಚಳವಾಗುವ ಭಯವೂ ಇದೆ. ಪೂರೈಕೆ ಸರಪಳಿಯಲ್ಲಿನ ಅಡಚಣೆಯಿಂದಾಗಿ ತೀವ್ರ ಕೊರತೆ ಉಂಟಾಗಬಹುದು ಎಂದು ಔಷಧ ವಲಯವು ಭಯಪಡುತ್ತಿದೆ. ಅಲ್ಲಿ ಔಷಧಿಗಳಿಗೆ ಬೇಕಾಗುವ ಕಚ್ಚಾ ವಸ್ತುಗಳ ಶೇಕಡಾ 30 ರಿಂದ 40 ರಷ್ಟು ಭಾರತದಿಂದ ಬರುತ್ತವೆ.
ಪಹಲ್ಗಾಮ್ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ ಇಸ್ಲಾಮಾಬಾದ್ ಗುರುವಾರ ನವದೆಹಲಿಯೊಂದಿಗಿನ ಎಲ್ಲಾ ವ್ಯಾಪಾರವನ್ನು ಸ್ಥಗಿತಗೊಳಿಸಿದೆ ಮತ್ತು ಇತರ ಕ್ರಮಗಳು ಸೇರಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:46 am, Sun, 27 April 25