ಭಯೋತ್ಪಾದನೆಯನ್ನು ಹೋರಾಟವೆಂದು ಕರೆದು ಮತ್ತೆ ಭಾರತದ ವಿರುದ್ಧ ವಿಷ ಕಾರಿದ ಆಸಿಮ್ ಮುನೀರ್

ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಮತ್ತೊಮ್ಮೆ ಕಾಶ್ಮೀರದ ಮೇಲೆ ವಿಷ ಕಾರಿದ್ದಾರೆ. ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರನ್ನು ಮುನೀರ್ ಹೊಗಳಿದರು ಮತ್ತು ಅವರನ್ನು ಹುತಾತ್ಮರು ಎಂದು ಕರೆದರು. ಇದಲ್ಲದೇ, ಭಾರತದ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು "ಕಾನೂನುಬದ್ಧ ಹೋರಾಟ" ಎಂದು ಕರೆದ ಪಾಕ್ ಸೇನಾ ಮುಖ್ಯಸ್ಥರು, ಪಾಕಿಸ್ತಾನದಿಂದ ಅವರಿಗೆ ರಾಜಕೀಯ, ನೈತಿಕ ಮತ್ತು ರಾಜತಾಂತ್ರಿಕ ಬೆಂಬಲವನ್ನು ನೀಡುವುದನ್ನು ಮುಂದುವರೆಸುವುದಾಗಿ ಭರವಸೆ ನೀಡಿದ್ದಾರೆ.

ಭಯೋತ್ಪಾದನೆಯನ್ನು ಹೋರಾಟವೆಂದು ಕರೆದು ಮತ್ತೆ ಭಾರತದ ವಿರುದ್ಧ ವಿಷ ಕಾರಿದ ಆಸಿಮ್ ಮುನೀರ್
ಆಸಿಮ್ ಮುನೀರ್

Updated on: Jun 29, 2025 | 12:25 PM

ಇಸ್ಲಾಮಾಬಾದ್, ಜೂನ್ 29:ಪಾಕಿಸ್ತಾನದ ಫೀಲ್ಡ್​ ಮಾರ್ಷಲ್ ಆಸಿಮ್ ಮುನೀರ್(Asim Munir) ಮತ್ತೊಮ್ಮೆ ಭಾರತದ ವಿರುದ್ಧ ವಿಷ ಕಾರಿದ್ದಾರೆ. ಆಸಿಮ್ ಮುನೀರ್ ಭಯೋತ್ಪಾದನೆಯನ್ನು ಹೋರಾಟ ಎಂದು ಕರೆದು ಬೆಂಬಲಿಸುವ ಮಾತನಾಡಿದ್ದಾರೆ. ಭಯೋತ್ಪಾದನೆಗೆ ನಾವು ರಾಜಕೀಯ-ತಾಂತ್ರಿಕ ಮತ್ತು ನೈತಿಕ ಬೆಂಬಲ ನೀಡುವುದನ್ನು ಮುಂದುವರೆಸುತ್ತೇವೆ. ಕಾಶ್ಮೀರಿ ಜನರ ಹಕ್ಕುಗಳು ಮತ್ತು  ದೀರ್ಘಕಾಲದ ವಿವಾದದ ಪರಿಹಾರಕ್ಕಾಗಿ ನಾವು ದೃಢವಾಗಿ ನಿಲ್ಲುತ್ತೇವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ ಹಾಗೂ ಕಾಶ್ಮೀರದ ಜನರ ಆಕಾಂಕ್ಷೆಗಳ ಪ್ರಕಾರ, ಭಾರತವು ಭಯೋತ್ಪಾದನೆ ಎಂದು ಕರೆಯುವುದು ವಾಸ್ತವವಾಗಿ ಕಾನೂನುಬದ್ಧ ಹೋರಾಟವಾಗಿದೆ ಎಂದು ಆಸಿಮ್ ಹೇಳಿದ್ದಾರೆ.

ಕಾಶ್ಮೀರ ಸಮಸ್ಯೆಗೆ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರವಿಲ್ಲದೆ, ಪ್ರಾದೇಶಿಕ ಶಾಂತಿ ಯಾವಾಗಲೂ ಸಾಧಿಸಲಾಗದು ಮತ್ತು ದಕ್ಷಿಣ ಏಷ್ಯಾ ಯಾವಾಗಲೂ ಅಪಾಯದಲ್ಲಿದೆ ಎಂಬುದನ್ನು ಜಗತ್ತು ಅರ್ಥಮಾಡಿಕೊಳ್ಳಬೇಕು.

ಜೆಕೆಯಲ್ಲಿ ಸ್ವನಿರ್ಣಯದ ಹಕ್ಕಿಗಾಗಿ ಹೋರಾಡುತ್ತಿರುವವರಿಗೆ ನಾನು ಗೌರವ ಸಲ್ಲಿಸುತ್ತೇನೆ, ಅವರ ಪರಿಶ್ರಮ ಎಂದಿಗೂ ಕಡಿಮೆಯಾಗುವುದಿಲ್ಲ ಎಂದು ಮುನೀರ್ ಹೇಳಿದ್ದಾರೆ.

ಭಾರತದ ಸ್ಪಷ್ಟ ಉತ್ತರ
ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಭಾರತ ಪದೇ ಪದೇ ಸ್ಪಷ್ಟಪಡಿಸಿದೆ, ಇದರ ಸಾಂವಿಧಾನಿಕ ಸ್ಥಾನಮಾನವನ್ನು ಆಗಸ್ಟ್ 5, 2019 ರಂದು ಮತ್ತಷ್ಟು ಸ್ಪಷ್ಟಪಡಿಸಲಾಯಿತು.ಪಾಕಿಸ್ತಾನವು ಕಾಶ್ಮೀರದಲ್ಲಿ ಕೋಮು ದ್ವೇಷ ಮತ್ತು ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ, ಭಾರತವು ಪಾಕಿಸ್ತಾನವನ್ನು ಭಯೋತ್ಪಾದನೆಯ ಕೇಂದ್ರವೆಂದು ಬಣ್ಣಿಸಿದೆ. ವಿಶೇಷವಾಗಿ ಲಷ್ಕರ್-ಎ-ತೊಯ್ಬಾ, ಜೈಶ್-ಎ-ಮೊಹಮ್ಮದ್ ಮತ್ತು ಟಿಆರ್‌ಎಫ್‌ನಂತಹ ಸಂಘಟನೆಗಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಭಯೋತ್ಪಾದಕರಿಗೆ ಮಿಲಿಟರಿ ತರಬೇತಿ, ಹಣಕಾಸು ಮತ್ತು ಲಾಜಿಸ್ಟಿಕಲ್ ಬೆಂಬಲವನ್ನು ನೀಡುತ್ತದೆ ಎಂದು ಆರೋಪಿಸಿದೆ.

ಮತ್ತಷ್ಟು ಓದಿ: Video: ಥೂ ನಾಚಿಕೆಯಾಗ್ಬೇಕು ನಿಮ್ಗೆ, ಭಾರತದ ವಿರುದ್ಧ ಸದಾ ಕತ್ತಿ ಮಸೆಯುವ ಮುನೀರ್​ಗೆ ಅಮೆರಿಕದಲ್ಲಿ ಅವಮರ್ಯಾದೆ

 

ಪಾಕಿಸ್ತಾನದ ಆರ್ಥಿಕತೆಯು ಕುಸಿದಿರುವ ಸಮಯದಲ್ಲಿ ಅಸಿಮ್ ಮುನೀರ್ ಈ ಹೇಳಿಕೆ ನೀಡಿದ್ದಾರೆ. ವಜಿರಿಸ್ತಾನ್, ಬಲೂಚಿಸ್ತಾನ್ ಮತ್ತು ಖೈಬರ್ ಪಖ್ತುನ್ಖ್ವಾದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚುತ್ತಿವೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪಾಕಿಸ್ತಾನವು ಒಬ್ಬಂಟಿಯಾಗುತ್ತಿದೆ.ಪಾಕಿಸ್ತಾನದ ಹಳೆಯ ತಂತ್ರವಾಗಿದ್ದು, ಆಂತರಿಕ ಸಮಸ್ಯೆಗಳಿಂದ ತನ್ನ ನಾಗರಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಶ್ಮೀರದ ವಿಷಯವನ್ನು ಬಳಸಲಾಗುತ್ತಿದೆ.

ಪಾಕಿಸ್ತಾನವು ಆಗಾಗ ವಿಶ್ವಸಂಸ್ಥೆಯ ನಿರ್ಣಯಗಳ ಬಗ್ಗೆ ಮಾತನಾಡುತ್ತದೆ, ಆದರೆ ಸತ್ಯವೇನೆಂದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ 47 (1948) ಪಾಕಿಸ್ತಾನವು ಮೊದಲು ಎಲ್ಲಾ ಭಯೋತ್ಪಾದಕರನ್ನು ತನ್ನ ಪ್ರದೇಶದಿಂದ ತೆಗೆದುಹಾಕಬೇಕು ಎಂಬ ಸ್ಪಷ್ಟ ಷರತ್ತು ಹೊಂದಿತ್ತು.ಆದರೆ ಅದು ಇಲ್ಲಿಯವರೆಗೆ ಆಗಿಲ್ಲ. ಪಾಕಿಸ್ತಾನ ಎಂದಿಗೂ ಶಾಂತಿ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಮತ್ತು ಭಯೋತ್ಪಾದನೆಯನ್ನು ಮಾತ್ರ ಉತ್ತೇಜಿಸಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us