AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಪ್ರಧಾನಿಯನ್ನು ಬೆನ್ನತ್ತಿದ ಸಂಕಷ್ಟ; 50 ಸಾವಿರ ರೂ.ದಂಡ ವಿಧಿಸಿದ ಚುನಾವಣಾ ಆಯೋಗ

ಸ್ವಾತ್​​ನಲ್ಲಿ ಚುನಾವಣಾ ರ್ಯಾಲಿ ನಡೆಸದಂತೆ, ಸಾರ್ವಜನಿಕ ಭಾಷಣ ಮಾಡದಂತೆ ಇಮ್ರಾನ್ ಖಾನ್​ಗೆ ಮಾರ್ಚ್​ 15ರಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು.

ಪಾಕಿಸ್ತಾನ ಪ್ರಧಾನಿಯನ್ನು ಬೆನ್ನತ್ತಿದ ಸಂಕಷ್ಟ; 50 ಸಾವಿರ ರೂ.ದಂಡ ವಿಧಿಸಿದ ಚುನಾವಣಾ ಆಯೋಗ
ಇಮ್ರಾನ್ ಖಾನ್​
TV9 Web
| Edited By: |

Updated on:Mar 23, 2022 | 5:25 PM

Share

ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್​ಗೆ (Pakistan PM Imran Khan) ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಬಂದೊದಗುತ್ತಿವೆ. ಸದ್ಯ ಅವರು ನಿರ್ಗಮನಕ್ಕೆ ಸಿದ್ಧರಾಗಿರುವ ಪ್ರಧಾನಿ ಎಂದೇ ಹೇಳಲಾಗುತ್ತಿದೆ. ಈಗಾಗಲೇ ಸೇನಾ ಆಡಳಿತ ಅವರ ಬಳಿ ರಾಜೀನಾಮೆ ನೀಡುವಂತೆ ಕೇಳಿದ್ದಾಗಿ ಪಾಕಿಸ್ತಾನದ ಕ್ಯಾಪಿಟಲ್​ ಟಿವಿ ಎಂಬ ಸುದ್ದಿ ಮಾಧ್ಯಮ ವರದಿ ಮಾಡಿದೆ. ಇದೀಗ ಇಮ್ರಾನ್​ ಖಾನ್​ಗೆ ಇನ್ನೊಂದು ಸಮಸ್ಯೆ ಎದುರಾಗಿದ್ದು, ಪಾಕಿಸ್ತಾನದ ಚುನಾವಣಾ ಆಯೋಗ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಚುನಾವಣೆ ನಿಮಿತ್ತ ಸ್ವಾತ್​​ ಎಂಬಲ್ಲಿ ಇಮ್ರಾನ್ ಖಾನ್​ ರ್ಯಾಲಿ ನಡೆಸಿದ್ದರು. ಈ ಮೂಲಕ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಇಷ್ಟು ಮೊತ್ತದ ದಂಡ ವಿಧಿಸುತ್ತಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಸ್ವಾತ್​​ನಲ್ಲಿ ಚುನಾವಣಾ ರ್ಯಾಲಿ ನಡೆಸದಂತೆ, ಸಾರ್ವಜನಿಕ ಭಾಷಣ ಮಾಡದಂತೆ ಇಮ್ರಾನ್ ಖಾನ್​ಗೆ ಮಾರ್ಚ್​ 15ರಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು. ಅಲ್ಲಿ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಯಾವುದೇ ಸಾರ್ವಜನಿಕ ಆಡಳಿತ ಹುದ್ದೆಯಲ್ಲಿರುವವರೂ ಅಲ್ಲಿಗೆ ಭೇಟಿ ನೀಡಬಾರದು ಎಂದು ಪಾಕಿಸ್ತಾನ ಚುನಾವಣಾ ಆಯೋಗ ಹೇಳಿತ್ತು. ಆದರೆ ಇಮ್ರಾನ್​ ಖಾನ್ ಅದನ್ನು ಕಿವಿ ಮೇಲೆ ಹಾಕಿಕೊಳ್ಳಲಿಲ್ಲ.  ರ್ಯಾಲಿ ನಡೆಸಿದ್ದಕ್ಕೆ ಎಲೆಕ್ಷನ್​ ಕಮಿಷನ್​ ಇಮ್ರಾನ್ ಖಾನ್​ಗೆ ಎರಡು ನೋಟಿಸ್​ ಕೂಡ ನೀಡಿತ್ತು. ಆದರೆ ಇಮ್ರಾನ್​ ಖಾನ್ ನೋಟಿಸ್​ ಕಳಿಸಿದ್ದರ ವಿರುದ್ಧ ಇಸ್ಲಮಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಈ ವಿಚಾರದಲ್ಲಿ ಅಂತರ ಕಾಯ್ದುಕೊಂಡಿತ್ತು.

ಪಾಕಿಸ್ತಾನದಲ್ಲಿ ಸದ್ಯ ರಾಜಕೀಯ ಅಸ್ಥಿರತೆ ಉಂಟಾಗಿದೆ. ಈ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿದ ಜನರಲ್​ ಬಾಜ್ವಾ ಮತ್ತು ಉಳಿದ ಮೂವರು ಹಿರಿಯ ಲೆಫ್ಟಿನೆಂಟ್​ಗಳು ಇಮ್ರಾನ್​ಖಾನ್​​ರಿಂದ ರಾಜೀನಾಮೆ ಪಡೆಯುವ ನಿರ್ಧಾರ ಮಾಡಿದ್ದಾರೆ. ಸಭೆ ಬಳಿಕ ಬಾಜ್ವಾ ಮತ್ತು ಪಾಕ್​ ಗೂಢಚಾರಿ ಲೆಫ್ಟಿನೆಂಟ್ ಜನರಲ್​ ನದೀಮ್​ ಅಂಜುಮ್​ ಸೇರಿ ಇಮ್ರಾನ್ ಖಾನ್​ರನ್ನು ಭೇಟಿಯಾಗಿ, ರಾಜೀನಾಮೆ ನೀಡಬೇಕಾಗಿ ತಿಳಿಸಿದ್ದಾರೆಂದು ಪಾಕ್  ಮಾಧ್ಯಮಗಳಲ್ಲಿ ಹೇಳಲಾಗಿದೆ.

ಇದನ್ನೂ ಓದಿ:  ರಸ್ತೆ ಬದಿಯಲ್ಲಿ ಬಿದ್ದಿದ್ದ ಮಿಠಾಯಿ ತಿಂದು ನಾಲ್ವರು ಮಕ್ಕಳು ಸಾವು; ಪೊಲೀಸರಿಂದ ತನಿಖೆ ಪ್ರಾರಂಭ

Published On - 5:16 pm, Wed, 23 March 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?