AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಪ್ರಧಾನಿಯನ್ನು ಬೆನ್ನತ್ತಿದ ಸಂಕಷ್ಟ; 50 ಸಾವಿರ ರೂ.ದಂಡ ವಿಧಿಸಿದ ಚುನಾವಣಾ ಆಯೋಗ

ಸ್ವಾತ್​​ನಲ್ಲಿ ಚುನಾವಣಾ ರ್ಯಾಲಿ ನಡೆಸದಂತೆ, ಸಾರ್ವಜನಿಕ ಭಾಷಣ ಮಾಡದಂತೆ ಇಮ್ರಾನ್ ಖಾನ್​ಗೆ ಮಾರ್ಚ್​ 15ರಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು.

ಪಾಕಿಸ್ತಾನ ಪ್ರಧಾನಿಯನ್ನು ಬೆನ್ನತ್ತಿದ ಸಂಕಷ್ಟ; 50 ಸಾವಿರ ರೂ.ದಂಡ ವಿಧಿಸಿದ ಚುನಾವಣಾ ಆಯೋಗ
ಇಮ್ರಾನ್ ಖಾನ್​
Follow us
TV9 Web
| Updated By: Lakshmi Hegde

Updated on:Mar 23, 2022 | 5:25 PM

ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್​ಗೆ (Pakistan PM Imran Khan) ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಬಂದೊದಗುತ್ತಿವೆ. ಸದ್ಯ ಅವರು ನಿರ್ಗಮನಕ್ಕೆ ಸಿದ್ಧರಾಗಿರುವ ಪ್ರಧಾನಿ ಎಂದೇ ಹೇಳಲಾಗುತ್ತಿದೆ. ಈಗಾಗಲೇ ಸೇನಾ ಆಡಳಿತ ಅವರ ಬಳಿ ರಾಜೀನಾಮೆ ನೀಡುವಂತೆ ಕೇಳಿದ್ದಾಗಿ ಪಾಕಿಸ್ತಾನದ ಕ್ಯಾಪಿಟಲ್​ ಟಿವಿ ಎಂಬ ಸುದ್ದಿ ಮಾಧ್ಯಮ ವರದಿ ಮಾಡಿದೆ. ಇದೀಗ ಇಮ್ರಾನ್​ ಖಾನ್​ಗೆ ಇನ್ನೊಂದು ಸಮಸ್ಯೆ ಎದುರಾಗಿದ್ದು, ಪಾಕಿಸ್ತಾನದ ಚುನಾವಣಾ ಆಯೋಗ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಚುನಾವಣೆ ನಿಮಿತ್ತ ಸ್ವಾತ್​​ ಎಂಬಲ್ಲಿ ಇಮ್ರಾನ್ ಖಾನ್​ ರ್ಯಾಲಿ ನಡೆಸಿದ್ದರು. ಈ ಮೂಲಕ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಇಷ್ಟು ಮೊತ್ತದ ದಂಡ ವಿಧಿಸುತ್ತಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಸ್ವಾತ್​​ನಲ್ಲಿ ಚುನಾವಣಾ ರ್ಯಾಲಿ ನಡೆಸದಂತೆ, ಸಾರ್ವಜನಿಕ ಭಾಷಣ ಮಾಡದಂತೆ ಇಮ್ರಾನ್ ಖಾನ್​ಗೆ ಮಾರ್ಚ್​ 15ರಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು. ಅಲ್ಲಿ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಯಾವುದೇ ಸಾರ್ವಜನಿಕ ಆಡಳಿತ ಹುದ್ದೆಯಲ್ಲಿರುವವರೂ ಅಲ್ಲಿಗೆ ಭೇಟಿ ನೀಡಬಾರದು ಎಂದು ಪಾಕಿಸ್ತಾನ ಚುನಾವಣಾ ಆಯೋಗ ಹೇಳಿತ್ತು. ಆದರೆ ಇಮ್ರಾನ್​ ಖಾನ್ ಅದನ್ನು ಕಿವಿ ಮೇಲೆ ಹಾಕಿಕೊಳ್ಳಲಿಲ್ಲ.  ರ್ಯಾಲಿ ನಡೆಸಿದ್ದಕ್ಕೆ ಎಲೆಕ್ಷನ್​ ಕಮಿಷನ್​ ಇಮ್ರಾನ್ ಖಾನ್​ಗೆ ಎರಡು ನೋಟಿಸ್​ ಕೂಡ ನೀಡಿತ್ತು. ಆದರೆ ಇಮ್ರಾನ್​ ಖಾನ್ ನೋಟಿಸ್​ ಕಳಿಸಿದ್ದರ ವಿರುದ್ಧ ಇಸ್ಲಮಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಈ ವಿಚಾರದಲ್ಲಿ ಅಂತರ ಕಾಯ್ದುಕೊಂಡಿತ್ತು.

ಪಾಕಿಸ್ತಾನದಲ್ಲಿ ಸದ್ಯ ರಾಜಕೀಯ ಅಸ್ಥಿರತೆ ಉಂಟಾಗಿದೆ. ಈ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿದ ಜನರಲ್​ ಬಾಜ್ವಾ ಮತ್ತು ಉಳಿದ ಮೂವರು ಹಿರಿಯ ಲೆಫ್ಟಿನೆಂಟ್​ಗಳು ಇಮ್ರಾನ್​ಖಾನ್​​ರಿಂದ ರಾಜೀನಾಮೆ ಪಡೆಯುವ ನಿರ್ಧಾರ ಮಾಡಿದ್ದಾರೆ. ಸಭೆ ಬಳಿಕ ಬಾಜ್ವಾ ಮತ್ತು ಪಾಕ್​ ಗೂಢಚಾರಿ ಲೆಫ್ಟಿನೆಂಟ್ ಜನರಲ್​ ನದೀಮ್​ ಅಂಜುಮ್​ ಸೇರಿ ಇಮ್ರಾನ್ ಖಾನ್​ರನ್ನು ಭೇಟಿಯಾಗಿ, ರಾಜೀನಾಮೆ ನೀಡಬೇಕಾಗಿ ತಿಳಿಸಿದ್ದಾರೆಂದು ಪಾಕ್  ಮಾಧ್ಯಮಗಳಲ್ಲಿ ಹೇಳಲಾಗಿದೆ.

ಇದನ್ನೂ ಓದಿ:  ರಸ್ತೆ ಬದಿಯಲ್ಲಿ ಬಿದ್ದಿದ್ದ ಮಿಠಾಯಿ ತಿಂದು ನಾಲ್ವರು ಮಕ್ಕಳು ಸಾವು; ಪೊಲೀಸರಿಂದ ತನಿಖೆ ಪ್ರಾರಂಭ

Published On - 5:16 pm, Wed, 23 March 22

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು