ಪಾಕಿಸ್ತಾನ ಪ್ರಧಾನಿಯನ್ನು ಬೆನ್ನತ್ತಿದ ಸಂಕಷ್ಟ; 50 ಸಾವಿರ ರೂ.ದಂಡ ವಿಧಿಸಿದ ಚುನಾವಣಾ ಆಯೋಗ

ಸ್ವಾತ್​​ನಲ್ಲಿ ಚುನಾವಣಾ ರ್ಯಾಲಿ ನಡೆಸದಂತೆ, ಸಾರ್ವಜನಿಕ ಭಾಷಣ ಮಾಡದಂತೆ ಇಮ್ರಾನ್ ಖಾನ್​ಗೆ ಮಾರ್ಚ್​ 15ರಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು.

ಪಾಕಿಸ್ತಾನ ಪ್ರಧಾನಿಯನ್ನು ಬೆನ್ನತ್ತಿದ ಸಂಕಷ್ಟ; 50 ಸಾವಿರ ರೂ.ದಂಡ ವಿಧಿಸಿದ ಚುನಾವಣಾ ಆಯೋಗ
ಇಮ್ರಾನ್ ಖಾನ್​
Follow us
| Updated By: Lakshmi Hegde

Updated on:Mar 23, 2022 | 5:25 PM

ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್​ಗೆ (Pakistan PM Imran Khan) ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಬಂದೊದಗುತ್ತಿವೆ. ಸದ್ಯ ಅವರು ನಿರ್ಗಮನಕ್ಕೆ ಸಿದ್ಧರಾಗಿರುವ ಪ್ರಧಾನಿ ಎಂದೇ ಹೇಳಲಾಗುತ್ತಿದೆ. ಈಗಾಗಲೇ ಸೇನಾ ಆಡಳಿತ ಅವರ ಬಳಿ ರಾಜೀನಾಮೆ ನೀಡುವಂತೆ ಕೇಳಿದ್ದಾಗಿ ಪಾಕಿಸ್ತಾನದ ಕ್ಯಾಪಿಟಲ್​ ಟಿವಿ ಎಂಬ ಸುದ್ದಿ ಮಾಧ್ಯಮ ವರದಿ ಮಾಡಿದೆ. ಇದೀಗ ಇಮ್ರಾನ್​ ಖಾನ್​ಗೆ ಇನ್ನೊಂದು ಸಮಸ್ಯೆ ಎದುರಾಗಿದ್ದು, ಪಾಕಿಸ್ತಾನದ ಚುನಾವಣಾ ಆಯೋಗ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಚುನಾವಣೆ ನಿಮಿತ್ತ ಸ್ವಾತ್​​ ಎಂಬಲ್ಲಿ ಇಮ್ರಾನ್ ಖಾನ್​ ರ್ಯಾಲಿ ನಡೆಸಿದ್ದರು. ಈ ಮೂಲಕ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಇಷ್ಟು ಮೊತ್ತದ ದಂಡ ವಿಧಿಸುತ್ತಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಸ್ವಾತ್​​ನಲ್ಲಿ ಚುನಾವಣಾ ರ್ಯಾಲಿ ನಡೆಸದಂತೆ, ಸಾರ್ವಜನಿಕ ಭಾಷಣ ಮಾಡದಂತೆ ಇಮ್ರಾನ್ ಖಾನ್​ಗೆ ಮಾರ್ಚ್​ 15ರಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು. ಅಲ್ಲಿ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಯಾವುದೇ ಸಾರ್ವಜನಿಕ ಆಡಳಿತ ಹುದ್ದೆಯಲ್ಲಿರುವವರೂ ಅಲ್ಲಿಗೆ ಭೇಟಿ ನೀಡಬಾರದು ಎಂದು ಪಾಕಿಸ್ತಾನ ಚುನಾವಣಾ ಆಯೋಗ ಹೇಳಿತ್ತು. ಆದರೆ ಇಮ್ರಾನ್​ ಖಾನ್ ಅದನ್ನು ಕಿವಿ ಮೇಲೆ ಹಾಕಿಕೊಳ್ಳಲಿಲ್ಲ.  ರ್ಯಾಲಿ ನಡೆಸಿದ್ದಕ್ಕೆ ಎಲೆಕ್ಷನ್​ ಕಮಿಷನ್​ ಇಮ್ರಾನ್ ಖಾನ್​ಗೆ ಎರಡು ನೋಟಿಸ್​ ಕೂಡ ನೀಡಿತ್ತು. ಆದರೆ ಇಮ್ರಾನ್​ ಖಾನ್ ನೋಟಿಸ್​ ಕಳಿಸಿದ್ದರ ವಿರುದ್ಧ ಇಸ್ಲಮಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಈ ವಿಚಾರದಲ್ಲಿ ಅಂತರ ಕಾಯ್ದುಕೊಂಡಿತ್ತು.

ಪಾಕಿಸ್ತಾನದಲ್ಲಿ ಸದ್ಯ ರಾಜಕೀಯ ಅಸ್ಥಿರತೆ ಉಂಟಾಗಿದೆ. ಈ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿದ ಜನರಲ್​ ಬಾಜ್ವಾ ಮತ್ತು ಉಳಿದ ಮೂವರು ಹಿರಿಯ ಲೆಫ್ಟಿನೆಂಟ್​ಗಳು ಇಮ್ರಾನ್​ಖಾನ್​​ರಿಂದ ರಾಜೀನಾಮೆ ಪಡೆಯುವ ನಿರ್ಧಾರ ಮಾಡಿದ್ದಾರೆ. ಸಭೆ ಬಳಿಕ ಬಾಜ್ವಾ ಮತ್ತು ಪಾಕ್​ ಗೂಢಚಾರಿ ಲೆಫ್ಟಿನೆಂಟ್ ಜನರಲ್​ ನದೀಮ್​ ಅಂಜುಮ್​ ಸೇರಿ ಇಮ್ರಾನ್ ಖಾನ್​ರನ್ನು ಭೇಟಿಯಾಗಿ, ರಾಜೀನಾಮೆ ನೀಡಬೇಕಾಗಿ ತಿಳಿಸಿದ್ದಾರೆಂದು ಪಾಕ್  ಮಾಧ್ಯಮಗಳಲ್ಲಿ ಹೇಳಲಾಗಿದೆ.

ಇದನ್ನೂ ಓದಿ:  ರಸ್ತೆ ಬದಿಯಲ್ಲಿ ಬಿದ್ದಿದ್ದ ಮಿಠಾಯಿ ತಿಂದು ನಾಲ್ವರು ಮಕ್ಕಳು ಸಾವು; ಪೊಲೀಸರಿಂದ ತನಿಖೆ ಪ್ರಾರಂಭ

Published On - 5:16 pm, Wed, 23 March 22

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು