AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಪ್ರಧಾನಿಯನ್ನು ಬೆನ್ನತ್ತಿದ ಸಂಕಷ್ಟ; 50 ಸಾವಿರ ರೂ.ದಂಡ ವಿಧಿಸಿದ ಚುನಾವಣಾ ಆಯೋಗ

ಸ್ವಾತ್​​ನಲ್ಲಿ ಚುನಾವಣಾ ರ್ಯಾಲಿ ನಡೆಸದಂತೆ, ಸಾರ್ವಜನಿಕ ಭಾಷಣ ಮಾಡದಂತೆ ಇಮ್ರಾನ್ ಖಾನ್​ಗೆ ಮಾರ್ಚ್​ 15ರಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು.

ಪಾಕಿಸ್ತಾನ ಪ್ರಧಾನಿಯನ್ನು ಬೆನ್ನತ್ತಿದ ಸಂಕಷ್ಟ; 50 ಸಾವಿರ ರೂ.ದಂಡ ವಿಧಿಸಿದ ಚುನಾವಣಾ ಆಯೋಗ
ಇಮ್ರಾನ್ ಖಾನ್​
TV9 Web
| Edited By: |

Updated on:Mar 23, 2022 | 5:25 PM

Share

ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್​ಗೆ (Pakistan PM Imran Khan) ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಬಂದೊದಗುತ್ತಿವೆ. ಸದ್ಯ ಅವರು ನಿರ್ಗಮನಕ್ಕೆ ಸಿದ್ಧರಾಗಿರುವ ಪ್ರಧಾನಿ ಎಂದೇ ಹೇಳಲಾಗುತ್ತಿದೆ. ಈಗಾಗಲೇ ಸೇನಾ ಆಡಳಿತ ಅವರ ಬಳಿ ರಾಜೀನಾಮೆ ನೀಡುವಂತೆ ಕೇಳಿದ್ದಾಗಿ ಪಾಕಿಸ್ತಾನದ ಕ್ಯಾಪಿಟಲ್​ ಟಿವಿ ಎಂಬ ಸುದ್ದಿ ಮಾಧ್ಯಮ ವರದಿ ಮಾಡಿದೆ. ಇದೀಗ ಇಮ್ರಾನ್​ ಖಾನ್​ಗೆ ಇನ್ನೊಂದು ಸಮಸ್ಯೆ ಎದುರಾಗಿದ್ದು, ಪಾಕಿಸ್ತಾನದ ಚುನಾವಣಾ ಆಯೋಗ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಚುನಾವಣೆ ನಿಮಿತ್ತ ಸ್ವಾತ್​​ ಎಂಬಲ್ಲಿ ಇಮ್ರಾನ್ ಖಾನ್​ ರ್ಯಾಲಿ ನಡೆಸಿದ್ದರು. ಈ ಮೂಲಕ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಇಷ್ಟು ಮೊತ್ತದ ದಂಡ ವಿಧಿಸುತ್ತಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಸ್ವಾತ್​​ನಲ್ಲಿ ಚುನಾವಣಾ ರ್ಯಾಲಿ ನಡೆಸದಂತೆ, ಸಾರ್ವಜನಿಕ ಭಾಷಣ ಮಾಡದಂತೆ ಇಮ್ರಾನ್ ಖಾನ್​ಗೆ ಮಾರ್ಚ್​ 15ರಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು. ಅಲ್ಲಿ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಯಾವುದೇ ಸಾರ್ವಜನಿಕ ಆಡಳಿತ ಹುದ್ದೆಯಲ್ಲಿರುವವರೂ ಅಲ್ಲಿಗೆ ಭೇಟಿ ನೀಡಬಾರದು ಎಂದು ಪಾಕಿಸ್ತಾನ ಚುನಾವಣಾ ಆಯೋಗ ಹೇಳಿತ್ತು. ಆದರೆ ಇಮ್ರಾನ್​ ಖಾನ್ ಅದನ್ನು ಕಿವಿ ಮೇಲೆ ಹಾಕಿಕೊಳ್ಳಲಿಲ್ಲ.  ರ್ಯಾಲಿ ನಡೆಸಿದ್ದಕ್ಕೆ ಎಲೆಕ್ಷನ್​ ಕಮಿಷನ್​ ಇಮ್ರಾನ್ ಖಾನ್​ಗೆ ಎರಡು ನೋಟಿಸ್​ ಕೂಡ ನೀಡಿತ್ತು. ಆದರೆ ಇಮ್ರಾನ್​ ಖಾನ್ ನೋಟಿಸ್​ ಕಳಿಸಿದ್ದರ ವಿರುದ್ಧ ಇಸ್ಲಮಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಈ ವಿಚಾರದಲ್ಲಿ ಅಂತರ ಕಾಯ್ದುಕೊಂಡಿತ್ತು.

ಪಾಕಿಸ್ತಾನದಲ್ಲಿ ಸದ್ಯ ರಾಜಕೀಯ ಅಸ್ಥಿರತೆ ಉಂಟಾಗಿದೆ. ಈ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿದ ಜನರಲ್​ ಬಾಜ್ವಾ ಮತ್ತು ಉಳಿದ ಮೂವರು ಹಿರಿಯ ಲೆಫ್ಟಿನೆಂಟ್​ಗಳು ಇಮ್ರಾನ್​ಖಾನ್​​ರಿಂದ ರಾಜೀನಾಮೆ ಪಡೆಯುವ ನಿರ್ಧಾರ ಮಾಡಿದ್ದಾರೆ. ಸಭೆ ಬಳಿಕ ಬಾಜ್ವಾ ಮತ್ತು ಪಾಕ್​ ಗೂಢಚಾರಿ ಲೆಫ್ಟಿನೆಂಟ್ ಜನರಲ್​ ನದೀಮ್​ ಅಂಜುಮ್​ ಸೇರಿ ಇಮ್ರಾನ್ ಖಾನ್​ರನ್ನು ಭೇಟಿಯಾಗಿ, ರಾಜೀನಾಮೆ ನೀಡಬೇಕಾಗಿ ತಿಳಿಸಿದ್ದಾರೆಂದು ಪಾಕ್  ಮಾಧ್ಯಮಗಳಲ್ಲಿ ಹೇಳಲಾಗಿದೆ.

ಇದನ್ನೂ ಓದಿ:  ರಸ್ತೆ ಬದಿಯಲ್ಲಿ ಬಿದ್ದಿದ್ದ ಮಿಠಾಯಿ ತಿಂದು ನಾಲ್ವರು ಮಕ್ಕಳು ಸಾವು; ಪೊಲೀಸರಿಂದ ತನಿಖೆ ಪ್ರಾರಂಭ

Published On - 5:16 pm, Wed, 23 March 22

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು