AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನಕ್ಕೆ ಆರ್ಥಿಕ ನೆರವು ನೀಡುವಂತೆ ಬಿಲ್​ಗೇಟ್ಸ್​​ಗೆ ಒತ್ತಾಯ ಮಾಡಿದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​

Pakistan: ಪಾಕಿಸ್ತಾನದಲ್ಲಿ ಪೋಲಿಯೋ ಲಸಿಕೆ ನೀಡುವ ತಂಡದ ಮೇಲೆ ಭಯೋತ್ಪಾದಕರು ಪದೇಪದೆ ದಾಳಿ ನಡೆಸುತ್ತಿದ್ದಾರೆ. ಈ ಲಸಿಕೆ ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಬಲವಾಗಿ ನಂಬಿರುವ ಅವರು, ಲಸಿಕೆ ಹಾಕಲು ಬಿಡುತ್ತಿಲ್ಲ.

ಅಫ್ಘಾನಿಸ್ತಾನಕ್ಕೆ ಆರ್ಥಿಕ ನೆರವು ನೀಡುವಂತೆ ಬಿಲ್​ಗೇಟ್ಸ್​​ಗೆ ಒತ್ತಾಯ ಮಾಡಿದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​
ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​​
TV9 Web
| Edited By: |

Updated on: Oct 07, 2021 | 4:06 PM

Share

ಇಸ್ಲಮಾಬಾದ್​:  ಆಗಸ್ಟ್​ನಲ್ಲಿ ತಾಲಿಬಾನಿಗಳ ಆಡಳಿತಕ್ಕೆ ಒಳಪಟ್ಟ ಅಫ್ಘಾನಿಸ್ತಾನ (Afghanistan)ದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಅಲ್ಲಿನ ಜನರಿಗೆ ಮಾನವೀಯ ನೆರವು ನೀಡಿ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​, ಬಿಲಿಯನೇರ್​ ಬಿಲ್​ಗೇಟ್ಸ್​​ರನ್ನು ಒತ್ತಾಯಿಸಿದ್ದಾರೆ. ಬಿಲ್ ಆ್ಯಂಡ್​ ಮೆಲಿಂದಾ ಗೇಟ್ಸ್​ ಫೌಂಡೇಶನ್​ (BMGF)ನ ಸಹ ಅಧ್ಯಕ್ಷರೂ ಆಗಿರುವ ಬಿಲ್​ಗೇಟ್ಸ್​ ಬಳಿ ಇಮ್ರಾನ್​ ಖಾನ್ ಮಂಗಳವಾರವೇ ಈ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಪೋಲಿಯೋ ನಿರ್ಮೂಲನಾ ಪ್ರಯತ್ನಗಳು ಮತ್ತು ಪೌಷ್ಟಿಕಾಂಶಗಳ ಅಭಿವೃದ್ಧಿಗಾಗಿ ಬಿಎಂಜಿಎಫ್​ನ ಸಹಕಾರವನ್ನೂ ಅವರು ಕೇಳಿದ್ದಾರೆ. ಇದೇ ಹೊತ್ತಲ್ಲಿ ಅಫ್ಘಾನಿಸ್ತಾನಕ್ಕೂ ಆರ್ಥಿಕ ನೆರವು ನೀಡಲು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಫ್ಘಾನಿಸ್ತಾನದಲ್ಲಿ ಅರ್ಧಕ್ಕಿಂತಲೂ ಹೆಚ್ಚಿನ ಜನರು ಬಡತನ ರೇಖೆಗಿಂತ ಕೆಳಗಿನ ಮಟ್ಟದ ಜೀವನ ನಡೆಸುತ್ತಿದ್ದಾರೆ. ಆ ದೇಶದ ಜನರಿಗೆ ಈಗ ಹಣಕಾಸಿನ ನೆರವು ತುಂಬ ಅಗತ್ಯ ಇದೆ. ಹೀಗಾಗಿ  ನೀವು ಮಾನವೀಯತೆಯ ನೆರವೆಂದು ಪರಿಗಣಿಸಿ ಅವರಿಗೆ ಹಣಕಾಸಿನ ಸಹಾಯ ಮಾಡಿ ಎಂದು ಇಮ್ರಾನ್ ಖಾನ್​ ಬಿಲ್​ಗೇಟ್ಸ್​ ಬಳಿ ಕೇಳಿದ್ದಾಗಿ ಪಾಕ್​ ಪ್ರಧಾನಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.  ಇನ್ನು ಪಾಕಿಸ್ತಾನದಲ್ಲಿ ಪೋಲಿಯೋ ಲಸಿಕೆ ನೀಡುವ ತಂಡದ ಮೇಲೆ ಭಯೋತ್ಪಾದಕರು ಪದೇಪದೆ ದಾಳಿ ನಡೆಸುತ್ತಿದ್ದಾರೆ. ಈ ಲಸಿಕೆ ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಬಲವಾಗಿ ನಂಬಿರುವ ಅವರು, ಲಸಿಕೆ ಹಾಕಲು ಬಿಡುತ್ತಿಲ್ಲ. ಪೋಲಿಯೋ ಲಸಿಕೆ ಹಾಕುವ ತಂಡವನ್ನು ಗುರಿಯಾಗಿಸಿ ಪದೇಪದೆ ದಾಳಿಯನ್ನೂ ನಡೆಸುತ್ತಿದ್ದಾರೆ. ಈ ಮಧ್ಯೆ ಇಮ್ರಾನ್​ ಖಾನ್, ಪೋಲಿಯೋ ಲಸಿಕಾ ಅಭಿಯಾನಕ್ಕೆ ಬಿಲ್​ಗೇಟ್ಸ್​​ರ ಫೌಂಡೇಶನ್​​ನಿಂದ ಇನ್ನಷ್ಟು ಸಹಕಾರವನ್ನೂ ಕೋರಿದ್ದಾರೆ.

ಇನ್ನು ಬಿಲ್​​ಗೇಟ್ಸ್​ ಅಫ್ಘಾನಿಸ್ತಾನಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಯಾವ ಪ್ರತಿಕ್ರಿಯೆ ನೀಡಿದ್ದಾರೆಂದು ಗೊತ್ತಾಗಲಿಲ್ಲ. ಆದರೆ ಪಾಕಿಸ್ತಾನಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ತಮ್ಮ ಫೌಂಡೇಶನ್​​ನಿಂದ ಸಂಪೂರ್ಣ ಬೆಂಬಲ ನೀಡುತ್ತೇವೆ. ಯಾವುದೇ ಮಕ್ಕಳು ಪೋಲಿಯೋ ವೈರಸ್​ನಿಂದ ಪಾರ್ಶ್ವವಾಯುವಿಗೆ ತುತ್ತಾಗದಂತೆ ಕಾಪಾಡಲು ಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಮಂತಾ ದೇಹದ ಮೇಲಿರುವ ಟ್ಯಾಟೂ ಗತಿಯೇನು? ಅದರಲ್ಲಿದೆ ನಾಗ ಚೈತನ್ಯ ನೆನಪು

‘ಆ​​ ದೃಶ್ಯಕ್ಕಾಗಿ ನಾನು ತುಂಬಾ ಟೇಕ್​ ತೆಗೆದುಕೊಂಡಿದ್ದೆ’; ಧನ್ಯಾ ರಾಮ್​ಕುಮಾರ್​

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ