ಅತ್ತ ಡೊನಾಲ್ಡ್ ಟ್ರಂಪ್ಗೆ ಧನ್ಯವಾದ ತಿಳಿಸಿ ಇತ್ತ ಕದನ ವಿರಾಮ ಉಲ್ಲಂಘಿಸಿದ ಪಾಕ್
ಅಮೆರಿಕದ ಮಧ್ಯಸ್ಥಿಕೆಯೊಂದಿಗೆ ಭಾರತ ಮತ್ತು ಪಾಕಿಸ್ತಾನ(Pakistan) ನಡುವೆ ಕದನ ವಿರಾಮ ಘೋಷಿಸಲಾಗಿದೆ. ಇದಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಡೊನಾಲ್ಡ್ ಟ್ರಂಪ್(Donald Trump)ಗೆ ಧನ್ಯವಾದ ತಿಳಿಸಿದ್ದಾರೆ. ಆದಾಗ್ಯೂ, ಪಾಕಿಸ್ತಾನ ಕೇವಲ 4 ಗಂಟೆಗಳಲ್ಲಿ ಕದನ ವಿರಾಮವನ್ನು ಮುರಿದಿದೆ. ನಂತರ ಭಾರತ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತು ಮತ್ತು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಯಾವುದೇ ಉಲ್ಲಂಘನೆಗೆ ಬಲವಾದ ಮತ್ತು ನಿಖರವಾದ ಪ್ರತಿಕ್ರಿಯೆಯನ್ನು ನೀಡುವಂತೆ ಭಾರತೀಯ ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇಸ್ಲಾಮಾಬಾದ್, ಮೇ 11: ಅಮೆರಿಕದ ಮಧ್ಯಸ್ಥಿಕೆಯೊಂದಿಗೆ ಭಾರತ ಮತ್ತು ಪಾಕಿಸ್ತಾನ(Pakistan) ನಡುವೆ ಕದನ ವಿರಾಮ ಘೋಷಿಸಲಾಗಿದೆ. ಇದಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಡೊನಾಲ್ಡ್ ಟ್ರಂಪ್(Donald Trump)ಗೆ ಧನ್ಯವಾದ ತಿಳಿಸಿದ್ದಾರೆ. ಆದಾಗ್ಯೂ, ಪಾಕಿಸ್ತಾನ ಕೇವಲ 4 ಗಂಟೆಗಳಲ್ಲಿ ಕದನ ವಿರಾಮವನ್ನು ಮುರಿದಿದೆ. ನಂತರ ಭಾರತ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತು ಮತ್ತು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಯಾವುದೇ ಉಲ್ಲಂಘನೆಗೆ ಬಲವಾದ ಮತ್ತು ನಿಖರವಾದ ಪ್ರತಿಕ್ರಿಯೆಯನ್ನು ನೀಡುವಂತೆ ಭಾರತೀಯ ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಅಧ್ಯಕ್ಷ ಟ್ರಂಪ್ಗೆ ಪಾಕಿಸ್ತಾನ ಪ್ರಧಾನಿ ಧನ್ಯವಾದ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಈ ಪ್ರದೇಶದಲ್ಲಿ ಶಾಂತಿಯನ್ನು ಉತ್ತೇಜಿಸುವಲ್ಲಿ ಅಧ್ಯಕ್ಷ ಟ್ರಂಪ್ ಅವರ ನಾಯಕತ್ವ ಮತ್ತು ಸಕ್ರಿಯ ಪಾತ್ರಕ್ಕಾಗಿ ನಾವು ಅವರಿಗೆ ಧನ್ಯವಾದ ಹೇಳುತ್ತೇವೆ ಎಂದು ಎಕ್ಸ್ನಲ್ಲಿ ಹೇಳಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಶಾಂತಿಗೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.
ಮೇ 12ರಂದು ಭಾರತ-ಪಾಕ್ ನಡುವೆ ಮಾತುಕತೆ ಮೇ 10 ರಂದು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಮಾತುಕತೆ ನಡೆದು ಕದನ ವಿರಾಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಯಿತು. ಮೇ 12 ರಂದು, ಭಾರತ ಮತ್ತು ಪಾಕಿಸ್ತಾನ ನಡುವೆ ಡಿಜಿಎಂಒ ಮಟ್ಟದಲ್ಲಿ ಮತ್ತೆ ಮಾತುಕತೆ ನಡೆಯಲಿದೆ.
ಇದಕ್ಕೂ ಮೊದಲು ನವಾಜ್ ಷರೀಫ್ ಮಾತನಾಡಿ, ಪಾಕಿಸ್ತಾನವು ಶಾಂತಿಪ್ರಿಯ ದೇಶವಾಗಿದೆ, ಆದರೆ ತನ್ನನ್ನು ತಾನು ಹೇಗೆ ರಕ್ಷಿಸಿಕೊಳ್ಳಬೇಕೆಂದು ತಿಳಿದಿದೆ ಎಂದು ಹೇಳಿದ್ದರು. ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ನಂತರ ಅವರ ಹೇಳಿಕೆಗಳು ಬಂದಿವೆ.
ಮತ್ತಷ್ಟು ಓದಿ: ನಾವು ಭಾರತದ ವಿರುದ್ಧ ಗೆದ್ದಿದ್ದೇವೆ: ಮತ್ತೆ ಸುಳ್ಳಿನ ಕತೆ ಹೇಳಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್
ಹಲವು ದಿನಗಳ ಅಶಾಂತಿ ಮತ್ತು ಉದ್ವಿಗ್ನತೆಯ ನಂತರ ಪಾಕಿಸ್ತಾನ ಮತ್ತು ಭಾರತ ನಡುವೆ ಒಪ್ಪಂದವಾದ ಕದನ ವಿರಾಮದ ಬಗ್ಗೆ ಷರೀಫ್ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದರು. ಭಾರತ ಮತ್ತು ಪಾಕಿಸ್ತಾನ ಎರಡೂ ಕದನ ವಿರಾಮ ಮತ್ತು ಮಾತುಕತೆಗೆ ಒಪ್ಪಿಕೊಂಡಿವೆ, ಇದನ್ನು ರಾಜತಾಂತ್ರಿಕತೆಯ ವಿಜಯವೆಂದು ನಾವು ಸ್ವಾಗತಿಸುತ್ತೇವೆ.
ಈ ಐತಿಹಾಸಿಕ ಮೈಲಿಗಲ್ಲು ಸಾಧಿಸುವಲ್ಲಿ ಅಮೆರಿಕ, ಸೌದಿ ಅರೇಬಿಯಾ ಮತ್ತು ಎಲ್ಲಾ ದೇಶಗಳ ಪಾತ್ರವನ್ನು ನಾವು ಪ್ರಶಂಸಿಸುತ್ತೇವೆ ಎಂದು ಬರೆದಿದ್ದಾರೆ. ಒಬ್ಬ ಪಾಕಿಸ್ತಾನಿಯಾಗಿ, ನಮ್ಮ ಜನರು, ನಮ್ಮ ಸೇನೆ ಮತ್ತು ವಿಶೇಷವಾಗಿ ನಮ್ಮ ವಾಯುಪಡೆಯ ಬಗ್ಗೆ ನನಗೆ ಹೆಮ್ಮೆಯಿದೆ ಎಂದಿದ್ದಾರೆ.
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಮುಖ್ಯಸ್ಥ ಗೋಹರ್ ಅಲಿ ಖಾನ್ ಮಾತನಾಡಿ, ಈ ಪ್ರದೇಶದಲ್ಲಿ ಶಾಂತಿ ಮರಳುತ್ತಿರುವುದು ಒಳ್ಳೆಯದು. ಪಾಕಿಸ್ತಾನ ನೀಡಿದ ಪ್ರತಿಕ್ರಿಯೆ ದೇಶಕ್ಕೆ ಹೆಮ್ಮೆ ತಂದಿದೆ ಎಂದು ಅವರು ಹೇಳಿದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ