AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಿಬ್ಬಂದಿ ಕೈಯಲ್ಲಿದ್ದ ಛತ್ರಿ ತೆಗೆದುಕೊಂಡು ನಡೆದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್; ನೆಟ್ಟಿಗರಿಂದ ಟ್ರೋಲ್

ಪ್ಯಾರಿಸ್ ಶೃಂಗಸಭೆಗಾಗಿ ಬರುತ್ತಿರುವ ಪಾಕ್ ಪ್ರಧಾನಿ, ಅವರನ್ನು ಸ್ವಾಗತಿಸಿ ಅವರಿಗಾಗಿ ಛತ್ರಿ ಹಿಡಿದ ಮಹಿಳಾ ಸಿಬ್ಬಂದಿ ಕೈಯಿಂದ ಛತ್ರಿ ತೆಗೆದುಕೊಂಡು ಒಬ್ಬರೇ ನಡೆದುಕೊಂಡು ಬರುತ್ತಿದ್ದಾರೆ. ಪಾಪ, ಮಹಿಳಾ ಸಿಬ್ಬಂದಿ ಮಳೆ ನೆನೆಯುತ್ತಾ ಅವರ ಹಿಂದೆಯೇ ಬಿರುಸು ಹೆಜ್ಜೆ ಹಾಕಿ ನಡೆಯುತ್ತಿರುವುದು ವಿಡಿಯೊದಲ್ಲಿದೆ.

ಮಹಿಳಾ ಸಿಬ್ಬಂದಿ ಕೈಯಲ್ಲಿದ್ದ ಛತ್ರಿ ತೆಗೆದುಕೊಂಡು ನಡೆದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್; ನೆಟ್ಟಿಗರಿಂದ ಟ್ರೋಲ್
ಶೆಹಬಾಜ್ ಷರೀಫ್
Follow us
ರಶ್ಮಿ ಕಲ್ಲಕಟ್ಟ
|

Updated on: Jun 23, 2023 | 8:14 PM

ಗ್ಲೋಬಲ್ ಫೈನಾನ್ಸಿಂಗ್ ಪ್ಯಾಕ್ಟ್‌ನ ಎರಡು ದಿನಗಳ ಶೃಂಗಸಭೆಗಾಗಿ ಪಾಕಿಸ್ತಾನದ ಪ್ರಧಾನಿ (Pakistan PM) ಶೆಹಬಾಜ್ ಷರೀಫ್ (Shehbaz Sharif) ಪ್ಯಾರಿಸ್‌ನಲ್ಲಿದ್ದಾರೆ. ಮುಂದಿನ ವಾರದಲ್ಲಿ ಕ್ರೆಡಿಟ್ ಲೈನ್ ಅವಧಿ ಮುಗಿಯುವ ಮೊದಲು ತಡೆಹಿಡಿಯಲಾದ ಹಣವನ್ನು ಪಡೆಯಲಿರುವ ಕೊನೆಯ ಪ್ರಯತ್ನವನ್ನು ಷರೀಫ್ ಇಲ್ಲಿ ಮಾಡಲಿದ್ದಾರೆ. ಆದರೆ ಸೌದಿ ದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿಯಂತಹ ಜಾಗತಿಕ ನಾಯಕರೊಂದಿಗಿನ ಅವರ ಸಭೆಗಳಿಗಿಂತ, ಪಲೈಸ್ ಬ್ರಾಂಗ್ನಿಯಾರ್ಟ್‌ಗೆ ಅವರು ಆಗಮಿಸಿದ ವಿಡಿಯೊವೊಂದು ಈಗ ಟ್ರೆಂಡ್ ಆಗಿದೆ.

ಪ್ಯಾರಿಸ್ ಶೃಂಗಸಭೆಗಾಗಿ ಬರುತ್ತಿರುವ ಪಾಕ್ ಪ್ರಧಾನಿ, ಅವರನ್ನು ಸ್ವಾಗತಿಸಿ ಅವರಿಗಾಗಿ ಛತ್ರಿ ಹಿಡಿದ ಮಹಿಳಾ ಸಿಬ್ಬಂದಿ ಕೈಯಿಂದ ಛತ್ರಿ ತೆಗೆದುಕೊಂಡು ಒಬ್ಬರೇ ನಡೆದುಕೊಂಡು ಬರುತ್ತಿದ್ದಾರೆ. ಪಾಪ, ಮಹಿಳಾ ಸಿಬ್ಬಂದಿ ಮಳೆ ನೆನೆಯುತ್ತಾ ಅವರ ಹಿಂದೆಯೇ ಬಿರುಸು ಹೆಜ್ಜೆ ಹಾಕಿ ನಡೆಯುತ್ತಿರುವುದು ವಿಡಿಯೊದಲ್ಲಿದೆ.

ಆದಾಗ್ಯೂ, ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗಿದ್ದು, ಪಾಕ್ ಪ್ರಧಾನಿಯ ಈ ಅಸಭ್ಯ ವರ್ತನೆಯಿಂದ ನೆಟ್ಟಿಗರು ಕೋಪಗೊಂಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?

 ಕೆಲವು ಟ್ವಿಟರ್ ಪ್ರತಿಕ್ರಿಯೆಗಳು ಇಲ್ಲಿವೆ

ಮಹಿಳೆಯನ್ನು ಮಳೆಯಲ್ಲೇ ಬಿಟ್ಟು ಬಂದಿದ್ದೇಕೆ? ಶೆಹಬಾಜ್ ಷರೀಫ್ ಮುಜುಗರವನ್ನುಂಟು ಮಾಡುತ್ತಿದ್ದಾರೆ. ಯಾವ ಕಾರ್ಟೂನ್ ನ್ನು ಪ್ರಧಾನಿ ಮಾಡಿದ್ದೀರಪ್ಪಾ ಎಂದು ಸೈತ್ ಅಬ್ದುಲ್ಲಾ ಎಂಬ ಟ್ವೀಟಿಗರು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವೀಟಿಗರು ಮಿಸ್ಟರ್ ಬೀನ್  ಪಾಕಿಸ್ತಾನಿ ವರ್ಷನ್ ಎಂದು ಕಾಲೆಳೆದಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ