AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಿಬ್ಬಂದಿ ಕೈಯಲ್ಲಿದ್ದ ಛತ್ರಿ ತೆಗೆದುಕೊಂಡು ನಡೆದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್; ನೆಟ್ಟಿಗರಿಂದ ಟ್ರೋಲ್

ಪ್ಯಾರಿಸ್ ಶೃಂಗಸಭೆಗಾಗಿ ಬರುತ್ತಿರುವ ಪಾಕ್ ಪ್ರಧಾನಿ, ಅವರನ್ನು ಸ್ವಾಗತಿಸಿ ಅವರಿಗಾಗಿ ಛತ್ರಿ ಹಿಡಿದ ಮಹಿಳಾ ಸಿಬ್ಬಂದಿ ಕೈಯಿಂದ ಛತ್ರಿ ತೆಗೆದುಕೊಂಡು ಒಬ್ಬರೇ ನಡೆದುಕೊಂಡು ಬರುತ್ತಿದ್ದಾರೆ. ಪಾಪ, ಮಹಿಳಾ ಸಿಬ್ಬಂದಿ ಮಳೆ ನೆನೆಯುತ್ತಾ ಅವರ ಹಿಂದೆಯೇ ಬಿರುಸು ಹೆಜ್ಜೆ ಹಾಕಿ ನಡೆಯುತ್ತಿರುವುದು ವಿಡಿಯೊದಲ್ಲಿದೆ.

ಮಹಿಳಾ ಸಿಬ್ಬಂದಿ ಕೈಯಲ್ಲಿದ್ದ ಛತ್ರಿ ತೆಗೆದುಕೊಂಡು ನಡೆದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್; ನೆಟ್ಟಿಗರಿಂದ ಟ್ರೋಲ್
ಶೆಹಬಾಜ್ ಷರೀಫ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 23, 2023 | 8:14 PM

Share

ಗ್ಲೋಬಲ್ ಫೈನಾನ್ಸಿಂಗ್ ಪ್ಯಾಕ್ಟ್‌ನ ಎರಡು ದಿನಗಳ ಶೃಂಗಸಭೆಗಾಗಿ ಪಾಕಿಸ್ತಾನದ ಪ್ರಧಾನಿ (Pakistan PM) ಶೆಹಬಾಜ್ ಷರೀಫ್ (Shehbaz Sharif) ಪ್ಯಾರಿಸ್‌ನಲ್ಲಿದ್ದಾರೆ. ಮುಂದಿನ ವಾರದಲ್ಲಿ ಕ್ರೆಡಿಟ್ ಲೈನ್ ಅವಧಿ ಮುಗಿಯುವ ಮೊದಲು ತಡೆಹಿಡಿಯಲಾದ ಹಣವನ್ನು ಪಡೆಯಲಿರುವ ಕೊನೆಯ ಪ್ರಯತ್ನವನ್ನು ಷರೀಫ್ ಇಲ್ಲಿ ಮಾಡಲಿದ್ದಾರೆ. ಆದರೆ ಸೌದಿ ದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿಯಂತಹ ಜಾಗತಿಕ ನಾಯಕರೊಂದಿಗಿನ ಅವರ ಸಭೆಗಳಿಗಿಂತ, ಪಲೈಸ್ ಬ್ರಾಂಗ್ನಿಯಾರ್ಟ್‌ಗೆ ಅವರು ಆಗಮಿಸಿದ ವಿಡಿಯೊವೊಂದು ಈಗ ಟ್ರೆಂಡ್ ಆಗಿದೆ.

ಪ್ಯಾರಿಸ್ ಶೃಂಗಸಭೆಗಾಗಿ ಬರುತ್ತಿರುವ ಪಾಕ್ ಪ್ರಧಾನಿ, ಅವರನ್ನು ಸ್ವಾಗತಿಸಿ ಅವರಿಗಾಗಿ ಛತ್ರಿ ಹಿಡಿದ ಮಹಿಳಾ ಸಿಬ್ಬಂದಿ ಕೈಯಿಂದ ಛತ್ರಿ ತೆಗೆದುಕೊಂಡು ಒಬ್ಬರೇ ನಡೆದುಕೊಂಡು ಬರುತ್ತಿದ್ದಾರೆ. ಪಾಪ, ಮಹಿಳಾ ಸಿಬ್ಬಂದಿ ಮಳೆ ನೆನೆಯುತ್ತಾ ಅವರ ಹಿಂದೆಯೇ ಬಿರುಸು ಹೆಜ್ಜೆ ಹಾಕಿ ನಡೆಯುತ್ತಿರುವುದು ವಿಡಿಯೊದಲ್ಲಿದೆ.

ಆದಾಗ್ಯೂ, ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗಿದ್ದು, ಪಾಕ್ ಪ್ರಧಾನಿಯ ಈ ಅಸಭ್ಯ ವರ್ತನೆಯಿಂದ ನೆಟ್ಟಿಗರು ಕೋಪಗೊಂಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?

 ಕೆಲವು ಟ್ವಿಟರ್ ಪ್ರತಿಕ್ರಿಯೆಗಳು ಇಲ್ಲಿವೆ

ಮಹಿಳೆಯನ್ನು ಮಳೆಯಲ್ಲೇ ಬಿಟ್ಟು ಬಂದಿದ್ದೇಕೆ? ಶೆಹಬಾಜ್ ಷರೀಫ್ ಮುಜುಗರವನ್ನುಂಟು ಮಾಡುತ್ತಿದ್ದಾರೆ. ಯಾವ ಕಾರ್ಟೂನ್ ನ್ನು ಪ್ರಧಾನಿ ಮಾಡಿದ್ದೀರಪ್ಪಾ ಎಂದು ಸೈತ್ ಅಬ್ದುಲ್ಲಾ ಎಂಬ ಟ್ವೀಟಿಗರು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವೀಟಿಗರು ಮಿಸ್ಟರ್ ಬೀನ್  ಪಾಕಿಸ್ತಾನಿ ವರ್ಷನ್ ಎಂದು ಕಾಲೆಳೆದಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು