AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ

ಪಾಕಿಸ್ತಾನದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ನಡೆದಿದೆ. ಪ್ರಪಂಚದಾದ್ಯಂತ ಎಲ್ಲಾ ಮುಸ್ಲಿಮರು ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಕರೆಯುತ್ತಾರೆ, ಅಪ್ಪಿ ತಪ್ಪಿಯೂ ಯಾವುದೇ ರೀತಿಯ ತಪ್ಪಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ಈ ರಂಜಾರ್​ ತಿಂಗಳಿನಲ್ಲಿಯೇ ಕ್ಷಮಿಸಲಾಗದ ತಪ್ಪೊಂದು ನಡೆದಿದೆ ಅದೂ ಮಸೀದಿಯಲ್ಲಿ. ಈ ಘಟನೆಯು ಇಡೀ ಮುಸ್ಲಿಂ ಸಮುದಾಯವನ್ನು ತಲೆ ತಗ್ಗಿಸುವಂತೆ ಮಾಡಿದೆ.

ಪಾಕಿಸ್ತಾನದ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ
Image Credit source: OpIndia
ನಯನಾ ರಾಜೀವ್
|

Updated on: Apr 07, 2024 | 11:39 AM

Share

ಪಾಕಿಸ್ತಾನದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ನಡೆದಿದೆ. ಪ್ರಪಂಚದಾದ್ಯಂತ ಎಲ್ಲಾ ಮುಸ್ಲಿಮರು ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಕರೆಯುತ್ತಾರೆ, ಅಪ್ಪಿ ತಪ್ಪಿಯೂ ಯಾವುದೇ ರೀತಿಯ ತಪ್ಪಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ಈ ರಂಜಾರ್​ ತಿಂಗಳಿನಲ್ಲಿಯೇ ಕ್ಷಮಿಸಲಾಗದ ತಪ್ಪೊಂದು ನಡೆದಿದೆ ಅದೂ ಮಸೀದಿಯಲ್ಲಿ. ಈ ಘಟನೆಯು ಇಡೀ ಮುಸ್ಲಿಂ ಸಮುದಾಯವನ್ನು ತಲೆ ತಗ್ಗಿಸುವಂತೆ ಮಾಡಿದೆ.

ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ಬಾಲಕ ಇತಿಕಾಫ್ ಮಾಡುತ್ತಿದ್ದು, ಮಸೀದಿಯೊಳಗೆ ಕುರಾನ್ ಓದುತ್ತಿದ್ದ. ಮುಜಾಫರ್​ಗಢದ ಕೋಟ್​ ಅಡ್ಡಸ್ ಪಟ್ಟಣದ ಸನಾವನ್ ಭೂಖಿ ಚೌಕ್​ನಲ್ಲಿರುವ ಮಸೀದಿಯೊಳಗೆ ಈ ಘಟನೆ ನಡೆದಿದೆ.

ಇತಿಕಾಫ್ ಎಂದರೆ ಏಕಾಂತದಲ್ಲಿ ಅಲ್ಲಾಹನನ್ನು ಆರಾಧಿಸುವುದು. ರಂಜಾನ್​ನ ತಿಂಗಳ ಕೊನೆಯ 10 ದಿನಗಳಲ್ಲಿ ಮುಸ್ಲಿಮರು ಮಸೀದಿಯ ಒಂದೊಂದು ಬದಿ ಅಥವಾ ಮೂಲೆಯಲ್ಲಿ ಕೂತು ಅಲ್ಲಾನನ್ನು ಆರಾಧಿಸುತ್ತಾರೆ.

28 ವರ್ಷದ ವ್ಯಕ್ತಿಯೊಬ್ಬ 13 ವರ್ಷದ ಬಾಲಕನ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುತ್ತಿದ್ದಾಗ ಮಸೀದಿಯ ಮೌಲ್ವಿ ಆತನನ್ನು ಹಿಡಿದಿದ್ದಾರೆ. ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಮಸೀದಿಯ ಜನರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ