AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಗಣಿ ಕಾರ್ಮಿಕರ ಮೇಲೆ ಗುಂಡಿನ ದಾಳಿ, 20 ಮಂದಿ ಸಾವು

ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ​ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಪ್ರಮುಖ ಭದ್ರತಾ ಶೃಂಗಸಭೆಗೆ ಕೆಲವು ದಿನಗಳ ಮೊದಲು ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಹೊಸ ದಾಳಿ ನಡೆದಿದೆ.

ಪಾಕಿಸ್ತಾನ: ಗಣಿ ಕಾರ್ಮಿಕರ ಮೇಲೆ ಗುಂಡಿನ ದಾಳಿ, 20 ಮಂದಿ ಸಾವು
ಪಾಕಿಸ್ತಾನImage Credit source: MyInd.net
ನಯನಾ ರಾಜೀವ್
|

Updated on: Oct 11, 2024 | 12:35 PM

Share

ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ​ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಪ್ರಮುಖ ಭದ್ರತಾ ಶೃಂಗಸಭೆಗೆ ಕೆಲವು ದಿನಗಳ ಮೊದಲು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ  ದಾಳಿ ನಡೆದಿದೆ.

ಗುರುವಾರ ತಡರಾತ್ರಿ ದುಕಿ ಜಿಲ್ಲೆಯ ಕಲ್ಲಿದ್ದಲು ಗಣಿ ಬಳಿಯಿರುವ ಮನೆಗಳ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಬಂದೂಕುಧಾರಿಗಳು ಜನರನ್ನು ಒಟ್ಟುಗೂಡಿಸಿದರು ಮತ್ತು ನಂತರ ಅವರ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ಬಲಿಪಶುಗಳಲ್ಲಿ ಹೆಚ್ಚಿನವರು ಬಲೂಚಿಸ್ತಾನ ಮೂಲದವರೇ ಆಗಿದ್ದಾರೆ.

ಸತ್ತವರಲ್ಲಿ ಮೂವರು ಮತ್ತು ಗಾಯಗೊಂಡವರಲ್ಲಿ ನಾಲ್ವರು ಅಫ್ಘಾನ್ ಮೂಲದವರು ಎಂದು ಹೇಳಲಾಗಿದೆ. ಸದ್ಯ ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಈ ಪ್ರಾಂತ್ಯವು ಸ್ವಾತಂತ್ರ್ಯವನ್ನು ಬಯಸುವ ಪ್ರತ್ಯೇಕತಾವಾದಿ ಗುಂಪುಗಳ ಭದ್ರಕೋಟೆಯಾಗಿದೆ.

ಮತ್ತಷ್ಟು ಓದಿ: ಪಾಕಿಸ್ತಾನ: ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ಸಿಂದ ಇಳಿಸಿ 23 ಪ್ರಯಾಣಿಕರ ಗುಂಡಿಕ್ಕಿ ಹತ್ಯೆ

ಬಲೂಚ್ ಲಿಬರೇಶನ್ ಆರ್ಮಿ (BLA) ಎಂಬ ಗುಂಪು ಪಾಕಿಸ್ತಾನದ ಅತಿದೊಡ್ಡ ವಿಮಾನ ನಿಲ್ದಾಣದ ಹೊರಗೆ ಚೀನಾದ ನಾಗರಿಕರ ಮೇಲೆ ದಾಳಿ ಮಾಡಿತ್ತು. ಸಾವಿರಾರು ಚೀನೀ ಪ್ರಜೆಗಳು ದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು ಬೀಜಿಂಗ್‌ನ ಬಿಲಿಯನ್-ಡಾಲರ್ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್‌ನಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಸ್ಫೋಟವು ದೇಶದಲ್ಲಿ ಪ್ರಮುಖ ಘಟನೆಗಳು ಅಥವಾ ವಿದೇಶಿಯರನ್ನು ರಕ್ಷಿಸುವ ಪಾಕಿಸ್ತಾನಿ ಮಿಲಿಟರಿಯ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಸ್ಲಾಮಾಬಾದ್ ಮುಂದಿನ ವಾರ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ