AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಗಣಿ ಕಾರ್ಮಿಕರ ಮೇಲೆ ಗುಂಡಿನ ದಾಳಿ, 20 ಮಂದಿ ಸಾವು

ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ​ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಪ್ರಮುಖ ಭದ್ರತಾ ಶೃಂಗಸಭೆಗೆ ಕೆಲವು ದಿನಗಳ ಮೊದಲು ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಹೊಸ ದಾಳಿ ನಡೆದಿದೆ.

ಪಾಕಿಸ್ತಾನ: ಗಣಿ ಕಾರ್ಮಿಕರ ಮೇಲೆ ಗುಂಡಿನ ದಾಳಿ, 20 ಮಂದಿ ಸಾವು
ಪಾಕಿಸ್ತಾನImage Credit source: MyInd.net
ನಯನಾ ರಾಜೀವ್
|

Updated on: Oct 11, 2024 | 12:35 PM

Share

ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ​ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಪ್ರಮುಖ ಭದ್ರತಾ ಶೃಂಗಸಭೆಗೆ ಕೆಲವು ದಿನಗಳ ಮೊದಲು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ  ದಾಳಿ ನಡೆದಿದೆ.

ಗುರುವಾರ ತಡರಾತ್ರಿ ದುಕಿ ಜಿಲ್ಲೆಯ ಕಲ್ಲಿದ್ದಲು ಗಣಿ ಬಳಿಯಿರುವ ಮನೆಗಳ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಬಂದೂಕುಧಾರಿಗಳು ಜನರನ್ನು ಒಟ್ಟುಗೂಡಿಸಿದರು ಮತ್ತು ನಂತರ ಅವರ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ಬಲಿಪಶುಗಳಲ್ಲಿ ಹೆಚ್ಚಿನವರು ಬಲೂಚಿಸ್ತಾನ ಮೂಲದವರೇ ಆಗಿದ್ದಾರೆ.

ಸತ್ತವರಲ್ಲಿ ಮೂವರು ಮತ್ತು ಗಾಯಗೊಂಡವರಲ್ಲಿ ನಾಲ್ವರು ಅಫ್ಘಾನ್ ಮೂಲದವರು ಎಂದು ಹೇಳಲಾಗಿದೆ. ಸದ್ಯ ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಈ ಪ್ರಾಂತ್ಯವು ಸ್ವಾತಂತ್ರ್ಯವನ್ನು ಬಯಸುವ ಪ್ರತ್ಯೇಕತಾವಾದಿ ಗುಂಪುಗಳ ಭದ್ರಕೋಟೆಯಾಗಿದೆ.

ಮತ್ತಷ್ಟು ಓದಿ: ಪಾಕಿಸ್ತಾನ: ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ಸಿಂದ ಇಳಿಸಿ 23 ಪ್ರಯಾಣಿಕರ ಗುಂಡಿಕ್ಕಿ ಹತ್ಯೆ

ಬಲೂಚ್ ಲಿಬರೇಶನ್ ಆರ್ಮಿ (BLA) ಎಂಬ ಗುಂಪು ಪಾಕಿಸ್ತಾನದ ಅತಿದೊಡ್ಡ ವಿಮಾನ ನಿಲ್ದಾಣದ ಹೊರಗೆ ಚೀನಾದ ನಾಗರಿಕರ ಮೇಲೆ ದಾಳಿ ಮಾಡಿತ್ತು. ಸಾವಿರಾರು ಚೀನೀ ಪ್ರಜೆಗಳು ದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು ಬೀಜಿಂಗ್‌ನ ಬಿಲಿಯನ್-ಡಾಲರ್ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್‌ನಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಸ್ಫೋಟವು ದೇಶದಲ್ಲಿ ಪ್ರಮುಖ ಘಟನೆಗಳು ಅಥವಾ ವಿದೇಶಿಯರನ್ನು ರಕ್ಷಿಸುವ ಪಾಕಿಸ್ತಾನಿ ಮಿಲಿಟರಿಯ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಸ್ಲಾಮಾಬಾದ್ ಮುಂದಿನ ವಾರ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ