Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ಸಿಂದ ಇಳಿಸಿ 23 ಪ್ರಯಾಣಿಕರ ಗುಂಡಿಕ್ಕಿ ಹತ್ಯೆ

ಬಂದೂಕುಧಾರಿಗಳು ಬಸ್ಸಿನಂದ ಜನರನ್ನು ಕೆಳಗಿಳಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ 23 ಜನರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಲೂಚಿಸ್ತಾನದಲ್ಲಿ ನಡೆದಿದೆ. ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಗೆಳಗಿಳಿಸಿ ಗುರುತಿನ ಚೀಟಿ ಪರಿಶೀಲಿಸಿ ಗುಂಡಿನ ಸುರಿಮಳೆಗೈದಿದ್ದಾರೆ.

ಪಾಕಿಸ್ತಾನ: ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ಸಿಂದ ಇಳಿಸಿ 23 ಪ್ರಯಾಣಿಕರ ಗುಂಡಿಕ್ಕಿ ಹತ್ಯೆ
ಬಲೂಚಿಸ್ತಾನ
Follow us
ನಯನಾ ರಾಜೀವ್
|

Updated on: Aug 26, 2024 | 12:12 PM

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ 23 ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬಸ್​ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ.

ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಗೆಳಗಿಳಿಸಿ ಗುರುತಿನ ಚೀಟಿ ಪರಿಶೀಲಿಸಿ ಗುಂಡಿನ ಸುರಿಮಳೆಗೈದಿದ್ದಾರೆ. ರಾರಶಮ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಪುರುಷರು ಹೆದ್ದಾರಿಯನ್ನು ತಡೆದು, ವಾಹನಗಳನ್ನು ಅಡ್ಡಿಪಡಿಸಿದರು ಮತ್ತು ಪ್ರಯಾಣಿಕರನ್ನು ಕೆಳಗಿಳಿಸಿದ್ದರು. ಮೃತರೆಲ್ಲರೂ ಎಲ್ಲರೂ ಪಂಜಾಬ್‌ನ ನಿವಾಸಿಗಳು ಎಂದು ಗುರುತಿಸಲಾಗಿದೆ.

ಹತ್ಯೆಯ ನಂತರ, ದಾಳಿಕೋರರು ಸ್ಥಳದಿಂದ ಪಲಾಯನ ಮಾಡುವ ಮೊದಲು ಹತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹೆಚ್ಚಿನ ತನಿಖೆಗಾಗಿ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಕರೆದಿದ್ದಾರೆ.

ಪಂಜಾಬ್‌ನ ಜನರನ್ನು ಗುರಿಯಾಗಿಸಿಕೊಂಡು ಇದೇ ರೀತಿಯ ದಾಳಿ ನಡೆದ ಸುಮಾರು ನಾಲ್ಕು ತಿಂಗಳ ನಂತರ ಮುಸಾಖೆಲ್ ದಾಳಿ ನಡೆದಿದೆ. ಏಪ್ರಿಲ್‌ನಲ್ಲಿ, ನೋಶ್ಕಿ ಬಳಿ ಒಂಬತ್ತು ಪ್ರಯಾಣಿಕರನ್ನು ಬಸ್‌ನಿಂದ ಇಳಿಸಲಾಯಿತು ಮತ್ತು ಅವರ ಗುರುತಿನ ಚೀಟಿಗಳನ್ನು ನೋಡಿದ ನಂತರ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದರು.

ಮತ್ತಷ್ಟು ಓದಿ:  ರಿಯಾಸಿಯಲ್ಲಿ ನಡೆದ ಉಗ್ರ ದಾಳಿ ಹಿಂದಿದೆ ಪಾಕಿಸ್ತಾನದ ಈ ಭಯೋತ್ಪಾದಕ ಗುಂಪಿನ ಕೈವಾಡ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಲೂಚಿಸ್ತಾನದ ಕೆಚ್ ಜಿಲ್ಲೆಯ ಟರ್ಬತ್‌ನಲ್ಲಿ ಪಂಜಾಬ್‌ನ ಆರು ಕಾರ್ಮಿಕರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದರು. ಎಲ್ಲರೂ ದಕ್ಷಿಣ ಪಂಜಾಬ್‌ನ ವಿವಿಧ ಪ್ರದೇಶಗಳಿಂದ ಬಂದವರು.

ಇದೇ ರೀತಿಯ ಘಟನೆ 2015 ರಲ್ಲಿ ನಡೆದಿತ್ತು, ಮುಂಜಾನೆ ಟರ್ಬತ್ ಬಳಿ ಕಾರ್ಮಿಕರ ಶಿಬಿರದ ಮೇಲೆ ಬಂದೂಕುಧಾರಿಗಳು ದಾಳಿ ಮಾಡಿದ್ದರಿಂದ 20 ಕಟ್ಟಡ ಕಾರ್ಮಿಕರು ಸಾವನ್ನಪ್ಪಿದರು. ಎಲ್ಲರೂ ಸಿಂಧ್, ಪಂಜಾಬ್ ಪ್ರಾಂತ್ಯದವರಾಗಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್