AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್; ಭಾರತದ ದಾಳಿಯಲ್ಲಿ ಪಾಕಿಸ್ತಾನದ 11 ಸೈನಿಕರು ಸಾವು, 78 ಜನರಿಗೆ ಗಾಯ

ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನದ ವಾಯುಪಡೆಯ ಮುಖ್ಯ ತಂತ್ರಜ್ಞ ಸೇರಿ 11 ಸೈನಿಕರು ಮೃತಪಟ್ಟಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಖಚಿತಪಡಿಸಿದೆ. ಭಾರತದ ದಾಳಿಯಲ್ಲಿ ಮೃತಪಟ್ಟ ಸೈನಿಕರ ಹೆಸರುಗಳನ್ನು ಪಾಕಿಸ್ತಾನ ಇಂದು ಬಿಡುಗಡೆ ಮಾಡಿದೆ. ಭಾರತದ 'ಆಪರೇಷನ್ ಸಿಂದೂರ್' ಸಮಯದಲ್ಲಿ ವಾಯುಪಡೆಯ 5 ಮತ್ತು ಸೇನಾಪಡೆಯ 6 ಸಿಬ್ಬಂದಿಯನ್ನು ಕಳೆದುಕೊಂಡಿರುವುದಾಗಿ ಪಾಕಿಸ್ತಾನ ದೃಢಪಡಿಸಿದೆ. ಈ ಮೂಲಕ ಪಾಕಿಸ್ತಾನದ 'ಕೆಲವು ವಿಮಾನಗಳನ್ನು' ಹೊಡೆದುರುಳಿಸಿದೆ ಎಂಬ ಭಾರತೀಯ ವಾಯುಪಡೆಯ ಹೇಳಿಕೆಗೆ ಪುಷ್ಟಿ ಸಿಕ್ಕಂತಾಗಿದೆ.

ಆಪರೇಷನ್ ಸಿಂಧೂರ್; ಭಾರತದ ದಾಳಿಯಲ್ಲಿ ಪಾಕಿಸ್ತಾನದ 11 ಸೈನಿಕರು ಸಾವು, 78 ಜನರಿಗೆ ಗಾಯ
Pakistan Army
ಸುಷ್ಮಾ ಚಕ್ರೆ
|

Updated on:May 13, 2025 | 2:33 PM

Share

ಇಸ್ಲಮಾಬಾದ್, ಮೇ 13: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ (Terrorists Attack) ಸಂಬಂಧಿಸಿದಂತೆ ಕಳೆದ ವಾರ ಭಾರತದೊಂದಿಗೆ ನಡೆದ ಸಂಘರ್ಷದಲ್ಲಿ 11 ಸೈನಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ (Pakistan Army) ಇಂದು ಒಪ್ಪಿಕೊಂಡಿದೆ. ಇತ್ತೀಚಿನ ಭಾರತೀಯ ದಾಳಿಯಲ್ಲಿ 11 ಸೈನಿಕರು ಮತ್ತು 40 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ. ಏಪ್ರಿಲ್ 22ರಿಂದ ಮೇ 10ರವರೆಗಿನ ಸಂಘರ್ಷವನ್ನು ಮಾರ್ಕಾ-ಎ-ಹಕ್ (ಸತ್ಯದ ಯುದ್ಧ) ಎಂದು ಪಾಕಿಸ್ತಾನ ಕರೆದಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಪ್ರಕಾರ, ಪಾಕ್ ಸೇನೆಯ 11 ಮಂದಿ ಸಾವನ್ನಪ್ಪಿದ್ದು, 6 ಮಂದಿ ಸೇನಾಪಡೆಯವರು ಮತ್ತು 5 ಮಂದಿ ಪಾಕಿಸ್ತಾನ ವಾಯುಪಡೆ (PAF) ಅಧಿಕಾರಿಗಳು.

ಭಾರತದ ‘ಆಪರೇಷನ್ ಸಿಂಧೂರ್’ ನಲ್ಲಿ ಪಾಕ್ ಸೇನೆಯ ಮುಖ್ಯ ತಂತ್ರಜ್ಞ ಔರಂಗಜೇಬ್ ಸೇರಿದಂತೆ ವಾಯುಪಡೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದಾಗಿ ಪಾಕಿಸ್ತಾನ ದೃಢಪಡಿಸಿದ್ದು ಇದೇ ಮೊದಲು. ಇದು ಪಾಕಿಸ್ತಾನ ವಾಯುಪಡೆಯ “ಕೆಲವು ವಿಮಾನಗಳನ್ನು” ಹೊಡೆದುರುಳಿಸಿದೆ ಎಂಬ ಭಾರತೀಯ ವಾಯುಪಡೆಯ ಹೇಳಿಕೆಗೆ ಪುಷ್ಟಿ ನೀಡಿದೆ. ಮೇ 8-9ರ ಮಧ್ಯರಾತ್ರಿ ಪಾಕಿಸ್ತಾನವು 36 ಸ್ಥಳಗಳಲ್ಲಿ ಭಾರತೀಯ ವಾಯುಪ್ರದೇಶದ ಒಳನುಸುಳಲು ಪ್ರಯತ್ನಿಸಿದಾಗ ಭಾರತವು ಒಂದು F-16 ಮತ್ತು ಎರಡು JF-17 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ
Image
ಪ್ರಧಾನಿ ಮೋದಿ ಈ ವಿಚಾರಗಳನ್ನು ಗೆಲ್ಲಲೇಬೇಕು, ಎಚ್ಚರ ತಪ್ಪಿದ್ರೆ ಸಂಕಷ್ಟ!
Image
ಭಾರತ-ಪಾಕ್ ಕದನ ವಿರಾಮಕ್ಕೆ ಏಕಾಏಕಿ ಸಿದ್ಧರಾಗಿದ್ದೇಕೆ?
Image
ಪಾಕ್​ ದಾಳಿ: ಅವಳಿ ಮಕ್ಕಳ ಸಾವು, ತಂದೆ ಐಸಿಯುನಲ್ಲಿ, ಇಡೀ ಕುಟುಂಬವೇ ನಾಶ
Image
ನರೇಂದ್ರ ಮೋದಿ ಅವರಿಂದ ರವಾನೆಯಾದ ಸಂದೇಶಗಳೇನು?

ಇದನ್ನೂ ಓದಿ: ಪಂಜಾಬ್​ನ ಅದಂಪುರ ವಾಯುನೆಲೆಯಲ್ಲಿ ಸೈನಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ

4 ದಿನಗಳ ಕಾಲ ನಡೆದ ಈ ಘರ್ಷಣೆಯಲ್ಲಿ ಪಾಕಿಸ್ತಾನ ಸೇನೆ ಮತ್ತು ವಾಯುಪಡೆಯ 78 ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿದೆ. ಪಾಕಿಸ್ತಾನ ವಾಯುಪಡೆಯ ಬಲಿಪಶುಗಳಲ್ಲಿ ಸ್ಕ್ವಾಡ್ರನ್ ನಾಯಕ ಉಸ್ಮಾನ್ ಯೂಸುಫ್, ಮುಖ್ಯ ತಂತ್ರಜ್ಞ ಔರಂಗಜೇಬ್, ಹಿರಿಯ ತಂತ್ರಜ್ಞ ನಜೀಬ್, ಕಾರ್ಪೋರಲ್ ತಂತ್ರಜ್ಞ ಫಾರೂಕ್ ಮತ್ತು ಹಿರಿಯ ತಂತ್ರಜ್ಞ ಮುಬಾಶಿರ್ ಸೇರಿದ್ದಾರೆ ಎಂದು ಅದು ಹೇಳಿದೆ.

ಭಾರತದ ದಾಳಿಯಲ್ಲಿ ಸಾವನ್ನಪ್ಪಿದ ಸೇನಾ ಸಿಬ್ಬಂದಿಗಳಲ್ಲಿ ನಾಯಕ್ ಅಬ್ದುಲ್ ರೆಹಮಾನ್, ಲ್ಯಾನ್ಸ್ ನಾಯಕ್ ದಿಲಾವರ್ ಖಾನ್, ಲ್ಯಾನ್ಸ್ ನಾಯಕ್ ಇಕ್ರಮುಲ್ಲಾ, ನಾಯಕ್ ವಕಾರ್ ಖಾಲಿದ್, ಸಿಪಾಯಿ ಮುಹಮ್ಮದ್ ಅದೀಲ್ ಅಕ್ಬರ್ ಮತ್ತು ಸಿಪಾಯಿ ನಿಸಾರ್ ಸೇರಿದ್ದಾರೆ ಎಂದು ಪಾಕ್ ಹೇಳಿದೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ 9 ಭಯೋತ್ಪಾದಕ ತಾಣಗಳ ಮೇಲೆ ನಡೆಸಿದ ನಿಖರವಾದ ದಾಳಿಯಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸಶಸ್ತ್ರ ಪಡೆಗಳು ಹೇಳಿದ್ದವು. ಪಾಕಿಸ್ತಾನದ ಆಕ್ರಮಣಕ್ಕೆ ಪ್ರತೀಕಾರವಾಗಿ ಸುಮಾರು 30-40 ಪಾಕಿಸ್ತಾನಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಭಾರತ ಪರಮಾಣು ಕೇಂದ್ರಗಳ ಧ್ವಂಸ ಮಾಡಿದ್ರೆ ಎಂಬ ಭಯದಲ್ಲಿ ಅಮೆರಿಕದ ಮೊರೆ ಹೋಗಿತ್ತು ಪಾಕ್

ಭಯೋತ್ಪಾದಕರ ವಿರುದ್ಧ ಭಾರತದ ಕ್ರಮಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನಿ ಸೇನೆಯು ಭಾರತೀಯ ಮಿಲಿಟರಿ ಸ್ಥಾಪನೆಗಳು ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ಗಳು ಮತ್ತು ಇತರ ಸ್ಪೋಟಕಗಳ ದಾಳಿ ನಡೆಸಿತು. ಭಾರತೀಯ ಪಡೆಗಳು ದಾಳಿಗಳನ್ನು ವಿಫಲಗೊಳಿಸಿದವು, ಹೆಚ್ಚಿನ ಸ್ಪೋಟಕಗಳನ್ನು ಹೊಡೆದುರುಳಿಸಿದವು. ಪಾಕಿಸ್ತಾನ ನಾಗರಿಕರ ಮೇಲೆ ತನ್ನ ದಾಳಿಯನ್ನು ಮುಂದುವರಿಸುತ್ತಿದ್ದಂತೆ, ಭಾರತವು ಪ್ರತೀಕಾರ ತೀರಿಸಿಕೊಂಡಿತು, ದೇಶದ ಒಳಗಿರುವ ವಾಯು ನೆಲೆಗಳನ್ನು ಗುರಿಯಾಗಿಸಿಕೊಂಡು ಮತ್ತು ವಾಯು ಪಟ್ಟಿಗಳು ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ನಾಶಪಡಿಸಿತು.

ನಂತರ, ಪಾಕಿಸ್ತಾನದ ಡಿಜಿಎಂಒ ಭಾರತಕ್ಕೆ ಯುದ್ಧ ನಿಲ್ಲಿಸುವಂತೆ ಒತ್ತಾಯಿಸಿದರು. ನಂತರ ಕದನವಿರಾಮ ಘೋಷಿಸಲಾಯಿತು. ಕಳೆದ ವಾರ ಭಾರತೀಯ ಪಡೆಗಳು ಹಲವಾರು ಪಾಕಿಸ್ತಾನಿ ಮಿಲಿಟರಿ ಜೆಟ್‌ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿದ್ದವು. ಆದರೆ, ಪಾಕಿಸ್ತಾನ ಯುದ್ಧವಿಮಾನಗಳ ಸಂಖ್ಯೆಯನ್ನು ನೀಡಿಲ್ಲ. ನಿನ್ನೆ ಪಾಕಿಸ್ತಾನದ ಮಿರಾಜ್ ಜೆಟ್ ಅನ್ನು ಭಾರತೀಯ ಪಡೆಗಳು ಹೊಡೆದುರುಳಿಸಿವೆ ಎಂದು ಅವರು ದೃಢಪಡಿಸಿದ್ದಾರೆ. ಯುದ್ಧದ ಸಮಯದಲ್ಲಿ ಕರ್ತವ್ಯದ ಸಾಲಿನಲ್ಲಿ 5 ಭಾರತೀಯ ಮಿಲಿಟರಿ ಸಿಬ್ಬಂದಿ ಸಾವನ್ನಪ್ಪಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 2:33 pm, Tue, 13 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ