AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್-ಅಫ್ಘಾನ್ ಗಡಿಯಲ್ಲಿ ಭೀಕರ ಸೇನಾ ದಾಳಿ, ಉದ್ವಿಗ್ನತೆ: 35 ನಾಗರಿಕರ ಸಾವು

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯಲ್ಲಿ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪಾಕಿಸ್ತಾನದ ಭೂ ಕಾರ್ಯಾಚರಣೆಯಲ್ಲಿ 35ಕ್ಕೂ ಹೆಚ್ಚು ನಾಗರಿಕರು, ಮಕ್ಕಳು ಮತ್ತು ವೃದ್ಧರು ಸಾವನ್ನಪ್ಪಿದ್ದಾರೆ. ಕರಾಚಿ ದಾಳಿಗೆ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆದಿದ್ದು, ಅಫ್ಘಾನಿಸ್ತಾನ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಘಟನೆಯಿಂದ ಇಸ್ಲಾಮಾಬಾದ್ ಮತ್ತು ಕಾಬೂಲ್ ನಡುವಿನ ರಾಜತಾಂತ್ರಿಕ ಹಾಗೂ ಗಡಿ ಉದ್ವಿಗ್ನತೆ ಅಪಾಯಕಾರಿ ಮಟ್ಟಕ್ಕೆ ತಲುಪಿದ್ದು, ದಕ್ಷಿಣ ಏಷ್ಯಾ ಭದ್ರತೆಗೆ ದೊಡ್ಡ ಸವಾಲಾಗಿದೆ.

ಪಾಕ್-ಅಫ್ಘಾನ್ ಗಡಿಯಲ್ಲಿ ಭೀಕರ ಸೇನಾ ದಾಳಿ, ಉದ್ವಿಗ್ನತೆ: 35 ನಾಗರಿಕರ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 29, 2026 | 10:26 AM

Share

ಮುಖ್ಯಾಂಶಗಳು

  • ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ್ ಗಡಿ ಪ್ರದೇಶದಲ್ಲಿ ಹಿಂಸಾಚಾರ
  • ಮಕ್ಕಳು, ವೃದ್ಧರು ಸೇರಿದಂತೆ 35 ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ
  • 'ಪಾಕಿಸ್ತಾನ ರೇಂಜರ್ಸ್' ಪ್ರಾದೇಶಿಕ ಪ್ರಧಾನ ಕಚೇರಿಯ ಮೇಲೆ ಭೀಕರ ಭಯೋತ್ಪಾದಕ ದಾಳಿ

ಕಾಬೂಲ್, ಜೂ.29: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ್ ಗಡಿ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಭದ್ರತಾ ಪಡೆಗಳು ನಡೆಸಿದ ಭೀಕರ ಭೂ ಕಾರ್ಯಾಚರಣೆಯಲ್ಲಿ ಮಕ್ಕಳು, ವೃದ್ಧರು ಸೇರಿದಂತೆ 35 ಕ್ಕೂ ಹೆಚ್ಚು ನಾಗರಿಕರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಇಸ್ಲಾಮಾಬಾದ್ ಮತ್ತು ಕಾಬೂಲ್ ನಡುವಿನ ರಾಜತಾಂತ್ರಿಕ ಹಾಗೂ ಗಡಿ ಉದ್ವಿಗ್ನತೆ ಅತ್ಯಂತ ಗಂಭೀರ ಹಂತಕ್ಕೆ ತಲುಪಿದೆ.

ಇತ್ತೀಚೆಗಷ್ಟೇ ಪಾಕಿಸ್ತಾನದ ವಾಣಿಜ್ಯ ನಗರಿ ಕರಾಚಿಯಲ್ಲಿರುವ ‘ಪಾಕಿಸ್ತಾನ ರೇಂಜರ್ಸ್’ ಪ್ರಾದೇಶಿಕ ಪ್ರಧಾನ ಕಚೇರಿಯ ಮೇಲೆ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿಯನ್ನು ಅಫ್ಘಾನಿಸ್ತಾನ ಮೂಲದ ಉಗ್ರಗಾಮಿಗಳೇ ಮಾಡಿದ್ದಾರೆ ಎಂದು ಪಾಕಿಸ್ತಾನ ಸರ್ಕಾರ ಗಂಭೀರವಾಗಿ ಆರೋಪಿಸಿತ್ತು. ಈ ಉಗ್ರರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಭದ್ರತಾ ಪಡೆಗಳು ಅಫ್ಘಾನ್ ಗಡಿಯುದ್ದಕ್ಕೂ ಬೃಹತ್ ಮತ್ತು ಕಟ್ಟುನಿಟ್ಟಿನ ಭೂ ಕಾರ್ಯಾಚರಣೆಯನ್ನು ಕೈಗೊಂಡಿದ್ದವು.

ಈ ಕಾರ್ಯಾಚರಣೆಯ ವೇಳೆ ಗಡಿ ಭಾಗದಲ್ಲಿ ಪಾಕ್ ಪಡೆಗಳು ನಡೆಸಿದ ಗುಂಡಿನ ದಾಳಿಗಳಿಗೆ ಸಿಲುಕಿ 35 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತರ ಪೈಕಿ ಹೆಚ್ಚಿನವರು ಯಾವುದೇ ತಪ್ಪು ಮಾಡದ ಅಮಾಯಕ ಮಕ್ಕಳು ಮತ್ತು ವೃದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ದಾಳಿಯನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನ ಸೇನೆ, ತಾನು ನಡೆಸಿದ ಕಾರ್ಯಾಚರಣೆಯಲ್ಲಿ ಗಡಿಯಾಚೆಗಿನ ಭದ್ರತೆಗೆ ಭಂಗ ತರುತ್ತಿದ್ದ 35 ಮಂದಿಯನ್ನು ಹತ್ಯೆ ಮಾಡಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ.

ಇದನ್ನೂ ಓದಿ: ಪತ್ನಿ ಬಿಟ್ಟು ಹೋಗಿದ್ದಕ್ಕೆ ಇಡೀ ಪ್ರಪಂಚದ ಮೇಲೆ ಸೇಡು: ಮುಂಬೈನಲ್ಲಿ 15 ಸಾವಿರ ಜನರನ್ನು ಮುಗಿಸಲು ಇಲಿ ವಿಷದಿಂದಲೇ ಮಾತ್ರೆ ತಯಾರಿಸಿದ್ದ ಸೈಕೋ

ಈ ಇತ್ತೀಚಿನ ಬೆಳವಣಿಗೆಯು ಗಡಿಯಾಚೆಗಿನ ಹಿಂಸಾಚಾರವನ್ನು ಮತ್ತಷ್ಟು ತೀವ್ರಗೊಳಿಸಿದೆ. ಅಫ್ಘಾನಿಸ್ತಾನದ ಆಡಳಿತವು ತನ್ನ ನಾಗರಿಕರ ಸಾವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗಡಿಯಲ್ಲಿ ಸೇನಾ ಪಡೆಗಳನ್ನು ಜಮಾಯಿಸುತ್ತಿದೆ. ಎರಡು ನೆರೆ ರಾಷ್ಟ್ರಗಳ ನಡುವೆ ಉಂಟಾಗಿರುವ ಈ ಉದ್ವಿಗ್ನತೆಯು ದಕ್ಷಿಣ ಏಷ್ಯಾದ ಭದ್ರತೆಗೆ ಹೊಸ ಸವಾಲನ್ನು ತಂದೊಡ್ಡಿದ್ದು, ಗಡಿಯುದ್ದಕ್ಕೂ ಹೈ ಅಲರ್ಟ್ ಘೋಷಿಸಲಾಗಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ